AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಪತ್ನಿ ಇರುವ ಅಪಾರ್ಟ್​ಮೆಂಟ್ ನಲ್ಲಿ ದಿನಕ್ಕೊಂದು ಕರ್ಮಕಾಂಡ ನಡೆಯುತ್ತೆ: ಪ್ರಶಾಂತ್ ಸಂಬರ್ಗಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಬಗ್ಗೆ ಪ್ರಶಾಂತ್ ಸಂಬರ್ಗಿ ಮಾತನಾಡಿದ್ದಾರೆ. ಅವರ ಪತ್ನಿ ವಾಸಿಸುವ ಅಪರಾರ್ಟ್​ಮೆಂಟ್​ನಲ್ಲಿ ಆ ಕುಟುಂಬದವರಿಂದ ಹಲವು ಸಮಸ್ಯೆಗಳು ಈವರೆಗೂ ಆಗಿವೆ. ಚೆನ್ನಮ್ಮ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿವೆ ಎಂದಿದ್ದಾರೆ.

ದರ್ಶನ್ ಪತ್ನಿ ಇರುವ ಅಪಾರ್ಟ್​ಮೆಂಟ್ ನಲ್ಲಿ ದಿನಕ್ಕೊಂದು ಕರ್ಮಕಾಂಡ ನಡೆಯುತ್ತೆ: ಪ್ರಶಾಂತ್ ಸಂಬರ್ಗಿ
ದರ್ಶನ್ ತೂಗುದೀಪ-ಪ್ರಶಾಂತ್ ಸಂಬರ್ಗಿ
ಮಂಜುನಾಥ ಸಿ.
|

Updated on: Jun 18, 2024 | 5:21 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರು ದರ್ಶನ್​ರ (Darshan Thoogudeepa) ಕೆಲವು ಹಳೆ ಪ್ರಕರಣಗಳು, ರೌಡಿ ವರ್ತನೆಗಳ ಘಟನೆಗಳು ಈಗ ಒಂದೊಂದಾಗಿ ಹೊರಗೆ ಬರುತ್ತಿವೆ. ಮಾಜಿ ಬಿಗ್​ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಇದೀಗ ಮಾಧ್ಯಮಗಳ ಮುಂದೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ರೇಣುಕಾ ಸ್ವಾಮಿಯ ಕುಟುಂಬದ ಪರವಾಗಿ ನಿಲ್ಲುವುದು ದರ್ಶನ್ ಅಭಿಮಾನಿಗಳ ಕರ್ತವ್ಯ ಎಂದಿರು ಸಂಬರ್ಗಿ, ಅಪಾರ್ಟ್​ಮೆಂಟ್​ನಲ್ಲಿ ದರ್ಶನ್ ಕರ್ಮಕಾಂಡಗಳ ಬಗ್ಗೆಯೂ ಮಾತನಾಡಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದರೊಟ್ಟಿಗೆ ಮಾತನಾಡಿರುವ ಸಂಬರ್ಗಿ, ‘ದರ್ಶನ್ ರ ಪತ್ನಿ ವಿಜಯಲಕ್ಷ್ಮಿ ಅವರು ವಾಸವಿರುವ ಅಪಾರ್ಟ್​ಮೆಂಟ್​ನಲ್ಲಿಯೇ ನಾನು ಸಹ ಕಳೆದ ಕೆಲ ವರ್ಷಗಳಿಂದಲೂ ವಾಸವಿದ್ದೇನೆ. ಒಂದು ಬಾರಿಯೂ ಅವರನ್ನು ನೋಡಿದ್ದಿಲ್ಲ. ಅವರು ಹಗಲು ಬರುವುದೇ ಅಪರೂಪ, ಅವರೇನಿದ್ದರೂ ದೆವ್ವಗಳು ಓಡಾಡುವ ಸಮಯದಲ್ಲಿಯೇ ಬರುತ್ತಿದ್ದಿದ್ದು, ಅವರಿಂದಾಗಿ ಆಗಾಗ್ಗೆ ಅಪಾರ್ಟ್​ಮೆಂಟ್​ನಲ್ಲಿ ಸಮಸ್ಯೆ ಆಗುತ್ತಲೇ ಇರುತ್ತಿತ್ತು’ ಎಂದಿದ್ದಾರೆ ಸಂಬರ್ಗಿ.

