AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

ಕೆಜಿಎಫ್​-2 ಪ್ಯಾನ್​ ಇಂಡಿಯಾ ಸಿನಿಮಾ. ಕೆಜಿಎಫ್​ ಚಾಪ್ಟರ್​-1 ಗಿಂತಲೂ ಅದ್ದೂರಿಯಾಗಿ ಈ ಚಿತ್ರ ಸಿದ್ಧಗೊಳ್ಳುತ್ತದೆ. ಸಲಾರ್​ ಸಿನಿಮಾ ಕೂಡ ಅಷ್ಟೆ. ಸುಮಾರು 150 ಕೋಟಿ ರೂ ಬಜೆಟ್​ನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ.

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​
ಪ್ರಶಾಂತ್​ ನೀಲ್​ ಮತ್ತು ರವಿ ಬಸ್ರೂರ್​
ರಾಜೇಶ್ ದುಗ್ಗುಮನೆ
|

Updated on:Apr 15, 2021 | 6:41 PM

Share

ಯಶ್​ ನಟನೆಯ ಕೆಜಿಎಫ್​-2 ಹಾಗೂ ಪ್ರಭಾಸ್​ ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಸಲಾರ್ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನವಿದೆ. ಕೆಜಿಎಫ್​-2 ಸಿನಿಮಾ ಶೂಟಿಂಗ್​ ಈಗಾಗಲೇ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಮತ್ತೊಂದೆಡೆ ಸಲಾರ್ ಸಿನಿಮಾದ ಶೂಟಿಂಗ್​ ಕೂಡ ನಡೆಯುತ್ತಿದೆ. ಹೀಗಿರುವಾಗಲೇ ಪ್ರಶಾಂತ್​ ನೀಲ್​ ಎರಡೂ ಸಿನಿಮಾಗಳಿಗೆ ಇರುವ ಲಿಂಕ್​ ಬಗ್ಗೆ ಹೇಳಿಕೊಂಡಿದ್ದಾರೆ. ಕೆಜಿಎಫ್​-2 ಪ್ಯಾನ್​ ಇಂಡಿಯಾ ಸಿನಿಮಾ. ಕೆಜಿಎಫ್​ ಚಾಪ್ಟರ್​-1 ಗಿಂತಲೂ ಅದ್ದೂರಿಯಾಗಿ ಈ ಚಿತ್ರ ಸಿದ್ಧಗೊಳ್ಳುತ್ತದೆ. ಸಲಾರ್​ ಸಿನಿಮಾ ಕೂಡ ಅಷ್ಟೆ. ಸುಮಾರು 150 ಕೋಟಿ ರೂ ಬಜೆಟ್​ನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ. ಈ ಎರಡೂ ಸಿನಿಮಾಗೂ ಒಂದು ಸಾಮ್ಯತೆ ಇದೆಯಂತೆ. ಅದುವೇ ರವಿ ಬಸ್ರೂರ್ ಸ್ಟುಡಿಯೋ​.

ಕೆಜಿಎಫ್​-1 ಚಿತ್ರಕ್ಕೆ ರವಿ ಬಸ್ರೂರ್​ ಸಂಗೀತ ಸಂಯೋಜನೆ ಹಾಗೂ ಹಿನ್ನೆಲೆ ಸಂಗೀತ ನೀಡಿದ್ದರು. ಈ ಚಿತ್ರದ ಬಿಜಿಎಂ ಎಲ್ಲರಿಗೂ ಇಷ್ಟವಾಗಿತ್ತು. ಈಗ ಸಿದ್ಧವಾಗುತ್ತಿರುವ ಕೆಜಿಎಫ್​-2 ಚಿತ್ರದ ಮೇಲೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇನ್ನು, ಸಲಾರ್​ ಸಿನಿಮಾಗೂ ರವಿ ಬಸ್ರೂರ್​ ಸಂಗೀತ ಸಂಯೋಜನೆ ಇದ್ದು, ಈ ಚಿತ್ರದ ಮೇಲೂ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಎರಡು ಸಿನಿಮಾಗಳ ಸಂಗೀತ ಸಂಯೋಜನೆ ಕೆಲಸಗಳು ರವಿ ಬಸ್ರೂರ್​ ಸ್ಟುಡಿಯೋದಲ್ಲಿ ನಡೆಯುತ್ತಿದೆ.

ಈ ಬಗ್ಗೆ ಪ್ರಶಾಂತ್​ ನೀಲ್​ ಬರೆದುಕೊಂಡಿದ್ದಾರೆ. ಕೆಜಿಎಫ್​-2 ಹಾಗೂ ಸಲಾರ್​ ಒಂದು ಕಡೆ ಸಂಧಿಸುತ್ತವೆ ಎಂದಾದರೆ ಅದು ರವಿ ಬಸ್ರೂರ್​ ಸ್ಟುಡಿಯೋದಲ್ಲಿ ಮಾತ್ರ ಎಂದು ಪ್ರಶಾಂತ್​ ನೀಲ್​ ಬರೆದುಕೊಂಡಿದ್ದಾರೆ. ಈ ಮೂಲಕ ಎರಡೂ ಸಿನಿಮಾಗಳ ಸಂಗೀತ ಸಂಯೋಜನೆ ಕೆಲಸಗಳು ಒಂದೇ ಕಡೆ ನಡೆಯುತ್ತಿರುವ ಬಗ್ಗೆ ಪ್ರಶಾಂತ್​ ನೀಲ್​ ಮಾಹಿತಿ ಈಡಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ನೀಲ್​ ಜೊತೆ ದಳಪತಿ ವಿಜಯ್​ ಹೊಸ ಸಿನಿಮಾ? ಕೆಜಿಎಫ್​ ಡೈರೆಕ್ಟರ್​ ಬಗ್ಗೆ ಬಿಗ್​ ನ್ಯೂಸ್​

Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

Published On - 6:40 pm, Thu, 15 April 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?