AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​

Salaar | Ugramm: ‘ಸಲಾರ್​’ ಸಿನಿಮಾದಲ್ಲಿಯೂ ‘ಉಗ್ರಂ’ ಚಿತ್ರದ ಕಥೆ ಇರಲಿದೆ ಎಂಬ ಮಾತಿಗೆ ನಿರ್ದೇಶಕ ಪ್ರಶಾಂತ್​ ನೀಲ್​ ಪ್ರತಿಕ್ರಿಯೆ ನೀಡಿದ್ದಾರೆ. ಆ ಮೂಲಕ ಅಂತೆ-ಕಂತೆಗಳಿಗೆ ಅವರು ಪೂರ್ಣವಿರಾಮ ಇಟ್ಟಿದ್ದಾರೆ.

‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​
ಶ್ರೀಮುರಳಿ, ಪ್ರಭಾಸ್​
Follow us
TV9 Web
| Updated By: ಮದನ್​ ಕುಮಾರ್​

Updated on: Apr 09, 2022 | 9:47 AM

ಕನ್ನಡದ ಖ್ಯಾತ ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇದೆ. ಈಗ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಅನೇಕ ನಗರಗಳಿಗೆ ತೆರಳಿ ಚಿತ್ರದ ಪ್ರಮೋಷನ್​ ಮಾಡಲಾಗುತ್ತಿದೆ. ಯಶ್​, ಶ್ರೀನಿಧಿ ಶೆಟ್ಟಿ, ಸಂಜಯ್​ ದತ್​, ರವೀನಾ ಟಂಡನ್​ ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ನಡುವೆ ಪ್ರಶಾಂತ್​ ನೀಲ್​ ಅವರಿಗೆ ‘ಸಲಾರ್​’ ಸಿನಿಮಾ ( Salaar Movie) ಬಗ್ಗೆಯೂ ಪ್ರಶ್ನೆ ಎದುರಾಗಿದೆ. ಪ್ರಭಾಸ್​ ನಟಿಸುತ್ತಿರುವ ‘ಸಲಾರ್​’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ಸಿನಿಮಾದ ಕಥೆ ಏನು ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾಯುತ್ತಿದ್ದಾರೆ. ‘ಸಲಾರ್​’ ಸೆಟ್ಟೇರಿದಾಗಿನಿಂದಲೂ ಒಂದು ಗುಸುಗುಸು ಹಬ್ಬಿದೆ. ಪ್ರಶಾಂತ್​ ನೀಲ್​ ಅವರು ‘ಉ್ರಗಂ’ ಸಿನಿಮಾದ (Ugramm Movie) ಕಥೆಯನ್ನೇ ಇಟ್ಟುಕೊಂಡು ‘ಸಲಾರ್​’ ಸಿನಿಮಾ ಮಾಡುತ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಆ ಮಾತನ್ನು ಪ್ರಶಾಂತ್​ ನೀಲ್​ ತಳ್ಳಿ ಹಾಕಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ಉಗ್ರಂ’ ಸಿನಿಮಾದಲ್ಲಿ ಶ್ರೀಮುರಳಿ ಹೀರೋ ಆಗಿ ನಟಿಸಿದ್ದರು. ಆ ಚಿತ್ರದಿಂದ ಅವರ ವೃತ್ತಿಜೀವನಕ್ಕೆ ಹೊಸ ಮೈಲೇಜ್​ ಸಿಕ್ಕಿತು. ನಿರ್ದೇಶಕ ಪ್ರಶಾಂತ್​ ನೀಲ್​ ಕೂಡ ಖ್ಯಾತಿ ಪಡೆದುಕೊಂಡರು. ಅಭಿಮಾನಿಗಳು ಆ ಚಿತ್ರವನ್ನು ಸಖತ್​ ಮೆಚ್ಚಿಕೊಂಡರು. ಈಗ ‘ಸಲಾರ್​’ ಸಿನಿಮಾದಲ್ಲಿಯೂ ‘ಉಗ್ರಂ’ ಚಿತ್ರದ ಕಥೆ ಇರಲಿದೆ ಎಂಬ ಮಾತಿಗೆ ಪ್ರಶಾಂತ್​ ನೀಲ್​ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಮಾಡುವ ಎಲ್ಲ ಸಿನಿಮಾಗಳಲ್ಲೂ ‘ಉಗ್ರಂ’ ಚಿತ್ರದ ಛಾಯೆ ಇದ್ದೇ ಇರುತ್ತದೆ. ಅದು ನನ್ನ ಸ್ಟೈಲ್​. ಆದರೆ ಸಲಾರ್​ ಒಂದು ಫ್ರೆಷ್​ ಸ್ಟೋರಿ. ಅದು ಉಗ್ರಂ ಚಿತ್ರದ ರಿಮೇಕ್​ ಅಥವಾ ಅಳವಡಿಕೆ ಅಲ್ಲ’ ಎಂದು ಪ್ರಶಾಂತ್​ ನೀಲ್​ ಹೇಳಿದ್ದಾರೆ. ಈ ಮೂಲಕ ಎಲ್ಲ ಅನುಮಾನಗಳಿಗೆ ಅವರು ತೆರೆ ಎಳೆದಿದ್ದಾರೆ.