ಇದನ್ನೂ ಓದಿ:ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ

‘ರಾತ್ರಿ ಬಂದರು ವಾಚ್​ಮ್ಯಾನ್​ಗೆ ಹೊಡೆದರು, ಆ ನಿಯಮ ಮುರಿದರು, ಅವರೊಟ್ಟಿಗೆ ಜಗಳ ಮಾಡಿದರು ಇದೇ ವಿಷಯಗಳು ಕೇಳಲು ಸಿಗುತ್ತಿತ್ತು. ನಮ್ಮ ಅಪಾರ್ಟ್​ಮೆಂಟ್ ಇರುವುದು ಚೆನ್ನಮ್ಮನ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಆ ಠಾಣೆಯಲ್ಲಿ ಇವರ ಮೇಲೆ ಹತ್ತಕ್ಕೂ ಪ್ರಕರಣಗಳಿರಬಹುದೇನೋ, ದಾಖಲೆ ತೆಗೆಸಿದರೆ ಗೊತ್ತಾಗುತ್ತದೆ. ಇಷ್ಟೆಲ್ಲ ಆಗಿದ್ದರೂ ಸಹ ಒಮ್ಮೆಯೂ ಸಹ ಅವರನ್ನು ಹೋಗಿ ಮಾತನಾಡಿಸಬೇಕು ಎಂದು ನಮಗೆ ಅನಿಸಿದ್ದಿಲ್ಲ’ ಎಂದಿದ್ದಾರೆ ಸಂಬರ್ಗಿ.

‘ನನ್ನ 20 ವರ್ಷದ ಸಿನಿಮಾ ಕರಿಯರ್​ನಲ್ಲಿ ಈ ವರೆಗೆ ಒಮ್ಮೆಯೂ ಸಹ ದರ್ಶನ್​ ಜೊತೆ ಫೋಟೊ ತೆಗೆಸಿಕೊಂಡಿಲ್ಲ. ಅವರ ಕೈಕುಲುಕಿಲ್ಲ. ಅವರ ಮನೆಗೆ ಹತ್ತಿರದಲ್ಲೇ ಇದ್ದರು ನಾನು ಅವರ ಸಂಪರ್ಕ ಬೆಳೆಸಲು ಪ್ರಯತ್ನಿಸಿದವನಲ್ಲ. ದುಷ್ಟರಿಂದ ದೂರ ಇರಬೇಕು ಎಂಬುದು ನನ್ನ ನಂಬಿಕೆ, ಹಾಗಾಗಿ ಆ ದೇವರೆ ನಮ್ಮನ್ನು ಅವರನ್ನೂ ದೂರ ಇಟ್ಟಿದ್ದಾನೆ’ ಎಂದಿದ್ದಾರೆ ಸಂಬರ್ಗಿ. ಕೊಲೆಯಾದ ರೇಣುಕಾ ಸ್ವಾಮಿ ಕುಟುಂಬಕ್ಕೆ ನೆರವಾಗುವ ದೃಷ್ಟಿಯಿಂದ ಅವರ ಪತ್ನಿಯ ಬ್ಯಾಂಕ್ ಖಾತೆ ಹಂಚಿಕೊಂಡಿದ್ದರು ಸಂಬರ್ಗಿ, ದರ್ಶನ್ ಅಭಿಮಾನಿಗಳು ಆ ಖಾತೆಗೆ ಹಣ ಹಾಕುವಂತೆ ಮನವಿ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