AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಪತ್ನಿ ಇರುವ ಅಪಾರ್ಟ್​ಮೆಂಟ್ ನಲ್ಲಿ ದಿನಕ್ಕೊಂದು ಕರ್ಮಕಾಂಡ ನಡೆಯುತ್ತೆ: ಪ್ರಶಾಂತ್ ಸಂಬರ್ಗಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಬಗ್ಗೆ ಪ್ರಶಾಂತ್ ಸಂಬರ್ಗಿ ಮಾತನಾಡಿದ್ದಾರೆ. ಅವರ ಪತ್ನಿ ವಾಸಿಸುವ ಅಪರಾರ್ಟ್​ಮೆಂಟ್​ನಲ್ಲಿ ಆ ಕುಟುಂಬದವರಿಂದ ಹಲವು ಸಮಸ್ಯೆಗಳು ಈವರೆಗೂ ಆಗಿವೆ. ಚೆನ್ನಮ್ಮ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿವೆ ಎಂದಿದ್ದಾರೆ.

ದರ್ಶನ್ ಪತ್ನಿ ಇರುವ ಅಪಾರ್ಟ್​ಮೆಂಟ್ ನಲ್ಲಿ ದಿನಕ್ಕೊಂದು ಕರ್ಮಕಾಂಡ ನಡೆಯುತ್ತೆ: ಪ್ರಶಾಂತ್ ಸಂಬರ್ಗಿ
ದರ್ಶನ್ ತೂಗುದೀಪ-ಪ್ರಶಾಂತ್ ಸಂಬರ್ಗಿ
ಮಂಜುನಾಥ ಸಿ.
|

Updated on: Jun 18, 2024 | 5:21 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರು ದರ್ಶನ್​ರ (Darshan Thoogudeepa) ಕೆಲವು ಹಳೆ ಪ್ರಕರಣಗಳು, ರೌಡಿ ವರ್ತನೆಗಳ ಘಟನೆಗಳು ಈಗ ಒಂದೊಂದಾಗಿ ಹೊರಗೆ ಬರುತ್ತಿವೆ. ಮಾಜಿ ಬಿಗ್​ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಇದೀಗ ಮಾಧ್ಯಮಗಳ ಮುಂದೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ರೇಣುಕಾ ಸ್ವಾಮಿಯ ಕುಟುಂಬದ ಪರವಾಗಿ ನಿಲ್ಲುವುದು ದರ್ಶನ್ ಅಭಿಮಾನಿಗಳ ಕರ್ತವ್ಯ ಎಂದಿರು ಸಂಬರ್ಗಿ, ಅಪಾರ್ಟ್​ಮೆಂಟ್​ನಲ್ಲಿ ದರ್ಶನ್ ಕರ್ಮಕಾಂಡಗಳ ಬಗ್ಗೆಯೂ ಮಾತನಾಡಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದರೊಟ್ಟಿಗೆ ಮಾತನಾಡಿರುವ ಸಂಬರ್ಗಿ, ‘ದರ್ಶನ್ ರ ಪತ್ನಿ ವಿಜಯಲಕ್ಷ್ಮಿ ಅವರು ವಾಸವಿರುವ ಅಪಾರ್ಟ್​ಮೆಂಟ್​ನಲ್ಲಿಯೇ ನಾನು ಸಹ ಕಳೆದ ಕೆಲ ವರ್ಷಗಳಿಂದಲೂ ವಾಸವಿದ್ದೇನೆ. ಒಂದು ಬಾರಿಯೂ ಅವರನ್ನು ನೋಡಿದ್ದಿಲ್ಲ. ಅವರು ಹಗಲು ಬರುವುದೇ ಅಪರೂಪ, ಅವರೇನಿದ್ದರೂ ದೆವ್ವಗಳು ಓಡಾಡುವ ಸಮಯದಲ್ಲಿಯೇ ಬರುತ್ತಿದ್ದಿದ್ದು, ಅವರಿಂದಾಗಿ ಆಗಾಗ್ಗೆ ಅಪಾರ್ಟ್​ಮೆಂಟ್​ನಲ್ಲಿ ಸಮಸ್ಯೆ ಆಗುತ್ತಲೇ ಇರುತ್ತಿತ್ತು’ ಎಂದಿದ್ದಾರೆ ಸಂಬರ್ಗಿ.

