AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಾರ್​ ನಂತರವೂ ಪ್ರಶಾಂತ್​ ನೀಲ್​ ಕನ್ನಡ ಸಿನಿಮಾ ಮಾಡೋದು ಡೌಟ್​; ಇಲ್ಲಿದೆ ಹೊಸ ನ್ಯೂಸ್​

ಪ್ರಭಾಸ್​ ನಟನೆಯ ಸಲಾರ್​ ಚಿತ್ರಕ್ಕೆ ಪ್ರಶಾಂತ್​ ನೀಲ್ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಅಚ್ಚರಿ ಎಂದರೆ, 2022ರಲ್ಲಿ ಇಬ್ಬರ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧಗೊಳ್ಳಲಿದೆಯಂತೆ!

ಸಲಾರ್​ ನಂತರವೂ ಪ್ರಶಾಂತ್​ ನೀಲ್​ ಕನ್ನಡ ಸಿನಿಮಾ ಮಾಡೋದು ಡೌಟ್​; ಇಲ್ಲಿದೆ ಹೊಸ ನ್ಯೂಸ್​
ಪ್ರಶಾಂತ್​​ ನೀಲ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Mar 24, 2021 | 4:11 PM

 ಕೆಜಿಎಫ್​ ಚಾಪ್ಟರ್​ 2 ನಂತರ ಪ್ರಶಾಂತ್​ ನೀಲ್​ ಮುಂದೇನು ಮಾಡುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡಿತ್ತು. ಹೀಗಿರುವಾಗಲೇ ಪ್ರಭಾಸ್​ ಜತೆ ಸಿನಿಮಾ ಮಾಡುವ ಘೋಷಣೆಯನ್ನು ಮಾಡಿದ್ದರು ಪ್ರಶಾಂತ್​ ನೀಲ್​. ಇದಾದ ಬೆನ್ನಲ್ಲೇ ಅವರು​ ಕನ್ನಡ ಚಿತ್ರರಂಗ ಮರೆತರು ಎನ್ನುವ ಮಾತು ಕೇಳಿ ಬಂದಿತ್ತು. ಈಗ ಕೇಳಿ ಬರುತ್ತಿರುವ ಹೊಸ ವಿಚಾರ ಎಂದರೆ, ಸದ್ಯಕ್ಕೆ ಪ್ರಶಾಂತ್​ ನೀಲ್​ ಕನ್ನಡಕ್ಕೆ ಬರೋದು ಅನುಮಾನ ಎನ್ನಲಾಗುತ್ತಿದೆ. ಪ್ರಭಾಸ್​ ನಟನೆಯ ಸಲಾರ್​ ಚಿತ್ರಕ್ಕೆ ಪ್ರಶಾಂತ್​ ನೀಲ್ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ​. ಅಚ್ಚರಿ ಎಂದರೆ, 2022ರಲ್ಲಿ ಇಬ್ಬರ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧಗೊಳ್ಳಲಿದೆಯಂತೆ! ಹೀಗೊಂದು ವಿಚಾರ ಟಾಲಿವುಡ್​ ಅಂಗಳದಲ್ಲಿ ಹರಿದಾಡಿದೆ.

ಈಗಾಗಲೇ ಸಲಾರ್​ ಸಿನಿಮಾದ ಎರಡು ಹಂತದ ಶೂಟಿಂಗ್ ಪೂರ್ಣಗೊಂಡಿದೆ. ಮೂರನೇ ಹಂತದ ಶೂಟಿಂಗ್​ ಸದ್ಯದಲ್ಲೇ ಪ್ರಾರಂಭಗೊಳ್ಳಲಿದೆ. ಪ್ರಶಾಂತ್​ ನೀಲ್​ ಕಾರ್ಯವೈಖರಿ ನೋಡಿ ಪ್ರಭಾಸ್​ ಫಿದಾ ಆಗಿದ್ದಾರಂತೆ. ಹೀಗಾಗಿ, ಇಬ್ಬರ ನಡುವೆ ಮತ್ತೊಂದು ಸಿನಿಮಾ ಮೂಡಿ ಬರುವ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಇನ್ನು ಈ ಸಿನಿಮಾವನ್ನು ಯಾರು ನಿರ್ಮಾಣ ಮಾಡುತ್ತಾರೆ ಎನ್ನುವ ಬಗ್ಗೆಯೂ ಗಾಸಿಪ್​ ಹರಿದಾಡಿದೆ. ಈ ಚಿತ್ರಕ್ಕೆ ಟಾಲಿವುಡ್​ನ ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ಬಂಡವಾಳ ಹೂಡಲಿದ್ದಾರಂತೆ. ಸದ್ಯ, ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿ ಮಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಘೋಷಣೆ ಇಲ್ಲ.

ಸಲಾರ್​ ಸಿನಿಮಾ ಘೋಷಣೆ ಆದ ನಂತರ ಕನ್ನಡ ಅಭಿಮಾನಿಗಳು ಬೇಸರ ಹೊರ ಹಾಕಿದ್ದರು. ನಿಮಗೆ ಸಿನಿಮಾ ಮಾಡೋಕೆ ಕನ್ನಡದಲ್ಲಿ ಯಾರೂ ಹೀರೋ ಸಿಕ್ಕಿಲ್ಲವೇ ಎಂದು ಪ್ರಶ್ನೆ ಕೂಡ ಮಾಡಿದ್ದರು. ಈಗ ಕೇಳಿ ಬಂದಿರುವ ಹೊಸ ಮಾಹಿತಿ ಅಭಿಮಾನಿಗಳಿಗೆ ಮತ್ತಷ್ಟು ಬೇಸರ ತಂದಿದೆ.

ಸಲಾರ್​ ಸಿನಿಮಾ 150 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. 2022ರ ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ತೆಲುಗು ಹಾಗೂ ಕನ್ನಡದಲ್ಲಿ ಸಿನಿಮಾ ತಯಾರಾಗುತ್ತಿದೆ. ಪ್ರಭಾಸ್​ಗೆ ಜತೆಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ: KGF Chapter 2 ಚಿತ್ರದ ಅಪ್​ಡೇಟ್​ಗಾಗಿ ಕಾದಿದ್ದ ಎಲ್ಲರಿಗೂ ಗುಡ್​-ನ್ಯೂಸ್ ನೀಡಿದ ಯಶ್​-ಪ್ರಶಾಂತ್​ ನೀಲ್​!

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​