AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’ ಚಿತ್ರವನ್ನೇ​ ಮೀರಿಸಲಿದೆ ಪ್ರಭಾಸ್​ ‘ಸಲಾರ್’​? ಟಾಲಿವುಡ್​ ಅಂಗಳದಿಂದ ಬಿಗ್​ ಅಪ್​ಡೇಟ್​

ಪ್ರಶಾಂತ್​ ನೀಲ್​ ನಿರ್ದೇಶನದ ‘ಉಗ್ರಂ’ ಸಿನಿಮಾ ಸಣ್ಣ ಬಜೆಟ್​ನಲ್ಲಿ ಸಿದ್ಧಗೊಂಡ ಚಿತ್ರ. ‘ಕೆಜಿಎಫ್’​ ಬಜೆಟ್​ ಸಾಕಷ್ಟು ಹೆಚ್ಚಿತ್ತು. ‘ಕೆಜಿಎಫ್​ 2’ ನಿರ್ಮಾಣದ ಮೊತ್ತ ‘ಕೆಜಿಎಫ್’​ ಅನ್ನೂ ಮೀರಿಸಿದೆ.

‘ಕೆಜಿಎಫ್’ ಚಿತ್ರವನ್ನೇ​ ಮೀರಿಸಲಿದೆ ಪ್ರಭಾಸ್​ ‘ಸಲಾರ್’​? ಟಾಲಿವುಡ್​ ಅಂಗಳದಿಂದ ಬಿಗ್​ ಅಪ್​ಡೇಟ್​
ಯಶ್​-ಪ್ರಶಾಂತ್​ ನೀಲ್
TV9 Web
| Updated By: ಮದನ್​ ಕುಮಾರ್​|

Updated on: Aug 20, 2021 | 7:35 AM

Share

‘ಕೆಜಿಎಫ್’ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಂಡ ಚಿತ್ರ. ‘ಕೆಜಿಎಫ್​ 2’ ಅದಕ್ಕೂ ಹೆಚ್ಚಿನ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. ‘ಕೆಜಿಎಫ್’​ ಸಿನಿಮಾದಲ್ಲಿ ಗ್ರಾಫಿಕ್ಸ್​ ಹಾಗೂ ಮೇಕಿಂಗ್​ಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಇನ್ನು, ಭಾವನಾತ್ಮಕ ವಿಚಾರವನ್ನೂ ಒಂದು ಟ್ರ್ಯಾಕ್​ನಲ್ಲಿ ತೆಗೆದುಕೊಂಡು ಹೋಗಲಾಗಿತ್ತು. ಆದರೆ, ಈಗ ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಸಿನಿಮಾ  ಈ ಎಲ್ಲಾ ವಿಚಾರಗಳಲ್ಲಿ ‘ಕೆಜಿಎಫ್’​ ಸಿನಿಮಾವನ್ನೂ ಮೀರಿಸಲಿದೆ ಎನ್ನುವ ಮಾತು ಕೇಳಿ ಬಂದಿದೆ. 

ಪ್ರಶಾಂತ್​ ನೀಲ್​ ನಿರ್ದೇಶನದ ‘ಉಗ್ರಂ’ ಸಿನಿಮಾ ಸಣ್ಣ ಬಜೆಟ್​ನಲ್ಲಿ ಸಿದ್ಧಗೊಂಡ ಚಿತ್ರ. ‘ಕೆಜಿಎಫ್’​ ಬಜೆಟ್​ ಸಾಕಷ್ಟು ಹೆಚ್ಚಿತ್ತು. ‘ಕೆಜಿಎಫ್​ 2’ ನಿರ್ಮಾಣದ ಮೊತ್ತ ‘ಕೆಜಿಎಫ್’​ ಅನ್ನೂ ಮೀರಿಸಿದೆ. ಈಗ ‘ಸಲಾರ್’​ ಸಿನಿಮಾ ಬಜೆಟ್​ ಪ್ರಶಾಂತ್​ ನೀಲ್​ ಅವರ ಈ ಮೊದಲ ಸಿನಿಮಾವನ್ನೂ ಮೀರಿಸಲಿದೆ  ಎಂಬುದು ಸ್ಪಷ್ಟವಾಗಿದೆ. ಅಷ್ಟೇ ಅಲ್ಲ, ಮೇಕಿಂಗ್ ಹಾಗೂ ಗ್ರಾಫಿಕ್ಸ್​ನಲ್ಲೂ ಅದ್ದೂರಿತನ ಇರಲಿದೆ.

