AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 3 ಬರುತ್ತೆ, ಸ್ಕ್ರಿಪ್ಟ್​ ಸಿದ್ಧವಾಗಿದೆ’: ಅಪ್​ಡೇಟ್​ ನೀಡಿದ ಪ್ರಶಾಂತ್​ ನೀಲ್​

ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್​ ನೀಲ್​ ಅವರು ‘ಸಲಾರ್​ 2’ ಸಿನಿಮಾದ ಕೆಲಸಗಳ ಕಡೆಗೆ ಗಮನ ಹರಿಸುತ್ತಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು ಬೇರೆ ಬೇರೆ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಈ ಮೂವರು ಒಂದಾಗಿ ‘ಕೆಜಿಎಫ್​ 3’ ಸಿನಿಮಾ ಮಾಡುವುದು ಯಾವಾಗ ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.

‘ಕೆಜಿಎಫ್​ 3 ಬರುತ್ತೆ, ಸ್ಕ್ರಿಪ್ಟ್​ ಸಿದ್ಧವಾಗಿದೆ’: ಅಪ್​ಡೇಟ್​ ನೀಡಿದ ಪ್ರಶಾಂತ್​ ನೀಲ್​
ಪ್ರಶಾಂತ್​ ನೀಲ್​, ಯಶ್​
ಮದನ್​ ಕುಮಾರ್​
|

Updated on: May 08, 2024 | 6:21 PM

Share

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣ ಆದ ‘ಕೆಜಿಎಫ್​: ಚಾಪ್ಟರ್​ 1’ ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳು ಕನ್ನಡ ಚಿತ್ರರಂಗಕ್ಕೆ ಹೊಸ ಮೆರುಗು ತಂದುಕೊಟ್ಟವು. ಈ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಪ್ರಶಾಂತ್​ ನೀಲ್​ (Prashanth Neel) ಅವರ ಖ್ಯಾತಿ ದೇಶಾದ್ಯಂತ ಹಬ್ಬಿತು. ನಟ ಯಶ್​ (Yash) ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಹೊರಹೊಮ್ಮಿದರು. ಈಗ ‘ಕೆಜಿಎಫ್​ 3’ (KGF 3) ಸಿನಿಮಾ ಬಗ್ಗೆ ಒಂದು ಅಪ್​ಡೇಟ್​ ಸಿಕ್ಕಿದೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್​ ನೀಲ್​ ಅವರು ಈ ಬಗ್ಗೆ ಮಾತನಾಡಿದ್ದಾರೆ. ಆ ಕುರಿತು ಪಿಂಕ್​ವಿಲ್ಲಾ ವರದಿ ಪ್ರಕಟ ಮಾಡಿದೆ.

‘ಕೆಜಿಎಫ್​ 3 ಸಿನಿಮಾ ಖಂಡಿತಾ ಆಗುತ್ತದೆ. ಅದರ ಸ್ಕ್ರಿಪ್ಟ್​ ಮಾಡಲಾಗಿದೆ. ಸ್ಕ್ರಿಪ್ಟ್​ ಬರೆದಿರಲಿಲ್ಲ ಎಂದಿದ್ದರೆ ಕೆಜಿಎಫ್​ 2ನಲ್ಲಿ ಅದನ್ನು ಹಾಕುತ್ತಿರಲಿಲ್ಲ. ನಾವು ಕೆಜಿಎಫ್​ ಪಾರ್ಟ್​ 3 ಮಾಡುತ್ತೇವೆ ಎಂಬುದು ಕೊನೆಗೆ ಎಲ್ಲರಿಗೂ ತಿಳಿದಿತ್ತು’ ಎಂದು ಪ್ರಶಾಂತ್​ ನೀಲ್​ ಹೇಳಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 1’ ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳು ಸೂಪರ್​ ಹಿಟ್​ ಆಗಿದ್ದರಿಂದ 3ನೇ ಪಾರ್ಟ್​ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ.

ಅಷ್ಟಕ್ಕೂ ‘ಕೆಜಿಎಫ್​ 3’ ಸಿನಿಮಾ ಸೆಟ್ಟೇರುವುದು ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಈಗ ಪ್ರಶಾಂತ್​ ನೀಲ್ ಅವರು ‘ಸಲಾರ್​ 2’ ಸಿನಿಮಾದ ಕೆಲಸಗಳತ್ತ ಗಮನ ಹರಿಸಿದ್ದಾರೆ. ‘ರಾಕಿಂಗ್​ ಸ್ಟಾರ್​’ ಯಶ್​ ಅವರು ‘ಟಾಕ್ಸಿಕ್​’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್​’ ಕೂಡ ಹಲವು ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದೆ. ಸೂಕ್ತ ಸಮಯಲ್ಲಿ ಈ ಮೂವರೂ ಒಂದಾಗಬೇಕಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್​ ಜೊತೆ ನಟಿಸ್ತಾರಾ ನಯನತಾರಾ?

ಪ್ರಶಾಂತ್​ ನೀಲ್​ ಅವರಿಗೆ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ‘ಸಲಾರ್​ 2’ ಮುಗಿದ ಬಳಿಕ ಅವರು ಜೂನಿಯರ್​ ಎನ್​ಟಿಆರ್​ ಜೊತೆಗೆ ಸಿನಿಮಾ ಮಾಡಬೇಕಿದೆ. ಇತ್ತೀಚೆಗೆ ಅವರು ವಿಜಯ್​ ದೇವರಕೊಂಡ ನಿವಾಸಕ್ಕೆ ಭೇಟಿ ನೀಡಿದ್ದರು. ಆ ಭೇಟಿಯ ಉದ್ದೇಶ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಹೊಸ ಸಿನಿಮಾ ಕುರಿತು ಮಾತುಕತೆ ಮಾಡಲು ಅವರು ಅಲ್ಲಿಗೆ ಹೋಗಿರಬಹುದು ಎಂದು ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!