3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ

Prashanth Neel: ಪ್ರಶಾಂತ್​ ನೀಲ್​ ನಿರ್ದೇಶನ ಮಾಡಲಿರುವ ಹೊಸ ಸಿನಿಮಾಗಳ ಬಗ್ಗೆ ಭಾರಿ ಕುತೂಹಲ ನಿರ್ಮಾಣ ಆಗಿದೆ. ಈ ಚಿತ್ರಗಳ ಕಥೆಯನ್ನು ಫ್ಯಾನ್ಸ್​ ಊಹಿಸುತ್ತಿದ್ದಾರೆ.

3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ
ಯಶ್​, ಪ್ರಭಾಸ್​, ಜ್ಯೂ. ಎನ್​ಟಿಆರ್​
Follow us
| Updated By: ಮದನ್​ ಕುಮಾರ್​

Updated on: May 22, 2022 | 8:11 AM

ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ‘ಕೆಜಿಎಫ್​ 1’ ಮತ್ತು ‘ಕೆಜಿಎಫ್​ 2’ ಸಿನಿಮಾದಿಂದ ಅವರ ಖ್ಯಾತಿ ವಿಶ್ವಮಟ್ಟದಲ್ಲಿ ಹೆಚ್ಚಿದೆ. ಭಾರತದ ಘಟಾನುಘಟಿ ನಿರ್ದೇಶಕರ ಜೊತೆ ಅವರನ್ನು ಹೋಲಿಸಲಾಗುತ್ತಿದೆ. ಪ್ರಶಾಂತ್​ ನೀಲ್​ ಮಾಡುವ ಮುಂದಿನ ಸಿನಿಮಾಗಳ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಇದೆ. ಸದ್ಯ ಅವರು ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಹಾಗಂತ ಸುಮ್ಮನೆ ಕುಳಿತಿಲ್ಲ. ಪ್ರಭಾಸ್​ ಜೊತೆ ‘ಸಲಾರ್​’ ಸಿನಿಮಾದ ಕೆಲಸಗಳಲ್ಲಿ ಪ್ರಶಾಂತ್​ ನೀಲ್​ ಬ್ಯುಸಿ ಆಗಿದ್ದಾರೆ. ಅಷ್ಟೇ ಅಲ್ಲದೇ ಜ್ಯೂ. ಎನ್​ಟಿಆರ್​ ಜೊತೆ ಕೂಡ ಕೈ ಜೋಡಿಸಿ, ಹೊಸ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ಅದಕ್ಕೆ ತಾತ್ಕಾಲಿಕವಾಗಿ ‘ಎನ್​ಟಿಆರ್​31’ ಎಂದು ಶೀರ್ಷಿಕೆ ಇಡಲಾಗಿದೆ. ವಿಶೇಷ ಏನೆಂದರೆ ಸೋಶಿಯಲ್​ ಮೀಡಿಯಾದಲ್ಲಿ ಪ್ರಶಾಂತ್​ ನೀಲ್​ ಹಂಚಿಕೊಂಡಿರುವ ಪೋಸ್ಟರ್​ನಿಂದ ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಂತಾಗಿದೆ. ಹೌದು, ‘ಕೆಜಿಎಫ್​ 2’ ಹಾಗೂ ‘ಸಲಾರ್​’ ಜೊತೆಗೆ ‘ಎನ್​ಟಿಆರ್​31’ (NTR 31) ಚಿತ್ರದ ಪೋಸ್ಟರ್​ ಅನ್ನು ಜೋಡಿಸಿ, ತಮ್ಮ ಫೇಸ್​ ಬುಕ್​ ಹಾಗೂ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪ್ರಶಾಂತ್​ ನೀಲ್​ ಓರ್ವ ಪ್ರತಿಭಾವಂತ ನಿರ್ದೇಶಕ. ಅವರ ಆಲೋಚನೆಗಳು ಸಖತ್​ ಡಿಫರೆಂಟ್​ ಆಗಿರುತ್ತವೆ. ಈಗ ಅವರು ಈ ಮೂರು ಸಿನಿಮಾಗಳ ಪೋಸ್ಟರ್​ಗಳನ್ನು ಒಟ್ಟಿಗೆ ಜೋಡಿಸಿರುವುದರಿಂದ ಸಿನಿಪ್ರಿಯರ ಮನದಲ್ಲಿ ಹೊಸ ಪ್ರಶ್ನೆ ಮೂಡಿದೆ. ‘ಕೆಜಿಎಫ್​ 2’, ‘ಸಲಾರ್​’ ಹಾಗೂ ‘ಎನ್​ಟಿಆರ್​ 31’ ಚಿತ್ರಗಳ ಕಥೆ ಒಂದಕ್ಕೊಂದು ಕನೆಕ್ಟ್​ ಆಗಿದೆ ಎಂದು ಜನರು ಊಹಿಸುತ್ತಿದ್ದಾರೆ. ಅದನ್ನು ಕಮೆಂಟ್​ಗಳ ಮೂಲಕ ತಿಳಿಸಲಾಗುತ್ತಿದೆ. ಆದರೆ ಈ ಕಮೆಂಟ್​ಗಳಿಗೆ ಪ್ರಶಾಂತ್​ ನೀಲ್​ ಅವರು ಸದ್ಯಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ಜ್ಯೂ.ಎನ್​ಟಿಆರ್​ ಜತೆ ಕಾಣಿಸಿಕೊಂಡ ಪ್ರಶಾಂತ್​ ನೀಲ್​; ಇದಕ್ಕಿದೆ ಮಹತ್ವದ ಕಾರಣ

