AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಪತ್ನಿ ಇರುವ ಅಪಾರ್ಟ್​ಮೆಂಟ್ ನಲ್ಲಿ ದಿನಕ್ಕೊಂದು ಕರ್ಮಕಾಂಡ ನಡೆಯುತ್ತೆ: ಪ್ರಶಾಂತ್ ಸಂಬರ್ಗಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಬಗ್ಗೆ ಪ್ರಶಾಂತ್ ಸಂಬರ್ಗಿ ಮಾತನಾಡಿದ್ದಾರೆ. ಅವರ ಪತ್ನಿ ವಾಸಿಸುವ ಅಪರಾರ್ಟ್​ಮೆಂಟ್​ನಲ್ಲಿ ಆ ಕುಟುಂಬದವರಿಂದ ಹಲವು ಸಮಸ್ಯೆಗಳು ಈವರೆಗೂ ಆಗಿವೆ. ಚೆನ್ನಮ್ಮ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿವೆ ಎಂದಿದ್ದಾರೆ.

ದರ್ಶನ್ ಪತ್ನಿ ಇರುವ ಅಪಾರ್ಟ್​ಮೆಂಟ್ ನಲ್ಲಿ ದಿನಕ್ಕೊಂದು ಕರ್ಮಕಾಂಡ ನಡೆಯುತ್ತೆ: ಪ್ರಶಾಂತ್ ಸಂಬರ್ಗಿ
ದರ್ಶನ್ ತೂಗುದೀಪ-ಪ್ರಶಾಂತ್ ಸಂಬರ್ಗಿ
ಮಂಜುನಾಥ ಸಿ.
|

Updated on: Jun 18, 2024 | 5:21 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರು ದರ್ಶನ್​ರ (Darshan Thoogudeepa) ಕೆಲವು ಹಳೆ ಪ್ರಕರಣಗಳು, ರೌಡಿ ವರ್ತನೆಗಳ ಘಟನೆಗಳು ಈಗ ಒಂದೊಂದಾಗಿ ಹೊರಗೆ ಬರುತ್ತಿವೆ. ಮಾಜಿ ಬಿಗ್​ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಇದೀಗ ಮಾಧ್ಯಮಗಳ ಮುಂದೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ರೇಣುಕಾ ಸ್ವಾಮಿಯ ಕುಟುಂಬದ ಪರವಾಗಿ ನಿಲ್ಲುವುದು ದರ್ಶನ್ ಅಭಿಮಾನಿಗಳ ಕರ್ತವ್ಯ ಎಂದಿರು ಸಂಬರ್ಗಿ, ಅಪಾರ್ಟ್​ಮೆಂಟ್​ನಲ್ಲಿ ದರ್ಶನ್ ಕರ್ಮಕಾಂಡಗಳ ಬಗ್ಗೆಯೂ ಮಾತನಾಡಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದರೊಟ್ಟಿಗೆ ಮಾತನಾಡಿರುವ ಸಂಬರ್ಗಿ, ‘ದರ್ಶನ್ ರ ಪತ್ನಿ ವಿಜಯಲಕ್ಷ್ಮಿ ಅವರು ವಾಸವಿರುವ ಅಪಾರ್ಟ್​ಮೆಂಟ್​ನಲ್ಲಿಯೇ ನಾನು ಸಹ ಕಳೆದ ಕೆಲ ವರ್ಷಗಳಿಂದಲೂ ವಾಸವಿದ್ದೇನೆ. ಒಂದು ಬಾರಿಯೂ ಅವರನ್ನು ನೋಡಿದ್ದಿಲ್ಲ. ಅವರು ಹಗಲು ಬರುವುದೇ ಅಪರೂಪ, ಅವರೇನಿದ್ದರೂ ದೆವ್ವಗಳು ಓಡಾಡುವ ಸಮಯದಲ್ಲಿಯೇ ಬರುತ್ತಿದ್ದಿದ್ದು, ಅವರಿಂದಾಗಿ ಆಗಾಗ್ಗೆ ಅಪಾರ್ಟ್​ಮೆಂಟ್​ನಲ್ಲಿ ಸಮಸ್ಯೆ ಆಗುತ್ತಲೇ ಇರುತ್ತಿತ್ತು’ ಎಂದಿದ್ದಾರೆ ಸಂಬರ್ಗಿ.

