AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagheera Movie: ನೆರವೇರಿತು ‘ಬಘೀರಾ’ ಮುಹೂರ್ತ; ಪ್ರಶಾಂತ್ ನೀಲ್ ಕತೆಗೆ ಶ್ರೀಮುರುಳಿ ನಾಯಕ

Prashanth Neel | Sriimurali: ಪ್ರಶಾಂತ್ ನೀಲ್ ಕತೆ ಬರೆದಿರುವ ‘ಬಘೀರಾ’ ಚಿತ್ರದ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ಡಾ.ಸೂರಿ ನಿರ್ದೇಶನ ಮಾಡುತ್ತಿದ್ದು, ಶ್ರೀಮುರುಳಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ಬ್ಯಾನರ್​ನಲ್ಲಿ ವಿಜಯ್ ಕಿರಗಂದೂರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Bagheera Movie: ನೆರವೇರಿತು ‘ಬಘೀರಾ’ ಮುಹೂರ್ತ; ಪ್ರಶಾಂತ್ ನೀಲ್ ಕತೆಗೆ ಶ್ರೀಮುರುಳಿ ನಾಯಕ
‘ಬಘೀರಾ’ ಚಿತ್ರದ ಮುಹೂರ್ತದ ಸಂದರ್ಭImage Credit source: Hombale Films/ Twitter
TV9 Web
| Edited By: |

Updated on:May 20, 2022 | 12:55 PM

Share

ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ‘ಕೆಜಿಎಫ್ ಚಾಪ್ಟರ್ 2’ (KGF Chapter 2) ಯಶಸ್ಸಿನಲ್ಲಿದೆ. ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ಈ ಚಿತ್ರ ಒಟ್ಟಾರೆ 1200 ಕೋಟಿಗೂ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಹಲವು ದಾಖಲೆ ಬರೆದಿರುವ ಈ ಚಿತ್ರದ ಗೆಲುವಿನ ಬೆನ್ನಲ್ಲೇ ಹೊಂಬಾಳೆ ಫಿಲ್ಮ್ಸ್​​ ನಿರ್ಮಾಣದ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ಶ್ರೀಮುರುಳಿ (Sriimurali) ನಟಿಸುತ್ತಿರುವ ‘ಬಘೀರಾ’ (Bagheera Movie) ಚಿತ್ರ ಇಂದು (ಮೇ.20) ಸೆಟ್ಟೇರಿದ್ದು, ಇದಕ್ಕೆ ಪ್ರಶಾಂತ್ ನೀಲ್ ಚಿತ್ರಕತೆ ಬರೆದಿದ್ದಾರೆ. ‘ಉಗ್ರಂ’ ನಂತರ ಪ್ರಶಾಂತ್ ನೀಲ್ ಹಾಗೂ ಶ್ರೀಮುರುಳಿ ಕಾಂಬಿನೇಷನ್ ಮತ್ತೆ ಒಂದಾಗುತ್ತಿರುವುದು ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ. ಡಾ.ಸೂರಿ ‘ಬಘೀರಾ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಮುಹೂರ್ತದ ಫೋಟೋಗಳನ್ನು ಹೊಂಬಾಳೆ ಫಿಲ್ಮ್ಸ್​ ಹಂಚಿಕೊಂಡಿದೆ.

ಹೊಂಬಾಳೆ ಫಿಲ್ಮ್ಸ್​ ಹಂಚಿಕೊಂಡ ಟ್ವೀಟ್:

ಇದನ್ನೂ ಓದಿ
Image
Hina Khan Cannes Look : ಕಾನ್ ಚಿತ್ರೋತ್ಸವ; ಬೋಲ್ಡ್​​ ಅವತಾರದಲ್ಲಿ ಕಾಣಿಸಿಕೊಂಡ ಹಿನಾ ಖಾನ್​
Image
Andrea Kevichusa: ‘ಅನೇಕ್’ ಚಿತ್ರದಲ್ಲಿ ಆಂಡ್ರಿಯಾ ಕೆವಿಚುಸಾ; ನಾಗಾಲ್ಯಾಂಡ್​ನ ಬೆಡಗಿಗೆ ಬಾಲಿವುಡ್​ನಲ್ಲಿ ಸಿಕ್ಕ ಸ್ವಾಗತ ಹೇಗಿತ್ತು?
Image
Jr NTR Birthday: ಟಾಲಿವುಡ್ ನಟನಾದರೂ ಕನ್ನಡದ ಮೇಲೆ ವಿಶೇಷ ಪ್ರೀತಿ ಹೊಂದಿರುವ ಜ್ಯೂ. ಎನ್‌ಟಿಆರ್
Image
ಲೈವ್​ನಲ್ಲಿ ಹೆಂಡತಿಗೆ ಕಿಸ್ ಮಾಡಿದ ಬಿಗ್ ಬಾಸ್ ಸ್ಪರ್ಧಿ; ಸಿಟ್ಟಾದ ಪತ್ನಿ, ವೈರಲ್ ಆಯ್ತು ವಿಡಿಯೋ

