AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಾರ್​ ನಂತರವೂ ಪ್ರಶಾಂತ್​ ನೀಲ್​ ಕನ್ನಡ ಸಿನಿಮಾ ಮಾಡೋದು ಡೌಟ್​; ಇಲ್ಲಿದೆ ಹೊಸ ನ್ಯೂಸ್​

ಪ್ರಭಾಸ್​ ನಟನೆಯ ಸಲಾರ್​ ಚಿತ್ರಕ್ಕೆ ಪ್ರಶಾಂತ್​ ನೀಲ್ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಅಚ್ಚರಿ ಎಂದರೆ, 2022ರಲ್ಲಿ ಇಬ್ಬರ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧಗೊಳ್ಳಲಿದೆಯಂತೆ!

ಸಲಾರ್​ ನಂತರವೂ ಪ್ರಶಾಂತ್​ ನೀಲ್​ ಕನ್ನಡ ಸಿನಿಮಾ ಮಾಡೋದು ಡೌಟ್​; ಇಲ್ಲಿದೆ ಹೊಸ ನ್ಯೂಸ್​
ಪ್ರಶಾಂತ್​​ ನೀಲ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 24, 2021 | 4:11 PM

Share

 ಕೆಜಿಎಫ್​ ಚಾಪ್ಟರ್​ 2 ನಂತರ ಪ್ರಶಾಂತ್​ ನೀಲ್​ ಮುಂದೇನು ಮಾಡುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡಿತ್ತು. ಹೀಗಿರುವಾಗಲೇ ಪ್ರಭಾಸ್​ ಜತೆ ಸಿನಿಮಾ ಮಾಡುವ ಘೋಷಣೆಯನ್ನು ಮಾಡಿದ್ದರು ಪ್ರಶಾಂತ್​ ನೀಲ್​. ಇದಾದ ಬೆನ್ನಲ್ಲೇ ಅವರು​ ಕನ್ನಡ ಚಿತ್ರರಂಗ ಮರೆತರು ಎನ್ನುವ ಮಾತು ಕೇಳಿ ಬಂದಿತ್ತು. ಈಗ ಕೇಳಿ ಬರುತ್ತಿರುವ ಹೊಸ ವಿಚಾರ ಎಂದರೆ, ಸದ್ಯಕ್ಕೆ ಪ್ರಶಾಂತ್​ ನೀಲ್​ ಕನ್ನಡಕ್ಕೆ ಬರೋದು ಅನುಮಾನ ಎನ್ನಲಾಗುತ್ತಿದೆ. ಪ್ರಭಾಸ್​ ನಟನೆಯ ಸಲಾರ್​ ಚಿತ್ರಕ್ಕೆ ಪ್ರಶಾಂತ್​ ನೀಲ್ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ​. ಅಚ್ಚರಿ ಎಂದರೆ, 2022ರಲ್ಲಿ ಇಬ್ಬರ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧಗೊಳ್ಳಲಿದೆಯಂತೆ! ಹೀಗೊಂದು ವಿಚಾರ ಟಾಲಿವುಡ್​ ಅಂಗಳದಲ್ಲಿ ಹರಿದಾಡಿದೆ.

ಈಗಾಗಲೇ ಸಲಾರ್​ ಸಿನಿಮಾದ ಎರಡು ಹಂತದ ಶೂಟಿಂಗ್ ಪೂರ್ಣಗೊಂಡಿದೆ. ಮೂರನೇ ಹಂತದ ಶೂಟಿಂಗ್​ ಸದ್ಯದಲ್ಲೇ ಪ್ರಾರಂಭಗೊಳ್ಳಲಿದೆ. ಪ್ರಶಾಂತ್​ ನೀಲ್​ ಕಾರ್ಯವೈಖರಿ ನೋಡಿ ಪ್ರಭಾಸ್​ ಫಿದಾ ಆಗಿದ್ದಾರಂತೆ. ಹೀಗಾಗಿ, ಇಬ್ಬರ ನಡುವೆ ಮತ್ತೊಂದು ಸಿನಿಮಾ ಮೂಡಿ ಬರುವ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಇನ್ನು ಈ ಸಿನಿಮಾವನ್ನು ಯಾರು ನಿರ್ಮಾಣ ಮಾಡುತ್ತಾರೆ ಎನ್ನುವ ಬಗ್ಗೆಯೂ ಗಾಸಿಪ್​ ಹರಿದಾಡಿದೆ. ಈ ಚಿತ್ರಕ್ಕೆ ಟಾಲಿವುಡ್​ನ ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ಬಂಡವಾಳ ಹೂಡಲಿದ್ದಾರಂತೆ. ಸದ್ಯ, ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿ ಮಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಘೋಷಣೆ ಇಲ್ಲ.

ಸಲಾರ್​ ಸಿನಿಮಾ ಘೋಷಣೆ ಆದ ನಂತರ ಕನ್ನಡ ಅಭಿಮಾನಿಗಳು ಬೇಸರ ಹೊರ ಹಾಕಿದ್ದರು. ನಿಮಗೆ ಸಿನಿಮಾ ಮಾಡೋಕೆ ಕನ್ನಡದಲ್ಲಿ ಯಾರೂ ಹೀರೋ ಸಿಕ್ಕಿಲ್ಲವೇ ಎಂದು ಪ್ರಶ್ನೆ ಕೂಡ ಮಾಡಿದ್ದರು. ಈಗ ಕೇಳಿ ಬಂದಿರುವ ಹೊಸ ಮಾಹಿತಿ ಅಭಿಮಾನಿಗಳಿಗೆ ಮತ್ತಷ್ಟು ಬೇಸರ ತಂದಿದೆ.

ಸಲಾರ್​ ಸಿನಿಮಾ 150 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. 2022ರ ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ತೆಲುಗು ಹಾಗೂ ಕನ್ನಡದಲ್ಲಿ ಸಿನಿಮಾ ತಯಾರಾಗುತ್ತಿದೆ. ಪ್ರಭಾಸ್​ಗೆ ಜತೆಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ: KGF Chapter 2 ಚಿತ್ರದ ಅಪ್​ಡೇಟ್​ಗಾಗಿ ಕಾದಿದ್ದ ಎಲ್ಲರಿಗೂ ಗುಡ್​-ನ್ಯೂಸ್ ನೀಡಿದ ಯಶ್​-ಪ್ರಶಾಂತ್​ ನೀಲ್​!

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?