ಪ್ರಭಾಸ್​ ಅವರು ಪ್ಯಾನ್​ ಇಂಡಿಯಾ ಹೀರೋ. ‘ಬಾಹುಬಲಿ’ ಸಿನಿಮಾದ ಗೆಲವಿನ ಬಳಿಕ ಅವರಿಗೆ ಈ ಪಟ್ಟ ಸಿಕ್ಕಿದೆ. ಅದೇ ರೀತಿ ಪ್ರಶಾಂತ್​ ನೀಲ್​ ಕೂಡ ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾದ ಯಶಸ್ಸಿನಿಂದ ಪ್ಯಾನ್​ ಇಂಡಿಯಾ ಡೈರೆಕ್ಟರ್​ ಎಂಬ ಖ್ಯಾತಿ ಪಡೆದುಕೊಂಡಿದ್ದಾರೆ. ಇವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ‘ಸಲಾರ್​’ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ಸಿದ್ಧವಾಗುತ್ತಿದೆ. ಪ್ರಭಾಸ್​ಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

‘ಸಲಾರ್​’ ಚಿತ್ರಕ್ಕೆ ಶೇ.30ರಷ್ಟು ಶೂಟಿಂಗ್ ಮುಗಿದಿದೆ ಎಂಬ ಮಾಹಿತಿ ಇದೆ. ಪ್ರಭಾಸ್​ ಅವರಿಗೆ ಸಣ್ಣ ಗಾಯ ಆಗಿದ್ದು, ಸದ್ಯಕ್ಕೆ ಚಿತ್ರೀಕರಣಕ್ಕೆ ಬ್ರೇಕ್​ ನೀಡಲಾಗಿದೆ. ಇತ್ತ ಪ್ರಶಾಂತ್​ ನೀಲ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಹಣ ಗಳಿಸಲು ಈ ಚಿತ್ರ ವಿಫಲವಾಗಿದೆ. ಆದ್ದರಿಂದ ಪ್ರಭಾಸ್​ ನಟಿಸುವ ಮುಂದಿನ ಸಿನಿಮಾಗಳ ಬಗ್ಗೆ ಜನರು ಅನುಮಾನದ ದೃಷ್ಟಿ ಬೀರುವಂತಾಗಿದೆ.

ಸದ್ಯ ಪ್ರಭಾಸ್​ ಅವರ ಖಾತೆಯಲ್ಲಿ ‘ಆದಿಪುರುಷ್​’ ಸಿನಿಮಾ ಕೂಡ ಇದೆ. ಆ ಚಿತ್ರದ ಮೇಲೆ ಭರವಸೆ ಇಟ್ಟುಕೊಳ್ಳಲಾಗಿದೆ. ಸೈಫ್​ ಅಲಿ ಖಾನ್​, ಕೃತಿ ಸನೋನ್​ ಕೂಡ ಆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