AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಥಮ್​​ಗೆ ಧಮ್ಕಿ ಹಾಕಿದ ಕೇಸ್: ದರ್ಶನ್ ಇರುವ ಜೈಲಿಗೆ ಬೇಕರಿ ರಘು, ಯಶಸ್ವಿನಿ ಗೌಡ ಶಿಫ್ಟ್

ನಟ ಪ್ರಥಮ್ ಅವರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಬೇಕರಿ ರಘು, ಯಶಸ್ವಿನಿ ಗೌಡಗೆ ಜಾಮೀನು ಸಿಕ್ಕಿತ್ತು. ಆದರೆ ಜಾಮೀನು ಪಡೆದ ಬಳಿಕ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆ ಹಾಕಿದ ಆರೋಪ ಎದುರಾಯಿತು. ಹಾಗಾಗಿ ಅವರ ಜಾಮೀನು ರದ್ದು ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

ಪ್ರಥಮ್​​ಗೆ ಧಮ್ಕಿ ಹಾಕಿದ ಕೇಸ್: ದರ್ಶನ್ ಇರುವ ಜೈಲಿಗೆ ಬೇಕರಿ ರಘು, ಯಶಸ್ವಿನಿ ಗೌಡ ಶಿಫ್ಟ್
Darshan, Bakery Raghu, Yashaswini Gowda, Pratham
ನವೀನ್ ಕುಮಾರ್ ಟಿ
| Edited By: |

Updated on: Sep 10, 2025 | 7:35 PM

Share

ರಾಮಯ್ಯನಪಾಳ್ಯ ಫಾರ್ಮ್ ಹೌಸ್​​ನಲ್ಲಿ ನಟ ಪ್ರಥಮ್ (Pratham) ಅವರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಬೇಕರಿ ರಘು (Bakery Raghu) ಮತ್ತು ಯಶಸ್ವಿನಿ ಗೌಡ (Yashaswini Gowda) ಪ್ರಮುಖ ಆರೋಪಿಗಳಾಗಿದ್ದಾರೆ. ಇಷ್ಟು ದಿನ ಅವರು ಜಾಮೀನು ಪಡೆದ ಹೊರಗಿದ್ದರು. ಆದರೆ ಈಗ ಅವರ ಜಾಮೀನು ರದ್ದು ಮಾಡಲಾಗಿದೆ. ದೊಡ್ಡಬಳ್ಳಾಪುರ ಜೆಎಂಎಫ್‌ಸಿ ನ್ಯಾಯಾಲಯದಿಂದ ಬೇಲ್ ರದ್ದಾಗಿದೆ. ಇಬ್ಬರನ್ನೂ ಜೈಲಿಗೆ ಕಳಿಸುವಂತೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ದರ್ಶನ್ ಅಭಿಮಾನಿ ಆಗಿರುವ ಬೇಕರಿ ರಘು ಈಗ ದರ್ಶನ್ ಇರುವ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾನೆ.

ಹಲವು ಷರತ್ತುಗಳ ಮೇಲೆ ಬೇಕರಿ ರಘು ಮತ್ತು ಯಶಸ್ವಿನಿ ಗೌಡ ಜಾಮೀನು ಪಡೆದಿದ್ದರು. ಆದರೆ ಬೇಲ್ ಪಡೆದ ನಂತರವೂ ಪ್ರಥಮ್ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಧಮ್ಕಿ ಹಾಕಿದರು ಎಂಬ ಆರೋಪ ಎದುರಾಗಿದೆ. ಧಮ್ಕಿ ಬಗ್ಗೆ ಕಳೆದ ಶನಿವಾರ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ನಟ ಪ್ರಥಮ್ ಅವರು ದೂರು ನೀಡಿದ್ದರು.

ಪ್ರಥಮ್ ನೀಡಿದ ದೂರಿನ ಪ್ರತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇಂದು (ಸೆಪ್ಟೆಂಬರ್ 10) ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರ ಬೇಲ್ ಕ್ಯಾನ್ಸಲ್ ಮಾಡಿದರು. ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡುವಂತೆ ಆದೇಶಿಸಿದ್ದಾರೆ. ದರ್ಶನ್ ಇರುವ ಪರಪ್ಪನ ಅಗ್ರಹಾರ ಜೈಲಿಗೆ ಬೇಕರಿ ರಘು ಮತ್ತು ಯಶಸ್ವಿನಿ ಗೌಡ ಅವರನ್ನು ಕಳಿಸಲಾಗಿದೆ.

