AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಾರ್​ ನಂತರವೂ ಪ್ರಶಾಂತ್​ ನೀಲ್​ ಕನ್ನಡ ಸಿನಿಮಾ ಮಾಡೋದು ಡೌಟ್​; ಇಲ್ಲಿದೆ ಹೊಸ ನ್ಯೂಸ್​

ಪ್ರಭಾಸ್​ ನಟನೆಯ ಸಲಾರ್​ ಚಿತ್ರಕ್ಕೆ ಪ್ರಶಾಂತ್​ ನೀಲ್ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಅಚ್ಚರಿ ಎಂದರೆ, 2022ರಲ್ಲಿ ಇಬ್ಬರ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧಗೊಳ್ಳಲಿದೆಯಂತೆ!

ಸಲಾರ್​ ನಂತರವೂ ಪ್ರಶಾಂತ್​ ನೀಲ್​ ಕನ್ನಡ ಸಿನಿಮಾ ಮಾಡೋದು ಡೌಟ್​; ಇಲ್ಲಿದೆ ಹೊಸ ನ್ಯೂಸ್​
ಪ್ರಶಾಂತ್​​ ನೀಲ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Mar 24, 2021 | 4:11 PM

Share

 ಕೆಜಿಎಫ್​ ಚಾಪ್ಟರ್​ 2 ನಂತರ ಪ್ರಶಾಂತ್​ ನೀಲ್​ ಮುಂದೇನು ಮಾಡುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡಿತ್ತು. ಹೀಗಿರುವಾಗಲೇ ಪ್ರಭಾಸ್​ ಜತೆ ಸಿನಿಮಾ ಮಾಡುವ ಘೋಷಣೆಯನ್ನು ಮಾಡಿದ್ದರು ಪ್ರಶಾಂತ್​ ನೀಲ್​. ಇದಾದ ಬೆನ್ನಲ್ಲೇ ಅವರು​ ಕನ್ನಡ ಚಿತ್ರರಂಗ ಮರೆತರು ಎನ್ನುವ ಮಾತು ಕೇಳಿ ಬಂದಿತ್ತು. ಈಗ ಕೇಳಿ ಬರುತ್ತಿರುವ ಹೊಸ ವಿಚಾರ ಎಂದರೆ, ಸದ್ಯಕ್ಕೆ ಪ್ರಶಾಂತ್​ ನೀಲ್​ ಕನ್ನಡಕ್ಕೆ ಬರೋದು ಅನುಮಾನ ಎನ್ನಲಾಗುತ್ತಿದೆ. ಪ್ರಭಾಸ್​ ನಟನೆಯ ಸಲಾರ್​ ಚಿತ್ರಕ್ಕೆ ಪ್ರಶಾಂತ್​ ನೀಲ್ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ​. ಅಚ್ಚರಿ ಎಂದರೆ, 2022ರಲ್ಲಿ ಇಬ್ಬರ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧಗೊಳ್ಳಲಿದೆಯಂತೆ! ಹೀಗೊಂದು ವಿಚಾರ ಟಾಲಿವುಡ್​ ಅಂಗಳದಲ್ಲಿ ಹರಿದಾಡಿದೆ.

ಈಗಾಗಲೇ ಸಲಾರ್​ ಸಿನಿಮಾದ ಎರಡು ಹಂತದ ಶೂಟಿಂಗ್ ಪೂರ್ಣಗೊಂಡಿದೆ. ಮೂರನೇ ಹಂತದ ಶೂಟಿಂಗ್​ ಸದ್ಯದಲ್ಲೇ ಪ್ರಾರಂಭಗೊಳ್ಳಲಿದೆ. ಪ್ರಶಾಂತ್​ ನೀಲ್​ ಕಾರ್ಯವೈಖರಿ ನೋಡಿ ಪ್ರಭಾಸ್​ ಫಿದಾ ಆಗಿದ್ದಾರಂತೆ. ಹೀಗಾಗಿ, ಇಬ್ಬರ ನಡುವೆ ಮತ್ತೊಂದು ಸಿನಿಮಾ ಮೂಡಿ ಬರುವ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಇನ್ನು ಈ ಸಿನಿಮಾವನ್ನು ಯಾರು ನಿರ್ಮಾಣ ಮಾಡುತ್ತಾರೆ ಎನ್ನುವ ಬಗ್ಗೆಯೂ ಗಾಸಿಪ್​ ಹರಿದಾಡಿದೆ. ಈ ಚಿತ್ರಕ್ಕೆ ಟಾಲಿವುಡ್​ನ ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ಬಂಡವಾಳ ಹೂಡಲಿದ್ದಾರಂತೆ. ಸದ್ಯ, ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿ ಮಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಘೋಷಣೆ ಇಲ್ಲ.

ಸಲಾರ್​ ಸಿನಿಮಾ ಘೋಷಣೆ ಆದ ನಂತರ ಕನ್ನಡ ಅಭಿಮಾನಿಗಳು ಬೇಸರ ಹೊರ ಹಾಕಿದ್ದರು. ನಿಮಗೆ ಸಿನಿಮಾ ಮಾಡೋಕೆ ಕನ್ನಡದಲ್ಲಿ ಯಾರೂ ಹೀರೋ ಸಿಕ್ಕಿಲ್ಲವೇ ಎಂದು ಪ್ರಶ್ನೆ ಕೂಡ ಮಾಡಿದ್ದರು. ಈಗ ಕೇಳಿ ಬಂದಿರುವ ಹೊಸ ಮಾಹಿತಿ ಅಭಿಮಾನಿಗಳಿಗೆ ಮತ್ತಷ್ಟು ಬೇಸರ ತಂದಿದೆ.

ಸಲಾರ್​ ಸಿನಿಮಾ 150 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. 2022ರ ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ತೆಲುಗು ಹಾಗೂ ಕನ್ನಡದಲ್ಲಿ ಸಿನಿಮಾ ತಯಾರಾಗುತ್ತಿದೆ. ಪ್ರಭಾಸ್​ಗೆ ಜತೆಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ: KGF Chapter 2 ಚಿತ್ರದ ಅಪ್​ಡೇಟ್​ಗಾಗಿ ಕಾದಿದ್ದ ಎಲ್ಲರಿಗೂ ಗುಡ್​-ನ್ಯೂಸ್ ನೀಡಿದ ಯಶ್​-ಪ್ರಶಾಂತ್​ ನೀಲ್​!

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!