ಇದನ್ನೂ ಓದಿ:ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ

‘ರಾತ್ರಿ ಬಂದರು ವಾಚ್​ಮ್ಯಾನ್​ಗೆ ಹೊಡೆದರು, ಆ ನಿಯಮ ಮುರಿದರು, ಅವರೊಟ್ಟಿಗೆ ಜಗಳ ಮಾಡಿದರು ಇದೇ ವಿಷಯಗಳು ಕೇಳಲು ಸಿಗುತ್ತಿತ್ತು. ನಮ್ಮ ಅಪಾರ್ಟ್​ಮೆಂಟ್ ಇರುವುದು ಚೆನ್ನಮ್ಮನ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಆ ಠಾಣೆಯಲ್ಲಿ ಇವರ ಮೇಲೆ ಹತ್ತಕ್ಕೂ ಪ್ರಕರಣಗಳಿರಬಹುದೇನೋ, ದಾಖಲೆ ತೆಗೆಸಿದರೆ ಗೊತ್ತಾಗುತ್ತದೆ. ಇಷ್ಟೆಲ್ಲ ಆಗಿದ್ದರೂ ಸಹ ಒಮ್ಮೆಯೂ ಸಹ ಅವರನ್ನು ಹೋಗಿ ಮಾತನಾಡಿಸಬೇಕು ಎಂದು ನಮಗೆ ಅನಿಸಿದ್ದಿಲ್ಲ’ ಎಂದಿದ್ದಾರೆ ಸಂಬರ್ಗಿ.

‘ನನ್ನ 20 ವರ್ಷದ ಸಿನಿಮಾ ಕರಿಯರ್​ನಲ್ಲಿ ಈ ವರೆಗೆ ಒಮ್ಮೆಯೂ ಸಹ ದರ್ಶನ್​ ಜೊತೆ ಫೋಟೊ ತೆಗೆಸಿಕೊಂಡಿಲ್ಲ. ಅವರ ಕೈಕುಲುಕಿಲ್ಲ. ಅವರ ಮನೆಗೆ ಹತ್ತಿರದಲ್ಲೇ ಇದ್ದರು ನಾನು ಅವರ ಸಂಪರ್ಕ ಬೆಳೆಸಲು ಪ್ರಯತ್ನಿಸಿದವನಲ್ಲ. ದುಷ್ಟರಿಂದ ದೂರ ಇರಬೇಕು ಎಂಬುದು ನನ್ನ ನಂಬಿಕೆ, ಹಾಗಾಗಿ ಆ ದೇವರೆ ನಮ್ಮನ್ನು ಅವರನ್ನೂ ದೂರ ಇಟ್ಟಿದ್ದಾನೆ’ ಎಂದಿದ್ದಾರೆ ಸಂಬರ್ಗಿ. ಕೊಲೆಯಾದ ರೇಣುಕಾ ಸ್ವಾಮಿ ಕುಟುಂಬಕ್ಕೆ ನೆರವಾಗುವ ದೃಷ್ಟಿಯಿಂದ ಅವರ ಪತ್ನಿಯ ಬ್ಯಾಂಕ್ ಖಾತೆ ಹಂಚಿಕೊಂಡಿದ್ದರು ಸಂಬರ್ಗಿ, ದರ್ಶನ್ ಅಭಿಮಾನಿಗಳು ಆ ಖಾತೆಗೆ ಹಣ ಹಾಕುವಂತೆ ಮನವಿ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು