AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಥಮ್​​ಗೆ ಧಮ್ಕಿ ಹಾಕಿದ ಕೇಸ್: ದರ್ಶನ್ ಇರುವ ಜೈಲಿಗೆ ಬೇಕರಿ ರಘು, ಯಶಸ್ವಿನಿ ಗೌಡ ಶಿಫ್ಟ್

ನಟ ಪ್ರಥಮ್ ಅವರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಬೇಕರಿ ರಘು, ಯಶಸ್ವಿನಿ ಗೌಡಗೆ ಜಾಮೀನು ಸಿಕ್ಕಿತ್ತು. ಆದರೆ ಜಾಮೀನು ಪಡೆದ ಬಳಿಕ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆ ಹಾಕಿದ ಆರೋಪ ಎದುರಾಯಿತು. ಹಾಗಾಗಿ ಅವರ ಜಾಮೀನು ರದ್ದು ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

ಪ್ರಥಮ್​​ಗೆ ಧಮ್ಕಿ ಹಾಕಿದ ಕೇಸ್: ದರ್ಶನ್ ಇರುವ ಜೈಲಿಗೆ ಬೇಕರಿ ರಘು, ಯಶಸ್ವಿನಿ ಗೌಡ ಶಿಫ್ಟ್
Darshan, Bakery Raghu, Yashaswini Gowda, Pratham
ನವೀನ್ ಕುಮಾರ್ ಟಿ
| Edited By: |

Updated on: Sep 10, 2025 | 7:35 PM

Share

ರಾಮಯ್ಯನಪಾಳ್ಯ ಫಾರ್ಮ್ ಹೌಸ್​​ನಲ್ಲಿ ನಟ ಪ್ರಥಮ್ (Pratham) ಅವರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಬೇಕರಿ ರಘು (Bakery Raghu) ಮತ್ತು ಯಶಸ್ವಿನಿ ಗೌಡ (Yashaswini Gowda) ಪ್ರಮುಖ ಆರೋಪಿಗಳಾಗಿದ್ದಾರೆ. ಇಷ್ಟು ದಿನ ಅವರು ಜಾಮೀನು ಪಡೆದ ಹೊರಗಿದ್ದರು. ಆದರೆ ಈಗ ಅವರ ಜಾಮೀನು ರದ್ದು ಮಾಡಲಾಗಿದೆ. ದೊಡ್ಡಬಳ್ಳಾಪುರ ಜೆಎಂಎಫ್‌ಸಿ ನ್ಯಾಯಾಲಯದಿಂದ ಬೇಲ್ ರದ್ದಾಗಿದೆ. ಇಬ್ಬರನ್ನೂ ಜೈಲಿಗೆ ಕಳಿಸುವಂತೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ದರ್ಶನ್ ಅಭಿಮಾನಿ ಆಗಿರುವ ಬೇಕರಿ ರಘು ಈಗ ದರ್ಶನ್ ಇರುವ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾನೆ.

ಹಲವು ಷರತ್ತುಗಳ ಮೇಲೆ ಬೇಕರಿ ರಘು ಮತ್ತು ಯಶಸ್ವಿನಿ ಗೌಡ ಜಾಮೀನು ಪಡೆದಿದ್ದರು. ಆದರೆ ಬೇಲ್ ಪಡೆದ ನಂತರವೂ ಪ್ರಥಮ್ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಧಮ್ಕಿ ಹಾಕಿದರು ಎಂಬ ಆರೋಪ ಎದುರಾಗಿದೆ. ಧಮ್ಕಿ ಬಗ್ಗೆ ಕಳೆದ ಶನಿವಾರ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ನಟ ಪ್ರಥಮ್ ಅವರು ದೂರು ನೀಡಿದ್ದರು.

ಪ್ರಥಮ್ ನೀಡಿದ ದೂರಿನ ಪ್ರತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇಂದು (ಸೆಪ್ಟೆಂಬರ್ 10) ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರ ಬೇಲ್ ಕ್ಯಾನ್ಸಲ್ ಮಾಡಿದರು. ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡುವಂತೆ ಆದೇಶಿಸಿದ್ದಾರೆ. ದರ್ಶನ್ ಇರುವ ಪರಪ್ಪನ ಅಗ್ರಹಾರ ಜೈಲಿಗೆ ಬೇಕರಿ ರಘು ಮತ್ತು ಯಶಸ್ವಿನಿ ಗೌಡ ಅವರನ್ನು ಕಳಿಸಲಾಗಿದೆ.

