ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

ಕೆಜಿಎಫ್​-2 ಪ್ಯಾನ್​ ಇಂಡಿಯಾ ಸಿನಿಮಾ. ಕೆಜಿಎಫ್​ ಚಾಪ್ಟರ್​-1 ಗಿಂತಲೂ ಅದ್ದೂರಿಯಾಗಿ ಈ ಚಿತ್ರ ಸಿದ್ಧಗೊಳ್ಳುತ್ತದೆ. ಸಲಾರ್​ ಸಿನಿಮಾ ಕೂಡ ಅಷ್ಟೆ. ಸುಮಾರು 150 ಕೋಟಿ ರೂ ಬಜೆಟ್​ನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ.

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​
ಪ್ರಶಾಂತ್​ ನೀಲ್​ ಮತ್ತು ರವಿ ಬಸ್ರೂರ್​
Follow us
|

Updated on:Apr 15, 2021 | 6:41 PM

ಯಶ್​ ನಟನೆಯ ಕೆಜಿಎಫ್​-2 ಹಾಗೂ ಪ್ರಭಾಸ್​ ಮುಖ್ಯಭೂಮಿಕೆ ನಿರ್ವಹಿಸುತ್ತಿರುವ ಸಲಾರ್ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನವಿದೆ. ಕೆಜಿಎಫ್​-2 ಸಿನಿಮಾ ಶೂಟಿಂಗ್​ ಈಗಾಗಲೇ ಪೂರ್ಣಗೊಂಡಿದ್ದು, ಪೋಸ್ಟ್​ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಮತ್ತೊಂದೆಡೆ ಸಲಾರ್ ಸಿನಿಮಾದ ಶೂಟಿಂಗ್​ ಕೂಡ ನಡೆಯುತ್ತಿದೆ. ಹೀಗಿರುವಾಗಲೇ ಪ್ರಶಾಂತ್​ ನೀಲ್​ ಎರಡೂ ಸಿನಿಮಾಗಳಿಗೆ ಇರುವ ಲಿಂಕ್​ ಬಗ್ಗೆ ಹೇಳಿಕೊಂಡಿದ್ದಾರೆ. ಕೆಜಿಎಫ್​-2 ಪ್ಯಾನ್​ ಇಂಡಿಯಾ ಸಿನಿಮಾ. ಕೆಜಿಎಫ್​ ಚಾಪ್ಟರ್​-1 ಗಿಂತಲೂ ಅದ್ದೂರಿಯಾಗಿ ಈ ಚಿತ್ರ ಸಿದ್ಧಗೊಳ್ಳುತ್ತದೆ. ಸಲಾರ್​ ಸಿನಿಮಾ ಕೂಡ ಅಷ್ಟೆ. ಸುಮಾರು 150 ಕೋಟಿ ರೂ ಬಜೆಟ್​ನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ. ಈ ಎರಡೂ ಸಿನಿಮಾಗೂ ಒಂದು ಸಾಮ್ಯತೆ ಇದೆಯಂತೆ. ಅದುವೇ ರವಿ ಬಸ್ರೂರ್ ಸ್ಟುಡಿಯೋ​.

ಕೆಜಿಎಫ್​-1 ಚಿತ್ರಕ್ಕೆ ರವಿ ಬಸ್ರೂರ್​ ಸಂಗೀತ ಸಂಯೋಜನೆ ಹಾಗೂ ಹಿನ್ನೆಲೆ ಸಂಗೀತ ನೀಡಿದ್ದರು. ಈ ಚಿತ್ರದ ಬಿಜಿಎಂ ಎಲ್ಲರಿಗೂ ಇಷ್ಟವಾಗಿತ್ತು. ಈಗ ಸಿದ್ಧವಾಗುತ್ತಿರುವ ಕೆಜಿಎಫ್​-2 ಚಿತ್ರದ ಮೇಲೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇನ್ನು, ಸಲಾರ್​ ಸಿನಿಮಾಗೂ ರವಿ ಬಸ್ರೂರ್​ ಸಂಗೀತ ಸಂಯೋಜನೆ ಇದ್ದು, ಈ ಚಿತ್ರದ ಮೇಲೂ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಎರಡು ಸಿನಿಮಾಗಳ ಸಂಗೀತ ಸಂಯೋಜನೆ ಕೆಲಸಗಳು ರವಿ ಬಸ್ರೂರ್​ ಸ್ಟುಡಿಯೋದಲ್ಲಿ ನಡೆಯುತ್ತಿದೆ.

ಈ ಬಗ್ಗೆ ಪ್ರಶಾಂತ್​ ನೀಲ್​ ಬರೆದುಕೊಂಡಿದ್ದಾರೆ. ಕೆಜಿಎಫ್​-2 ಹಾಗೂ ಸಲಾರ್​ ಒಂದು ಕಡೆ ಸಂಧಿಸುತ್ತವೆ ಎಂದಾದರೆ ಅದು ರವಿ ಬಸ್ರೂರ್​ ಸ್ಟುಡಿಯೋದಲ್ಲಿ ಮಾತ್ರ ಎಂದು ಪ್ರಶಾಂತ್​ ನೀಲ್​ ಬರೆದುಕೊಂಡಿದ್ದಾರೆ. ಈ ಮೂಲಕ ಎರಡೂ ಸಿನಿಮಾಗಳ ಸಂಗೀತ ಸಂಯೋಜನೆ ಕೆಲಸಗಳು ಒಂದೇ ಕಡೆ ನಡೆಯುತ್ತಿರುವ ಬಗ್ಗೆ ಪ್ರಶಾಂತ್​ ನೀಲ್​ ಮಾಹಿತಿ ಈಡಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ನೀಲ್​ ಜೊತೆ ದಳಪತಿ ವಿಜಯ್​ ಹೊಸ ಸಿನಿಮಾ? ಕೆಜಿಎಫ್​ ಡೈರೆಕ್ಟರ್​ ಬಗ್ಗೆ ಬಿಗ್​ ನ್ಯೂಸ್​

Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

Published On - 6:40 pm, Thu, 15 April 21

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್