Prashanth Neel: ಪ್ರಶಾಂತ್ ನೀಲ್ ಟ್ವಿಟರ್ ಖಾತೆ ಕ್ಲೋಸ್​; ನಿರ್ಧಾರಕ್ಕೆ ಕಾರಣವಾಯ್ತಾ ಉರ್ದು ಟ್ವೀಟ್​?

ಪ್ರಶಾಂತ್ ನೀಲ್ ಅವರು ‘ಸಲಾರ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಟಾಲಿವುಡ್​ಗೆ ಹೋಗಿದ್ದಕ್ಕೆ ಪ್ರಶಾಂತ್​ ನೀಲ್ ಅವರನ್ನು ಟೀಕೆ ಮಾಡಲಾಗಿತ್ತು. ಯಶ್ ಬರ್ತ್​ಡೇ (ಜನವರಿ 8) ದಿನವೂ ಪ್ರಶಾಂತ್ ಅವರನ್ನು ಟ್ರೋಲ್ ಮಾಡಲಾಗಿತ್ತು.

Prashanth Neel: ಪ್ರಶಾಂತ್ ನೀಲ್ ಟ್ವಿಟರ್ ಖಾತೆ ಕ್ಲೋಸ್​; ನಿರ್ಧಾರಕ್ಕೆ ಕಾರಣವಾಯ್ತಾ ಉರ್ದು ಟ್ವೀಟ್​?
ಪ್ರಶಾಂತ್ ನೀಲ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 10, 2023 | 12:50 PM

ಸೆಲೆಬ್ರಿಟಿಗಳು ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇರಲು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ತಮ್ಮ ಮುಂದಿನ ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡುತ್ತಾರೆ. ಕೆಲವೊಮ್ಮೆ ಅವರು ಮಾಡುವ ಪೋಸ್ಟ್ ಸಾಕಷ್ಟು ವಿವಾದ ಸೃಷ್ಟಿಸುತ್ತದೆ. ಇತ್ತೀಚೆಗೆ ಪ್ರಶಾಂತ್ ನೀಲ್ (Prashanth Neel) ಮಾಡಿದ್ದ ಟ್ವೀಟ್ ಕೂಡ ವಿವಾದ ಸೃಷ್ಟಿ ಮಾಡಿತ್ತು. ಈ ವಿವಾದದ ಬೆನ್ನಲ್ಲೇ ಪ್ರಶಾಂತ್ ನೀಲ್ ಅವರ ಟ್ವಿಟರ್ ಖಾತೆ ಕ್ಲೋಸ್ ಆಗಿದೆ.

ಪ್ರಶಾಂತ್ ನೀಲ್ ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದುಕೊಂಡಿದ್ದಾರೆ. ಇದಕ್ಕೆ ಕಾರಣವಾಗಿದ್ದು ‘ಕೆಜಿಎಫ್’ ಸರಣಿಯ ಸಿನಿಮಾಗಳು. ಪ್ರಶಾಂತ್ ನೀಲ್ ಕೆಲಸ ನೋಡಿ ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ಸದ್ಯ ಪ್ರಶಾಂತ್ ನೀಲ್ ಅವರು ‘ಸಲಾರ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಟಾಲಿವುಡ್​ಗೆ ಹೋಗಿದ್ದಕ್ಕೆ ಪ್ರಶಾಂತ್​ ನೀಲ್ ಅವರನ್ನು ಟೀಕೆ ಮಾಡಲಾಗಿತ್ತು. ಯಶ್ ಬರ್ತ್​ಡೇ (ಜನವರಿ 8) ದಿನವೂ ಪ್ರಶಾಂತ್ ಅವರನ್ನು ಟ್ರೋಲ್ ಮಾಡಲಾಗಿತ್ತು.

‘ಕೆಜಿಎಫ್ 2’ ಚಿತ್ರದಲ್ಲಿ ಬರುವ ಉರ್ದು ಡೈಲಾಗ್ ಒಂದನ್ನು  ಬರೆದು ಯಶ್​ಗೆ ಪ್ರಶಾಂತ್ ನೀಲ್ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದರು. ಈ ಟ್ವೀಟ್​​ಗೆ ಸಾಕಷ್ಟು ಮಂದಿ ಕಮೆಂಟ್ ಮಾಡಿ ವಿರೋಧ ವ್ಯಕ್ತಪಡಿಸಿದ್ದರು. ಪ್ರಶಾಂತ್ ನೀಲ್​ಗೆ ಕನ್ನಡದಲ್ಲಿ ಟ್ವೀಟ್ ಮಾಡಿ ಎಂದು ಬುದ್ಧಿವಾದ ಹೇಳಿದ್ದರು. ಇದು ಪ್ರಶಾಂತ್​ ನೀಲ್​ಗೆ ಬೇಸರ ತರಿಸಿತೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ
Image
Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ
Image
Yash Birthday: ಬರ್ತ್​ಡೇಗೂ ಮೊದಲು ಅಭಿಮಾನಿಗಳ ಭೇಟಿ ಮಾಡಿದ ಯಶ್; ಇದಕ್ಕಿದೆ ಕಾರಣ
Image
Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ
Image
Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ಇದನ್ನೂ ಓದಿ:  ‘ಸಲಾರ್’ ಚಿತ್ರದ ಸೆಟ್​​ಗೆ ಹೊಸ ನಿಯಮ ಜಾರಿಗೆ ತಂದ ಪ್ರಶಾಂತ್ ನೀಲ್​; ಚಿಂತೆಗೊಳಗಾಯ್ತು ತಾಂತ್ರಿಕ ವರ್ಗ

ಪ್ರಶಾಂತ್ ನೀಲ್ ಅವರ ಟ್ವಿಟರ್ ಖಾತೆಗೆ ಎಂಟ್ರಿ ಕೊಟ್ಟರೆ ‘ಈ ಖಾತೆ ಇಲ್ಲ’ ಎಂಬ ನೋಟಿಫಿಕೇಷನ್ ತೋರಿಸಲಾಗುತ್ತಿದೆ. ಪ್ರಶಾಂತ್ ನೀಲ್ ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಸಿನಿಮಾ ಉತ್ತಮವಾಗಿ ಮೂಡಿಬರಬೇಕು ಎಂದರೆ ಸಾಕಷ್ಟು ಬದ್ಧತೆ ಬೇಕು. ಈ ಸಂದರ್ಭದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಬರುವ ಕೆಲ ವಿಚಾರಗಳು ಏಕಾಗ್ರತೆಗೆ ಭಂಗ ತರುತ್ತವೆ. ಪ್ರಶಾಂತ್ ನೀಲ್ ಕೂಡ ಹೀಗೆಯೇ ಆಲೋಚಿಸಿ, ಸ್ವಲ್ಪ ದಿನ ಸೋಶಿಯಲ್ ಮೀಡಿಯಾದಿಂದ ದೂರ ಇರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