AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 1ಕ್ಕೆ ಶುಗರ್ ಡ್ಯಾಡಿ ಪುಸ್ತಕ ರಿಲೀಸ್; ಶೀಘ್ರವೇ 28 ಸೆಕೆಂಡ್​ಗಳ ಆಡಿಯೊ ಬಾಂಬ್: ಪ್ರಶಾಂತ್ ಸಂಬರಗಿ

ಆ್ಯಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಶಾಂತ್ ಸಂಬರಗಿ ಆಡಿಯೊ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಈ ನಡುವೆ ಪ್ರಕರಣದ ಆರೋಪಿ ಕಿಶೋರ್ ಶೆಟ್ಟಿ ಟಿವಿ9ಗೆ ಹೇಳಿಕೆ ನೀಡಿದ್ದಾರೆ.

ನವೆಂಬರ್ 1ಕ್ಕೆ ಶುಗರ್ ಡ್ಯಾಡಿ ಪುಸ್ತಕ ರಿಲೀಸ್; ಶೀಘ್ರವೇ 28 ಸೆಕೆಂಡ್​ಗಳ ಆಡಿಯೊ ಬಾಂಬ್: ಪ್ರಶಾಂತ್ ಸಂಬರಗಿ
ಪ್ರಶಾಂತ್​ ಸಂಬರಗಿ
TV9 Web
| Edited By: |

Updated on:Sep 08, 2021 | 1:05 PM

Share

ನಟಿ, ಸ್ಟಾರ್ ಆ್ಯಂಕರ್​ ಅನುಶ್ರೀ ಡ್ರಗ್ಸ್​ ಕೇಸ್​ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದಾರೆ. ಶೀಘ್ರವೇ 28 ಸೆಕೆಂಡ್​ಗಳ ಆಡಿಯೋ ಬಾಂಬ್​ ಬಿಡುಗಡೆ ಮಾಡಿ, ರಾಜಕೀಯ ವ್ಯಕ್ತಿಯ ಪ್ರಭಾವ ಬಗ್ಗೆ ಮಾಹಿತಿ ನೀಡುವೆ ಎಂದು ಅವರು ಹೇಳಿದ್ದಾರೆ. ‘‘ಮುಂದಿನ ದಿನಗಳಲ್ಲಿ ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು. ಅನುಶ್ರೀಗೆ ಬೆಂಗಳೂರಿನ ಮನೆ, ಮಂಗಳೂರಿನ ಮನೆ ಹೇಗೆ ಬಂತು? 12 ಕೋಟಿಯ ಮನೆ ಹೇಗೆ ಬಂತು ಎಂದು ಅವರು ತಿಳಿಸಬೇಕು’’ ಎಂದು ಸಂಬರಗಿ ಆಗ್ರಹಿಸಿದ್ದಾರೆ.

ನವೆಂಬರ್ 1ರಂದು ಶುಗರ್ ಡ್ಯಾಡಿ ಪುಸ್ತಕ ಬಿಡುಗಡೆ ಆಗಲಿದೆ ಹಾಗೂ ನಾಗೇಂದ್ರ ಪ್ರಸಾದ್ ಬರೆದಿರುವ ನಶೆ ನಶೆ ಹಾಡನ್ನು ಬಿಡುಗಡೆ ಮಾಡಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದ್ದಾರೆ. ಪುಸ್ತಕದಲ್ಲಿ ಶುಗರ್​ಡ್ಯಾಡಿ ಯಾರು ಎಂಬುದನ್ನೂ ಬಹಿರಂಗಗೊಳಿಸುತ್ತೇನೆ ಎಂದು ಅವರು ತಿಳಿಸಿದ್ಧಾರೆ. ಕರ್ನಾಟಕ ಉಡ್ತಾ ಪಂಜಾಬ್ ಆಗೊದನ್ನು ತಡೆಯಬೇಕಾಗಿದೆ. ಈ ಡ್ರಗ್ಸ್​ ಪ್ರಕರಣವನ್ನ ರೀ-ಓಪನ್ ಮಾಡಬೇಕು. ಕೊರೊನಾ ಬಂದಿರಲಿಲ್ಲ ಅಂದರೆ ಉಡ್ತಾ ಕರ್ನಾಟಕ ಆಗ್ತಿತ್ತು. ಕೊರೊನಾದಿಂದ ಡ್ರಗ್ಸ್​ ಪ್ರಕರಣಗಳು ಕಡಿಮೆಯಾಗಿವೆ ಎಂದು ಇದೇ ವೇಳೆ ಸಂಬರಗಿ ಹೇಳಿದ್ದಾರೆ.

ಚಾರ್ಜ್​ಶೀಟಿನ ಕುರಿತು ಮಾತನಾಡಿದ ಅವರು ‘‘ಒಬ್ಬರನ್ನ ತಪ್ಪಿಸಲು ಹೋಗಿ ಮತ್ತೊಬ್ಬ ಆರೋಪಿಯನ್ನ ಬಿಟ್ಟಿದ್ದಾರೆ. ಚಾರ್ಜ್ ಶೀಟ್​ನಲ್ಲಿ ಆರೋಪಿ ತರುಣ್ ಹೆಸರು ಯಾಕೆ ಇಲ್ಲ. ಅನುಶ್ರೀ ನಾಲ್ಕು ಘಂಟೆ ಪೊಲೀಸ್ ಠಾಣೆಯಲ್ಲಿ ಇದ್ದರು. ಅವರ ಹೇಳಿಕೆ ಒಂದು ಪೇಜ್ ಆದರೂ ಇರಬೇಕಲ್ಲ. ಅನುಶ್ರೀ ಅವರ ಹೇಳಿಕೆ ಚಾರ್ಜ್ ಶೀಟ್​ನಲ್ಲಿ ಇಲ್ಲ’’ ಎಂದು ಪ್ರಶಾಂತ್ ಸಂಬರಗಿ ಆರೋಪಿಸಿದ್ದಾರೆ.

ಇದನ್ನೂ ಓದಿ:

ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್ ವಿಚಾರ; ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ

ಅನುಶ್ರೀ ಡ್ರಗ್ಸ್ ಕೇಸ್; ಅವರ ವಿರುದ್ಧ ಆರೋಪವಿದ್ದರೂ ಹೇರ್ ಸ್ಯಾಂಪಲ್ ಪರೀಕ್ಷೆ ಏಕೆ ಮಾಡಿಲ್ಲ ಎಂದು ಪ್ರಶ್ನಿಸಿದ ಇಂದ್ರಜಿತ್

Drug Case: ಸಿಸಿಬಿ ಚಾರ್ಜ್​ಶೀಟ್​ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ; ಅವರು ಡ್ರಗ್ಸ್ ಸೇವಿಸುತ್ತಿದ್ದರು ಎಂದು ಆರೋಪಿ ಹೇಳಿಕೆ

(Prashanth Sambaragi press conference on Anchor Anushree Drug case)

Published On - 1:04 pm, Wed, 8 September 21

Follow Us
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್