ಇದನ್ನೂ ಓದಿ: ಟಾಲಿವುಡ್ ನಟನಾದರೂ ಕನ್ನಡದ ಮೇಲೆ ವಿಶೇಷ ಪ್ರೀತಿ ಹೊಂದಿರುವ ಜ್ಯೂ. ಎನ್‌ಟಿಆರ್

‘ಬಘೀರಾ’ ಚಿತ್ರಕ್ಕೆ ಶುಭಹಾರೈಸಿರುವ ಪ್ರಶಾಂತ್ ನೀಲ್, ಈ ಚಿತ್ರ ತಮ್ಮ ನೆಚ್ಚಿನ ಚಿತ್ರಗಳಲ್ಲಿ ಒಂದಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಚಿತ್ರವನ್ನು ಅನೌನ್ಸ್ ಮಾಡಿದ ಸಂದರ್ಭದಲ್ಲಿ ಶ್ರೀಮುರುಳಿ ಲುಕ್​ ತೆರೆದಿಡುವ ಮೊದಲ ಪೋಸ್ಟರ್​​ ಹಂಚಿಕೊಳ್ಳಲಾಗಿತ್ತು. ‘ಇಡೀ ಸಮಾಜವೇ ಕಾಡಾದಾಗ ಓರ್ವ ನ್ಯಾಯಕ್ಕಾಗಿ ಹೋರಾಡಲಿದ್ದಾನೆ’ ಎಂದು ಅದಕ್ಕೆ ಕ್ಯಾಪ್ಶನ್ ನೀಡಲಾಗಿತ್ತು. ಆ ಪೋಸ್ಟರ್ ಇಲ್ಲಿದೆ.

ಹಲವು ಚಿತ್ರಗಳ ನಿರ್ಮಾಣದಲ್ಲಿ ಬ್ಯುಸಿಯಾದ ‘ಹೊಂಬಾಳೆ ಫಿಲ್ಮ್ಸ್​’

ಪ್ರಸ್ತುತ ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಅನೇಕ ಸಿನಿಮಾಗಳು ತಯಾರಾಗುತ್ತಿವೆ. ಪ್ರಭಾಸ್​ ನಟನೆಯ ‘ಸಲಾರ್​’, ರಿಷಬ್​​ ಶೆಟ್ಟಿ ನಿರ್ದೇಶನದ ‘ಕಾಂತಾರಾ’, ಜಗ್ಗೇಶ್​ ನಟನೆಯ ‘ರಾಘವೇಂದ್ರ ಸ್ಟೋರ್ಸ್​’ ಮೊದಲಾದ ಸಿನಿಮಾಗಳು ತಯಾರಾಗುತ್ತಿವೆ. ಇತ್ತೀಚೆಗೆ ಯುವರಾಜ್​ಕುಮಾರ್- ಸಂತೋಷ್ ಆನಂದ್​ರಾಮ್ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿತ್ತು. ಇವುಗಳಲ್ಲದೇ ‘ಸೂರರೈ ಪೊಟ್ರು’ ನಿರ್ದೇಶಕಿ ಸುಧಾ ಕೊಂಗರಾ ಹಾಗೂ ಹೊಂಬಾಳೆ ಫಿಲ್ಮ್ಸ್​ ಕಾಂಬಿನೇಷನ್​ನಲ್ಲಿ ಚಿತ್ರವೊಂದು ಮೂಡಿಬರಲಿದೆ. ಅದು ನೈಜ ಘಟನೆಗಳನ್ನಾಧರಿಸಿದೆ.

ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Fri, 20 May 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