AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಪತ್ನಿ ಇರುವ ಅಪಾರ್ಟ್​ಮೆಂಟ್ ನಲ್ಲಿ ದಿನಕ್ಕೊಂದು ಕರ್ಮಕಾಂಡ ನಡೆಯುತ್ತೆ: ಪ್ರಶಾಂತ್ ಸಂಬರ್ಗಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಬಗ್ಗೆ ಪ್ರಶಾಂತ್ ಸಂಬರ್ಗಿ ಮಾತನಾಡಿದ್ದಾರೆ. ಅವರ ಪತ್ನಿ ವಾಸಿಸುವ ಅಪರಾರ್ಟ್​ಮೆಂಟ್​ನಲ್ಲಿ ಆ ಕುಟುಂಬದವರಿಂದ ಹಲವು ಸಮಸ್ಯೆಗಳು ಈವರೆಗೂ ಆಗಿವೆ. ಚೆನ್ನಮ್ಮ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿವೆ ಎಂದಿದ್ದಾರೆ.

ದರ್ಶನ್ ಪತ್ನಿ ಇರುವ ಅಪಾರ್ಟ್​ಮೆಂಟ್ ನಲ್ಲಿ ದಿನಕ್ಕೊಂದು ಕರ್ಮಕಾಂಡ ನಡೆಯುತ್ತೆ: ಪ್ರಶಾಂತ್ ಸಂಬರ್ಗಿ
ದರ್ಶನ್ ತೂಗುದೀಪ-ಪ್ರಶಾಂತ್ ಸಂಬರ್ಗಿ
ಮಂಜುನಾಥ ಸಿ.
|

Updated on: Jun 18, 2024 | 5:21 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರು ದರ್ಶನ್​ರ (Darshan Thoogudeepa) ಕೆಲವು ಹಳೆ ಪ್ರಕರಣಗಳು, ರೌಡಿ ವರ್ತನೆಗಳ ಘಟನೆಗಳು ಈಗ ಒಂದೊಂದಾಗಿ ಹೊರಗೆ ಬರುತ್ತಿವೆ. ಮಾಜಿ ಬಿಗ್​ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಇದೀಗ ಮಾಧ್ಯಮಗಳ ಮುಂದೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ರೇಣುಕಾ ಸ್ವಾಮಿಯ ಕುಟುಂಬದ ಪರವಾಗಿ ನಿಲ್ಲುವುದು ದರ್ಶನ್ ಅಭಿಮಾನಿಗಳ ಕರ್ತವ್ಯ ಎಂದಿರು ಸಂಬರ್ಗಿ, ಅಪಾರ್ಟ್​ಮೆಂಟ್​ನಲ್ಲಿ ದರ್ಶನ್ ಕರ್ಮಕಾಂಡಗಳ ಬಗ್ಗೆಯೂ ಮಾತನಾಡಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದರೊಟ್ಟಿಗೆ ಮಾತನಾಡಿರುವ ಸಂಬರ್ಗಿ, ‘ದರ್ಶನ್ ರ ಪತ್ನಿ ವಿಜಯಲಕ್ಷ್ಮಿ ಅವರು ವಾಸವಿರುವ ಅಪಾರ್ಟ್​ಮೆಂಟ್​ನಲ್ಲಿಯೇ ನಾನು ಸಹ ಕಳೆದ ಕೆಲ ವರ್ಷಗಳಿಂದಲೂ ವಾಸವಿದ್ದೇನೆ. ಒಂದು ಬಾರಿಯೂ ಅವರನ್ನು ನೋಡಿದ್ದಿಲ್ಲ. ಅವರು ಹಗಲು ಬರುವುದೇ ಅಪರೂಪ, ಅವರೇನಿದ್ದರೂ ದೆವ್ವಗಳು ಓಡಾಡುವ ಸಮಯದಲ್ಲಿಯೇ ಬರುತ್ತಿದ್ದಿದ್ದು, ಅವರಿಂದಾಗಿ ಆಗಾಗ್ಗೆ ಅಪಾರ್ಟ್​ಮೆಂಟ್​ನಲ್ಲಿ ಸಮಸ್ಯೆ ಆಗುತ್ತಲೇ ಇರುತ್ತಿತ್ತು’ ಎಂದಿದ್ದಾರೆ ಸಂಬರ್ಗಿ.