ಇದನ್ನೂ ಓದಿ
Image
ಅಭಿಮಾನಿಗಳಿಗೆ ಜೈಲಿಂದಲೇ ಸಂದೇಶ ಕಳಿಸಿದ ನಟ ದರ್ಶನ್
Image
20 ಕೋಟಿ ರೂ. ಕೊಟ್ಟರು ಎಂಬುದೆಲ್ಲ ಸುಳ್ಳು: ರೇಣುಕಾಸ್ವಾಮಿ ತಂದೆ ಖಡಕ್ ಮಾತು
Image
ಯಾವ ಜೈಲಿಗೆ ಹೋಗಲಿದ್ದಾರೆ ದರ್ಶನ್, ಬಳ್ಳಾರಿ ಜೈಲಿನಲ್ಲಿ ಸಿದ್ಧತೆ?
Image
ಸುಪ್ರೀಂ ಚುರುಕು; ಬೇಗ ಇತ್ಯರ್ಥವಾಗುತ್ತಾ ರೇಣುಕಾಸ್ವಾಮಿ ಪ್ರಕರಣ?

ದರ್ಶನ್ ಬಗ್ಗೆ ಪ್ರಥಮ್ ಅವರು ನೀಡಿದ ಕೆಲವು ಹೇಳಿಕೆಗಳಿಂದ ಡಿ ಬಾಸ್ ಅಭಿಮಾನಿಗಳು ಗರಂ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಮಾತ್ರವಲ್ಲದೇ ನೇರವಾಗಿಯೂ ಪ್ರಥಮ್ ಅವರಿಗೆ ಬೆದರಿಕೆ ಹಾಕಲಾಗಿತ್ತು. ಅವರ ಮೇಲೆ ಹಲ್ಲೆಗೆ ಯತ್ನ ನಡೆದಿತ್ತು. ಈ ಬಗ್ಗೆ ದರ್ಶನ್ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲಿಲ್ಲ. ದರ್ಶನ್ ಪ್ರತಿಕ್ರಿಯಿಸಬೇಕು ಎಂದು ಪ್ರಥಮ್ ಪಟ್ಟು ಹಿಡಿದಿದ್ದರು.

ಇದನ್ನೂ ಓದಿ: ಯಶಸ್ವಿನಿ ಗೌಡ ವಿರುದ್ಧ ದೂರು ನೀಡಿದ ಪ್ರಥಮ್: ಹೇಳಿದ್ದೇನು?

‘ಈ ಘಟನೆಯಿಂದ ನನಗೆ ಬೇಸರ ಆಗಿದೆ. ಆದಷ್ಟು ಕಡಿಮೆ ಮಾತನಾಡೋಣ ಎಂದುಕೊಂಡಿದ್ದೇನೆ. ಶೀಘ್ರದಲ್ಲೇ ನಿಮ್ಮೆಲ್ಲರಿಗೆ ಸತ್ಯ ಗೊತ್ತಾಗಬೇಕು. ಕೋರ್ಟ್ ಕೇಸ್ ಬೆಳೆಸಬೇಕು ಎಂಬುದು ನನಗೆ ಇಲ್ಲ. ಯಾರನ್ನೋ ಅರೆಸ್ಟ್ ಮಾಡಿಸಿ ನಾನು ದೊಡ್ಡ ಮನುಷ್ಯ ಆಗಬೇಕಿಲ್ಲ. ಜೀವನದಲ್ಲಿ ನಾನು ಯಾರಿಗೂ ಏರು ಧ್ವನಿಯಲ್ಲಿ ಮಾತನಾಡಿದವರಲ್ಲ. ಊರಿನಲ್ಲಿ ನಾನು ತೋಟ ನೋಡಿಕೊಳ್ಳುತ್ತಾ ಆರಾಮಾಗಿ ಇದ್ದೇನೆ. ಮನಸ್ಸಿಗೆ ನೆಮ್ಮದಿ ಇದೆ. ಸಿನಿಮಾ ರಿಲೀಸ್ ಸಮಯಕ್ಕೆ ಬರುತ್ತೇನೆ’ ಎಂದು ಪ್ರಥಮ್ ಇತ್ತೀಚೆಗೆ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?