ಇದನ್ನೂ ಓದಿ:ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ

‘ರಾತ್ರಿ ಬಂದರು ವಾಚ್​ಮ್ಯಾನ್​ಗೆ ಹೊಡೆದರು, ಆ ನಿಯಮ ಮುರಿದರು, ಅವರೊಟ್ಟಿಗೆ ಜಗಳ ಮಾಡಿದರು ಇದೇ ವಿಷಯಗಳು ಕೇಳಲು ಸಿಗುತ್ತಿತ್ತು. ನಮ್ಮ ಅಪಾರ್ಟ್​ಮೆಂಟ್ ಇರುವುದು ಚೆನ್ನಮ್ಮನ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಆ ಠಾಣೆಯಲ್ಲಿ ಇವರ ಮೇಲೆ ಹತ್ತಕ್ಕೂ ಪ್ರಕರಣಗಳಿರಬಹುದೇನೋ, ದಾಖಲೆ ತೆಗೆಸಿದರೆ ಗೊತ್ತಾಗುತ್ತದೆ. ಇಷ್ಟೆಲ್ಲ ಆಗಿದ್ದರೂ ಸಹ ಒಮ್ಮೆಯೂ ಸಹ ಅವರನ್ನು ಹೋಗಿ ಮಾತನಾಡಿಸಬೇಕು ಎಂದು ನಮಗೆ ಅನಿಸಿದ್ದಿಲ್ಲ’ ಎಂದಿದ್ದಾರೆ ಸಂಬರ್ಗಿ.

‘ನನ್ನ 20 ವರ್ಷದ ಸಿನಿಮಾ ಕರಿಯರ್​ನಲ್ಲಿ ಈ ವರೆಗೆ ಒಮ್ಮೆಯೂ ಸಹ ದರ್ಶನ್​ ಜೊತೆ ಫೋಟೊ ತೆಗೆಸಿಕೊಂಡಿಲ್ಲ. ಅವರ ಕೈಕುಲುಕಿಲ್ಲ. ಅವರ ಮನೆಗೆ ಹತ್ತಿರದಲ್ಲೇ ಇದ್ದರು ನಾನು ಅವರ ಸಂಪರ್ಕ ಬೆಳೆಸಲು ಪ್ರಯತ್ನಿಸಿದವನಲ್ಲ. ದುಷ್ಟರಿಂದ ದೂರ ಇರಬೇಕು ಎಂಬುದು ನನ್ನ ನಂಬಿಕೆ, ಹಾಗಾಗಿ ಆ ದೇವರೆ ನಮ್ಮನ್ನು ಅವರನ್ನೂ ದೂರ ಇಟ್ಟಿದ್ದಾನೆ’ ಎಂದಿದ್ದಾರೆ ಸಂಬರ್ಗಿ. ಕೊಲೆಯಾದ ರೇಣುಕಾ ಸ್ವಾಮಿ ಕುಟುಂಬಕ್ಕೆ ನೆರವಾಗುವ ದೃಷ್ಟಿಯಿಂದ ಅವರ ಪತ್ನಿಯ ಬ್ಯಾಂಕ್ ಖಾತೆ ಹಂಚಿಕೊಂಡಿದ್ದರು ಸಂಬರ್ಗಿ, ದರ್ಶನ್ ಅಭಿಮಾನಿಗಳು ಆ ಖಾತೆಗೆ ಹಣ ಹಾಕುವಂತೆ ಮನವಿ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?