AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

ಕೆಜಿಎಫ್​-2 ಪ್ಯಾನ್​ ಇಂಡಿಯಾ ಸಿನಿಮಾ. ಕೆಜಿಎಫ್​ ಚಾಪ್ಟರ್​-1 ಗಿಂತಲೂ ಅದ್ದೂರಿಯಾಗಿ ಈ ಚಿತ್ರ ಸಿದ್ಧಗೊಳ್ಳುತ್ತದೆ. ಸಲಾರ್​ ಸಿನಿಮಾ ಕೂಡ ಅಷ್ಟೆ. ಸುಮಾರು 150 ಕೋಟಿ ರೂ ಬಜೆಟ್​ನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ.

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​
ಪ್ರಶಾಂತ್​ ನೀಲ್​ ಮತ್ತು ರವಿ ಬಸ್ರೂರ್​
ರಾಜೇಶ್ ದುಗ್ಗುಮನೆ
|

Updated on:Apr 15, 2021 | 6:41 PM

Share

ಯಶ್​ ನಟನೆಯ ಕೆಜಿಎಫ್​-2 ಹಾಗೂ ಪ್ರಭಾಸ್​ ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಸಲಾರ್ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನವಿದೆ. ಕೆಜಿಎಫ್​-2 ಸಿನಿಮಾ ಶೂಟಿಂಗ್​ ಈಗಾಗಲೇ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಮತ್ತೊಂದೆಡೆ ಸಲಾರ್ ಸಿನಿಮಾದ ಶೂಟಿಂಗ್​ ಕೂಡ ನಡೆಯುತ್ತಿದೆ. ಹೀಗಿರುವಾಗಲೇ ಪ್ರಶಾಂತ್​ ನೀಲ್​ ಎರಡೂ ಸಿನಿಮಾಗಳಿಗೆ ಇರುವ ಲಿಂಕ್​ ಬಗ್ಗೆ ಹೇಳಿಕೊಂಡಿದ್ದಾರೆ. ಕೆಜಿಎಫ್​-2 ಪ್ಯಾನ್​ ಇಂಡಿಯಾ ಸಿನಿಮಾ. ಕೆಜಿಎಫ್​ ಚಾಪ್ಟರ್​-1 ಗಿಂತಲೂ ಅದ್ದೂರಿಯಾಗಿ ಈ ಚಿತ್ರ ಸಿದ್ಧಗೊಳ್ಳುತ್ತದೆ. ಸಲಾರ್​ ಸಿನಿಮಾ ಕೂಡ ಅಷ್ಟೆ. ಸುಮಾರು 150 ಕೋಟಿ ರೂ ಬಜೆಟ್​ನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ. ಈ ಎರಡೂ ಸಿನಿಮಾಗೂ ಒಂದು ಸಾಮ್ಯತೆ ಇದೆಯಂತೆ. ಅದುವೇ ರವಿ ಬಸ್ರೂರ್ ಸ್ಟುಡಿಯೋ​.

ಕೆಜಿಎಫ್​-1 ಚಿತ್ರಕ್ಕೆ ರವಿ ಬಸ್ರೂರ್​ ಸಂಗೀತ ಸಂಯೋಜನೆ ಹಾಗೂ ಹಿನ್ನೆಲೆ ಸಂಗೀತ ನೀಡಿದ್ದರು. ಈ ಚಿತ್ರದ ಬಿಜಿಎಂ ಎಲ್ಲರಿಗೂ ಇಷ್ಟವಾಗಿತ್ತು. ಈಗ ಸಿದ್ಧವಾಗುತ್ತಿರುವ ಕೆಜಿಎಫ್​-2 ಚಿತ್ರದ ಮೇಲೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇನ್ನು, ಸಲಾರ್​ ಸಿನಿಮಾಗೂ ರವಿ ಬಸ್ರೂರ್​ ಸಂಗೀತ ಸಂಯೋಜನೆ ಇದ್ದು, ಈ ಚಿತ್ರದ ಮೇಲೂ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಎರಡು ಸಿನಿಮಾಗಳ ಸಂಗೀತ ಸಂಯೋಜನೆ ಕೆಲಸಗಳು ರವಿ ಬಸ್ರೂರ್​ ಸ್ಟುಡಿಯೋದಲ್ಲಿ ನಡೆಯುತ್ತಿದೆ.

ಈ ಬಗ್ಗೆ ಪ್ರಶಾಂತ್​ ನೀಲ್​ ಬರೆದುಕೊಂಡಿದ್ದಾರೆ. ಕೆಜಿಎಫ್​-2 ಹಾಗೂ ಸಲಾರ್​ ಒಂದು ಕಡೆ ಸಂಧಿಸುತ್ತವೆ ಎಂದಾದರೆ ಅದು ರವಿ ಬಸ್ರೂರ್​ ಸ್ಟುಡಿಯೋದಲ್ಲಿ ಮಾತ್ರ ಎಂದು ಪ್ರಶಾಂತ್​ ನೀಲ್​ ಬರೆದುಕೊಂಡಿದ್ದಾರೆ. ಈ ಮೂಲಕ ಎರಡೂ ಸಿನಿಮಾಗಳ ಸಂಗೀತ ಸಂಯೋಜನೆ ಕೆಲಸಗಳು ಒಂದೇ ಕಡೆ ನಡೆಯುತ್ತಿರುವ ಬಗ್ಗೆ ಪ್ರಶಾಂತ್​ ನೀಲ್​ ಮಾಹಿತಿ ಈಡಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ನೀಲ್​ ಜೊತೆ ದಳಪತಿ ವಿಜಯ್​ ಹೊಸ ಸಿನಿಮಾ? ಕೆಜಿಎಫ್​ ಡೈರೆಕ್ಟರ್​ ಬಗ್ಗೆ ಬಿಗ್​ ನ್ಯೂಸ್​

Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

Published On - 6:40 pm, Thu, 15 April 21

Follow Us
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