ಇದನ್ನೂ ಓದಿ:ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ

‘ರಾತ್ರಿ ಬಂದರು ವಾಚ್​ಮ್ಯಾನ್​ಗೆ ಹೊಡೆದರು, ಆ ನಿಯಮ ಮುರಿದರು, ಅವರೊಟ್ಟಿಗೆ ಜಗಳ ಮಾಡಿದರು ಇದೇ ವಿಷಯಗಳು ಕೇಳಲು ಸಿಗುತ್ತಿತ್ತು. ನಮ್ಮ ಅಪಾರ್ಟ್​ಮೆಂಟ್ ಇರುವುದು ಚೆನ್ನಮ್ಮನ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಆ ಠಾಣೆಯಲ್ಲಿ ಇವರ ಮೇಲೆ ಹತ್ತಕ್ಕೂ ಪ್ರಕರಣಗಳಿರಬಹುದೇನೋ, ದಾಖಲೆ ತೆಗೆಸಿದರೆ ಗೊತ್ತಾಗುತ್ತದೆ. ಇಷ್ಟೆಲ್ಲ ಆಗಿದ್ದರೂ ಸಹ ಒಮ್ಮೆಯೂ ಸಹ ಅವರನ್ನು ಹೋಗಿ ಮಾತನಾಡಿಸಬೇಕು ಎಂದು ನಮಗೆ ಅನಿಸಿದ್ದಿಲ್ಲ’ ಎಂದಿದ್ದಾರೆ ಸಂಬರ್ಗಿ.

‘ನನ್ನ 20 ವರ್ಷದ ಸಿನಿಮಾ ಕರಿಯರ್​ನಲ್ಲಿ ಈ ವರೆಗೆ ಒಮ್ಮೆಯೂ ಸಹ ದರ್ಶನ್​ ಜೊತೆ ಫೋಟೊ ತೆಗೆಸಿಕೊಂಡಿಲ್ಲ. ಅವರ ಕೈಕುಲುಕಿಲ್ಲ. ಅವರ ಮನೆಗೆ ಹತ್ತಿರದಲ್ಲೇ ಇದ್ದರು ನಾನು ಅವರ ಸಂಪರ್ಕ ಬೆಳೆಸಲು ಪ್ರಯತ್ನಿಸಿದವನಲ್ಲ. ದುಷ್ಟರಿಂದ ದೂರ ಇರಬೇಕು ಎಂಬುದು ನನ್ನ ನಂಬಿಕೆ, ಹಾಗಾಗಿ ಆ ದೇವರೆ ನಮ್ಮನ್ನು ಅವರನ್ನೂ ದೂರ ಇಟ್ಟಿದ್ದಾನೆ’ ಎಂದಿದ್ದಾರೆ ಸಂಬರ್ಗಿ. ಕೊಲೆಯಾದ ರೇಣುಕಾ ಸ್ವಾಮಿ ಕುಟುಂಬಕ್ಕೆ ನೆರವಾಗುವ ದೃಷ್ಟಿಯಿಂದ ಅವರ ಪತ್ನಿಯ ಬ್ಯಾಂಕ್ ಖಾತೆ ಹಂಚಿಕೊಂಡಿದ್ದರು ಸಂಬರ್ಗಿ, ದರ್ಶನ್ ಅಭಿಮಾನಿಗಳು ಆ ಖಾತೆಗೆ ಹಣ ಹಾಕುವಂತೆ ಮನವಿ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