ಇದನ್ನೂ ಓದಿ
Image
‘ಕೆಜಿಎಫ್​ 2’ ಚಿತ್ರದ ‘ತೂಫಾನ್​..’ ವಿಡಿಯೋ ಸಾಂಗ್​ ಮೂಲಕ ಮತ್ತೆ ಧೂಳೆಬ್ಬಿಸಿದ ರಾಕಿ ಭಾಯ್​ ಯಶ್​
Image
ಶ್ವೇತವರ್ಣದ ಉಡುಗೆ ಧರಿಸಿ ಅಭಿಮಾನಿಗಳನ್ನು ಸೆಳೆದುಕೊಂಡ ‘ಕೆಜಿಎಫ್​ 2’ ನಟಿ ರವೀನಾ ಟಂಡನ್​
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​
Image
‘ಕೆಜಿಎಫ್​’ ಗಾಯಕಿ ನೇಹಾ ಕಕ್ಕರ್​ ಗಂಡನ ಡೈಮಂಡ್​ ರಿಂಗ್​, ಐಫೋನ್​, ಹಣ ದರೋಡೆ ಮಾಡಿದ ಕಳ್ಳರು

‘ಸಲಾರ್​’, ‘ಕೆಜಿಎಫ್​ 2’, ‘ಎನ್​ಟಿಆರ್​ 31’ ಮಾತ್ರವಲ್ಲದೇ ‘ಬಘೀರ’ ಚಿತ್ರದ ಕಥೆ ಕೂಡ ಒಂದಕ್ಕೊಂದು ಕನೆಕ್ಟ್​ ಆಗಿರಬಹುದೇ ಎಂದು ಫ್ಯಾನ್ಸ್​ ಪ್ರಶ್ನಿಸುತ್ತಿದ್ದಾರೆ. ಈ ಕುರಿತಂತೆ ಈಗಾಗಲೇ ಅನೇಕ ಊಹಾಪೋಹಗಳು ಹರಿದಾಡಿವೆ. ‘ಸಲಾರ್’​ ಮತ್ತು ‘ಕೆಜಿಎಫ್​ 3’ ಒಂದೇ ಸಿನಿಮಾ. ಈ ಚಿತ್ರದಲ್ಲಿ ರಾಕಿ ಭಾಯ್​ ಮತ್ತು ಸಲಾರ್ ಪಾತ್ರಗಳು ಪರಸ್ಪರ ಭೇಟಿ ಆಗುತ್ತವೆ. ಎಂದೆಲ್ಲ ಜನರು ಊಹಿಸುತ್ತಿದ್ದಾರೆ. ಅಂತಿಮವಾಗಿ ಪ್ರಶಾಂತ್​ ನೀಲ್​ ಅವರು ಅಭಿಮಾನಿಗಳ ಮುಂದೆ ಯಾವ ರೀತಿ ಈ ಸಿನಿಮಾಗಳನ್ನು ತೆರೆದಿಡಲಿದ್ದಾರೆ ಎಂಬುದು ಚಿತ್ರ ಬಿಡುಗಡೆ ಆದಾಗಲೇ ತಿಳಿಯಬೇಕಿದೆ.

ಇದನ್ನೂ ಓದಿ: ‘ಪ್ರಶಾಂತ್​ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂ. ನಷ್ಟ’: ವಿವರ ನೀಡಿದ ಆರ್​ಜಿವಿ

ಪ್ರಶಾಂತ್​ ನೀಲ್​ ಅವರ ದೂರದೃಷ್ಟಿ ಬಗ್ಗೆ ಎಲ್ಲರಿಗೂ ಹೆಮ್ಮೆ ಇದೆ. ಅವರ ಮೇಕಿಂಗ್​ ಶೈಲಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕನ್ನಡದ ಸಿನಿಮಾವನ್ನು ವಿಶ್ವಮಟ್ಟದಲ್ಲಿ ಮಿಂಚುವಂತೆ ಮಾಡಿದ ಅವರ ಚಾಕಚಕ್ಯತೆಗೆ ಎಲ್ಲರೂ ಭೇಷ್​ ಎಂದಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಮುಂಬರುವ ಸಿನಿಮಾಗಳ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಪ್ರಶಾಂತ್​ ನೀಲ್​ ಅವರ ಕಾಲ್​ಶೀಟ್​ ಕೂಡ ದುಬಾರಿ ಆಗಿದೆ. ಅವರ ಜೊತೆ ಸಿನಿಮಾ ಮಾಡಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಮತ್ತು ಸ್ಟಾರ್​ ನಟರು ಕಾಯುತ್ತಿದ್ದಾರೆ. ಆದ್ದರಿಂದ ಪ್ರಶಾಂತ್​ ನೀಲ್​ ಇಡಲಿರುವ ಪ್ರತಿ ಹೆಜ್ಜೆಯನ್ನೂ ಭಾರತೀಯ ಚಿತ್ರರಂಗ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