ಮೂಲಗಳ ಪ್ರಕಾರ ಕೆಜಿಎಫ್​ಗಿಂತ ಎರಡು ಪಟ್ಟು ದೊಡ್ಡದಾಗಿ ‘ಸಲಾರ್’​ ಮೂಡಿಬರಲಿದೆ ಎನ್ನಲಾಗಿದೆ. ಸಲಾರ್​ನಲ್ಲಿ ಆ್ಯಕ್ಷನ್​ಗೆ ಪ್ರಶಾಂತ್​ ನೀಲ್​ ಹೆಚ್ಚು ಪ್ರಾಮುಖ್ಯತೆ ನೀಡಿದ್ದಾರೆ. ಈ ಕಾರಣಕ್ಕೆ ಹೆಚ್ಚು ಅಚ್ಚುಕಟ್ಟಾಗಿ ಸಿನಿಮಾ ತೆರೆಗೆ ತರಲು ಪ್ರಯತ್ನಿಸುತ್ತಿದ್ದಾರೆ. ಇನ್ನು, ಸಿನಿಮಾದಲ್ಲಿ ಎಮೋಷನಲ್​​ ದೃಶ್ಯಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೀಗಾಗಿ, ಆ್ಯಕ್ಷನ್​ ಮತ್ತು ಭಾವನಾತ್ಮಕ ವಿಚಾರವನ್ನು ಸರಿದೂಗಿಸಿಕೊಂಡು ಹೋಗುವ ಲೆಕ್ಕಾಚಾರ ನಿರ್ದೇಶಕರದ್ದು.

​‘ಬಾಹುಬಲಿ’ಯಂಥ ಹಿಟ್​ ಚಿತ್ರಗಳಲ್ಲಿ ನಟಿಸಿದ ಅನುಭವ ಪ್ರಭಾಸ್​ಗೆ ಇದೆ. ಇನ್ನು, ‘ಕೆಜಿಎಫ್’​ ನಿರ್ದೇಶನ ಮಾಡಿ ಪ್ರಶಾಂತ್ ಭೇಷ್​ ಎನಿಸಿಕೊಂಡಿದ್ದಾರೆ. ಈ ಎಲ್ಲಾ ಕಾರಣಕ್ಕೆ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ‘ಸಲಾರ್’​ ಸಿನಿಮಾ ಮುಂದಿನ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ ಎಂದು ಚಿತ್ರತಂಡ ಘೋಷಣೆ ಮಾಡಿದೆ. ಕೊವಿಡ್​ ಮೂರನೇ ಅಲೆ ಕಾಣಿಸಿಕೊಂಡರೆ ಮತ್ತೆ ಸಿನಿಮಾ ಕೆಲಸಗಳು ವಿಳಂಬವಾಗಲಿದೆ.

ಇನ್ನು ‘ಕೆಜಿಎಫ್​ 2’ ಸಿನಿಮಾ ರಿಲೀಸ್​ ದಿನಾಂಕ ಘೋಷಣೆಗೆ ಅಭಿಮಾನಿಗಳು ಕಾದು ಕೂತಿದ್ದಾರೆ. ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ:

 KGF Chapter 2: ಯಶ್​ ನಟನೆಯ ‘ಕೆಜಿಎಫ್ 2’ ರಿಲೀಸ್​ ಡೇಟ್​ ಘೋಷಣೆ​ಗೂ ಮುನ್ನವೇ ಆರ್​ಆರ್​ಆರ್​ ತಂಡದಿಂದ ಬಿಗ್​ ನ್ಯೂಸ್​?

ಸಲಾರ್​ ಚಿತ್ರದ ಎರಡನೇ ಶೆಡ್ಯೂಲ್ ಮುಗಿಸಿ ಬರೋಬ್ಬರಿ 400 ಕೋಟಿ ಬಜೆಟ್​ನ ಆದಿಪುರುಷ್ ಚಿತ್ರದಲ್ಲಿ ತೊಡಗಿಸಿಕೊಂಡ ಪ್ರಭಾಸ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