ಇದನ್ನೂ ಓದಿ
Image
ಅಭಿಮಾನಿಗಳಿಗೆ ಜೈಲಿಂದಲೇ ಸಂದೇಶ ಕಳಿಸಿದ ನಟ ದರ್ಶನ್
Image
20 ಕೋಟಿ ರೂ. ಕೊಟ್ಟರು ಎಂಬುದೆಲ್ಲ ಸುಳ್ಳು: ರೇಣುಕಾಸ್ವಾಮಿ ತಂದೆ ಖಡಕ್ ಮಾತು
Image
ಯಾವ ಜೈಲಿಗೆ ಹೋಗಲಿದ್ದಾರೆ ದರ್ಶನ್, ಬಳ್ಳಾರಿ ಜೈಲಿನಲ್ಲಿ ಸಿದ್ಧತೆ?
Image
ಸುಪ್ರೀಂ ಚುರುಕು; ಬೇಗ ಇತ್ಯರ್ಥವಾಗುತ್ತಾ ರೇಣುಕಾಸ್ವಾಮಿ ಪ್ರಕರಣ?

ದರ್ಶನ್ ಬಗ್ಗೆ ಪ್ರಥಮ್ ಅವರು ನೀಡಿದ ಕೆಲವು ಹೇಳಿಕೆಗಳಿಂದ ಡಿ ಬಾಸ್ ಅಭಿಮಾನಿಗಳು ಗರಂ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಮಾತ್ರವಲ್ಲದೇ ನೇರವಾಗಿಯೂ ಪ್ರಥಮ್ ಅವರಿಗೆ ಬೆದರಿಕೆ ಹಾಕಲಾಗಿತ್ತು. ಅವರ ಮೇಲೆ ಹಲ್ಲೆಗೆ ಯತ್ನ ನಡೆದಿತ್ತು. ಈ ಬಗ್ಗೆ ದರ್ಶನ್ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲಿಲ್ಲ. ದರ್ಶನ್ ಪ್ರತಿಕ್ರಿಯಿಸಬೇಕು ಎಂದು ಪ್ರಥಮ್ ಪಟ್ಟು ಹಿಡಿದಿದ್ದರು.

ಇದನ್ನೂ ಓದಿ: ಯಶಸ್ವಿನಿ ಗೌಡ ವಿರುದ್ಧ ದೂರು ನೀಡಿದ ಪ್ರಥಮ್: ಹೇಳಿದ್ದೇನು?

‘ಈ ಘಟನೆಯಿಂದ ನನಗೆ ಬೇಸರ ಆಗಿದೆ. ಆದಷ್ಟು ಕಡಿಮೆ ಮಾತನಾಡೋಣ ಎಂದುಕೊಂಡಿದ್ದೇನೆ. ಶೀಘ್ರದಲ್ಲೇ ನಿಮ್ಮೆಲ್ಲರಿಗೆ ಸತ್ಯ ಗೊತ್ತಾಗಬೇಕು. ಕೋರ್ಟ್ ಕೇಸ್ ಬೆಳೆಸಬೇಕು ಎಂಬುದು ನನಗೆ ಇಲ್ಲ. ಯಾರನ್ನೋ ಅರೆಸ್ಟ್ ಮಾಡಿಸಿ ನಾನು ದೊಡ್ಡ ಮನುಷ್ಯ ಆಗಬೇಕಿಲ್ಲ. ಜೀವನದಲ್ಲಿ ನಾನು ಯಾರಿಗೂ ಏರು ಧ್ವನಿಯಲ್ಲಿ ಮಾತನಾಡಿದವರಲ್ಲ. ಊರಿನಲ್ಲಿ ನಾನು ತೋಟ ನೋಡಿಕೊಳ್ಳುತ್ತಾ ಆರಾಮಾಗಿ ಇದ್ದೇನೆ. ಮನಸ್ಸಿಗೆ ನೆಮ್ಮದಿ ಇದೆ. ಸಿನಿಮಾ ರಿಲೀಸ್ ಸಮಯಕ್ಕೆ ಬರುತ್ತೇನೆ’ ಎಂದು ಪ್ರಥಮ್ ಇತ್ತೀಚೆಗೆ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