AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagheera Movie: ನೆರವೇರಿತು ‘ಬಘೀರಾ’ ಮುಹೂರ್ತ; ಪ್ರಶಾಂತ್ ನೀಲ್ ಕತೆಗೆ ಶ್ರೀಮುರುಳಿ ನಾಯಕ

Prashanth Neel | Sriimurali: ಪ್ರಶಾಂತ್ ನೀಲ್ ಕತೆ ಬರೆದಿರುವ ‘ಬಘೀರಾ’ ಚಿತ್ರದ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ಡಾ.ಸೂರಿ ನಿರ್ದೇಶನ ಮಾಡುತ್ತಿದ್ದು, ಶ್ರೀಮುರುಳಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ಬ್ಯಾನರ್​ನಲ್ಲಿ ವಿಜಯ್ ಕಿರಗಂದೂರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Bagheera Movie: ನೆರವೇರಿತು ‘ಬಘೀರಾ’ ಮುಹೂರ್ತ; ಪ್ರಶಾಂತ್ ನೀಲ್ ಕತೆಗೆ ಶ್ರೀಮುರುಳಿ ನಾಯಕ
‘ಬಘೀರಾ’ ಚಿತ್ರದ ಮುಹೂರ್ತದ ಸಂದರ್ಭImage Credit source: Hombale Films/ Twitter
TV9 Web
| Edited By: |

Updated on:May 20, 2022 | 12:55 PM

Share

ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ‘ಕೆಜಿಎಫ್ ಚಾಪ್ಟರ್ 2’ (KGF Chapter 2) ಯಶಸ್ಸಿನಲ್ಲಿದೆ. ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ಈ ಚಿತ್ರ ಒಟ್ಟಾರೆ 1200 ಕೋಟಿಗೂ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಹಲವು ದಾಖಲೆ ಬರೆದಿರುವ ಈ ಚಿತ್ರದ ಗೆಲುವಿನ ಬೆನ್ನಲ್ಲೇ ಹೊಂಬಾಳೆ ಫಿಲ್ಮ್ಸ್​​ ನಿರ್ಮಾಣದ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ಶ್ರೀಮುರುಳಿ (Sriimurali) ನಟಿಸುತ್ತಿರುವ ‘ಬಘೀರಾ’ (Bagheera Movie) ಚಿತ್ರ ಇಂದು (ಮೇ.20) ಸೆಟ್ಟೇರಿದ್ದು, ಇದಕ್ಕೆ ಪ್ರಶಾಂತ್ ನೀಲ್ ಚಿತ್ರಕತೆ ಬರೆದಿದ್ದಾರೆ. ‘ಉಗ್ರಂ’ ನಂತರ ಪ್ರಶಾಂತ್ ನೀಲ್ ಹಾಗೂ ಶ್ರೀಮುರುಳಿ ಕಾಂಬಿನೇಷನ್ ಮತ್ತೆ ಒಂದಾಗುತ್ತಿರುವುದು ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ. ಡಾ.ಸೂರಿ ‘ಬಘೀರಾ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಮುಹೂರ್ತದ ಫೋಟೋಗಳನ್ನು ಹೊಂಬಾಳೆ ಫಿಲ್ಮ್ಸ್​ ಹಂಚಿಕೊಂಡಿದೆ.

ಹೊಂಬಾಳೆ ಫಿಲ್ಮ್ಸ್​ ಹಂಚಿಕೊಂಡ ಟ್ವೀಟ್:

ಇದನ್ನೂ ಓದಿ
Image
Hina Khan Cannes Look : ಕಾನ್ ಚಿತ್ರೋತ್ಸವ; ಬೋಲ್ಡ್​​ ಅವತಾರದಲ್ಲಿ ಕಾಣಿಸಿಕೊಂಡ ಹಿನಾ ಖಾನ್​
Image
Andrea Kevichusa: ‘ಅನೇಕ್’ ಚಿತ್ರದಲ್ಲಿ ಆಂಡ್ರಿಯಾ ಕೆವಿಚುಸಾ; ನಾಗಾಲ್ಯಾಂಡ್​ನ ಬೆಡಗಿಗೆ ಬಾಲಿವುಡ್​ನಲ್ಲಿ ಸಿಕ್ಕ ಸ್ವಾಗತ ಹೇಗಿತ್ತು?
Image
Jr NTR Birthday: ಟಾಲಿವುಡ್ ನಟನಾದರೂ ಕನ್ನಡದ ಮೇಲೆ ವಿಶೇಷ ಪ್ರೀತಿ ಹೊಂದಿರುವ ಜ್ಯೂ. ಎನ್‌ಟಿಆರ್
Image
ಲೈವ್​ನಲ್ಲಿ ಹೆಂಡತಿಗೆ ಕಿಸ್ ಮಾಡಿದ ಬಿಗ್ ಬಾಸ್ ಸ್ಪರ್ಧಿ; ಸಿಟ್ಟಾದ ಪತ್ನಿ, ವೈರಲ್ ಆಯ್ತು ವಿಡಿಯೋ

