Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

ಕೆಜಿಎಫ್​-2 ಪ್ಯಾನ್​ ಇಂಡಿಯಾ ಸಿನಿಮಾ. ಕೆಜಿಎಫ್​ ಚಾಪ್ಟರ್​-1 ಗಿಂತಲೂ ಅದ್ದೂರಿಯಾಗಿ ಈ ಚಿತ್ರ ಸಿದ್ಧಗೊಳ್ಳುತ್ತದೆ. ಸಲಾರ್​ ಸಿನಿಮಾ ಕೂಡ ಅಷ್ಟೆ. ಸುಮಾರು 150 ಕೋಟಿ ರೂ ಬಜೆಟ್​ನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ.

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​
ಪ್ರಶಾಂತ್​ ನೀಲ್​ ಮತ್ತು ರವಿ ಬಸ್ರೂರ್​
Follow us
ರಾಜೇಶ್ ದುಗ್ಗುಮನೆ
|

Updated on:Apr 15, 2021 | 6:41 PM

ಯಶ್​ ನಟನೆಯ ಕೆಜಿಎಫ್​-2 ಹಾಗೂ ಪ್ರಭಾಸ್​ ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಸಲಾರ್ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನವಿದೆ. ಕೆಜಿಎಫ್​-2 ಸಿನಿಮಾ ಶೂಟಿಂಗ್​ ಈಗಾಗಲೇ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಮತ್ತೊಂದೆಡೆ ಸಲಾರ್ ಸಿನಿಮಾದ ಶೂಟಿಂಗ್​ ಕೂಡ ನಡೆಯುತ್ತಿದೆ. ಹೀಗಿರುವಾಗಲೇ ಪ್ರಶಾಂತ್​ ನೀಲ್​ ಎರಡೂ ಸಿನಿಮಾಗಳಿಗೆ ಇರುವ ಲಿಂಕ್​ ಬಗ್ಗೆ ಹೇಳಿಕೊಂಡಿದ್ದಾರೆ. ಕೆಜಿಎಫ್​-2 ಪ್ಯಾನ್​ ಇಂಡಿಯಾ ಸಿನಿಮಾ. ಕೆಜಿಎಫ್​ ಚಾಪ್ಟರ್​-1 ಗಿಂತಲೂ ಅದ್ದೂರಿಯಾಗಿ ಈ ಚಿತ್ರ ಸಿದ್ಧಗೊಳ್ಳುತ್ತದೆ. ಸಲಾರ್​ ಸಿನಿಮಾ ಕೂಡ ಅಷ್ಟೆ. ಸುಮಾರು 150 ಕೋಟಿ ರೂ ಬಜೆಟ್​ನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ. ಈ ಎರಡೂ ಸಿನಿಮಾಗೂ ಒಂದು ಸಾಮ್ಯತೆ ಇದೆಯಂತೆ. ಅದುವೇ ರವಿ ಬಸ್ರೂರ್ ಸ್ಟುಡಿಯೋ​.

ಕೆಜಿಎಫ್​-1 ಚಿತ್ರಕ್ಕೆ ರವಿ ಬಸ್ರೂರ್​ ಸಂಗೀತ ಸಂಯೋಜನೆ ಹಾಗೂ ಹಿನ್ನೆಲೆ ಸಂಗೀತ ನೀಡಿದ್ದರು. ಈ ಚಿತ್ರದ ಬಿಜಿಎಂ ಎಲ್ಲರಿಗೂ ಇಷ್ಟವಾಗಿತ್ತು. ಈಗ ಸಿದ್ಧವಾಗುತ್ತಿರುವ ಕೆಜಿಎಫ್​-2 ಚಿತ್ರದ ಮೇಲೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇನ್ನು, ಸಲಾರ್​ ಸಿನಿಮಾಗೂ ರವಿ ಬಸ್ರೂರ್​ ಸಂಗೀತ ಸಂಯೋಜನೆ ಇದ್ದು, ಈ ಚಿತ್ರದ ಮೇಲೂ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಎರಡು ಸಿನಿಮಾಗಳ ಸಂಗೀತ ಸಂಯೋಜನೆ ಕೆಲಸಗಳು ರವಿ ಬಸ್ರೂರ್​ ಸ್ಟುಡಿಯೋದಲ್ಲಿ ನಡೆಯುತ್ತಿದೆ.

ಈ ಬಗ್ಗೆ ಪ್ರಶಾಂತ್​ ನೀಲ್​ ಬರೆದುಕೊಂಡಿದ್ದಾರೆ. ಕೆಜಿಎಫ್​-2 ಹಾಗೂ ಸಲಾರ್​ ಒಂದು ಕಡೆ ಸಂಧಿಸುತ್ತವೆ ಎಂದಾದರೆ ಅದು ರವಿ ಬಸ್ರೂರ್​ ಸ್ಟುಡಿಯೋದಲ್ಲಿ ಮಾತ್ರ ಎಂದು ಪ್ರಶಾಂತ್​ ನೀಲ್​ ಬರೆದುಕೊಂಡಿದ್ದಾರೆ. ಈ ಮೂಲಕ ಎರಡೂ ಸಿನಿಮಾಗಳ ಸಂಗೀತ ಸಂಯೋಜನೆ ಕೆಲಸಗಳು ಒಂದೇ ಕಡೆ ನಡೆಯುತ್ತಿರುವ ಬಗ್ಗೆ ಪ್ರಶಾಂತ್​ ನೀಲ್​ ಮಾಹಿತಿ ಈಡಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ನೀಲ್​ ಜೊತೆ ದಳಪತಿ ವಿಜಯ್​ ಹೊಸ ಸಿನಿಮಾ? ಕೆಜಿಎಫ್​ ಡೈರೆಕ್ಟರ್​ ಬಗ್ಗೆ ಬಿಗ್​ ನ್ಯೂಸ್​

Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

Published On - 6:40 pm, Thu, 15 April 21

ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​