ಇದನ್ನೂ ಓದಿ: ಟಾಲಿವುಡ್ ನಟನಾದರೂ ಕನ್ನಡದ ಮೇಲೆ ವಿಶೇಷ ಪ್ರೀತಿ ಹೊಂದಿರುವ ಜ್ಯೂ. ಎನ್‌ಟಿಆರ್

‘ಬಘೀರಾ’ ಚಿತ್ರಕ್ಕೆ ಶುಭಹಾರೈಸಿರುವ ಪ್ರಶಾಂತ್ ನೀಲ್, ಈ ಚಿತ್ರ ತಮ್ಮ ನೆಚ್ಚಿನ ಚಿತ್ರಗಳಲ್ಲಿ ಒಂದಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಚಿತ್ರವನ್ನು ಅನೌನ್ಸ್ ಮಾಡಿದ ಸಂದರ್ಭದಲ್ಲಿ ಶ್ರೀಮುರುಳಿ ಲುಕ್​ ತೆರೆದಿಡುವ ಮೊದಲ ಪೋಸ್ಟರ್​​ ಹಂಚಿಕೊಳ್ಳಲಾಗಿತ್ತು. ‘ಇಡೀ ಸಮಾಜವೇ ಕಾಡಾದಾಗ ಓರ್ವ ನ್ಯಾಯಕ್ಕಾಗಿ ಹೋರಾಡಲಿದ್ದಾನೆ’ ಎಂದು ಅದಕ್ಕೆ ಕ್ಯಾಪ್ಶನ್ ನೀಡಲಾಗಿತ್ತು. ಆ ಪೋಸ್ಟರ್ ಇಲ್ಲಿದೆ.

ಹಲವು ಚಿತ್ರಗಳ ನಿರ್ಮಾಣದಲ್ಲಿ ಬ್ಯುಸಿಯಾದ ‘ಹೊಂಬಾಳೆ ಫಿಲ್ಮ್ಸ್​’

ಪ್ರಸ್ತುತ ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಅನೇಕ ಸಿನಿಮಾಗಳು ತಯಾರಾಗುತ್ತಿವೆ. ಪ್ರಭಾಸ್​ ನಟನೆಯ ‘ಸಲಾರ್​’, ರಿಷಬ್​​ ಶೆಟ್ಟಿ ನಿರ್ದೇಶನದ ‘ಕಾಂತಾರಾ’, ಜಗ್ಗೇಶ್​ ನಟನೆಯ ‘ರಾಘವೇಂದ್ರ ಸ್ಟೋರ್ಸ್​’ ಮೊದಲಾದ ಸಿನಿಮಾಗಳು ತಯಾರಾಗುತ್ತಿವೆ. ಇತ್ತೀಚೆಗೆ ಯುವರಾಜ್​ಕುಮಾರ್- ಸಂತೋಷ್ ಆನಂದ್​ರಾಮ್ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿತ್ತು. ಇವುಗಳಲ್ಲದೇ ‘ಸೂರರೈ ಪೊಟ್ರು’ ನಿರ್ದೇಶಕಿ ಸುಧಾ ಕೊಂಗರಾ ಹಾಗೂ ಹೊಂಬಾಳೆ ಫಿಲ್ಮ್ಸ್​ ಕಾಂಬಿನೇಷನ್​ನಲ್ಲಿ ಚಿತ್ರವೊಂದು ಮೂಡಿಬರಲಿದೆ. ಅದು ನೈಜ ಘಟನೆಗಳನ್ನಾಧರಿಸಿದೆ.

ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Fri, 20 May 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್