AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​ ದಿನ ಧ್ರುವ ಸರ್ಜಾ ಮನಸ್ಸಲ್ಲಿ ಇದ್ದ ನೋವು ಏನು? ಎಲ್ಲವನ್ನೂ ತೆರೆದಿಟ್ಟ ಪ್ರಥಮ್​

ಚಿರಂಜೀವಿ ಸರ್ಜಾ ನಟನೆಯ ‘ರಾಜಮಾರ್ತಾಂಡ’ ಸಿನಿಮಾದ ಸುದ್ದಿಗೋಷ್ಠಿ ಭಾನುವಾರ (ಅ.1) ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ, ಮೇಘನಾ ರಾಜ್​, ಸುಂದರ್​ ರಾಜ್​, ಪ್ರಥಮ್​ ಮುಂತಾದವರು ಹಾಜರಿ ಹಾಕಿದ್ದರು. ಈ ವೇಳೆ ಪ್ರಥಮ್​ ಅವರು ಒಂದು ವಿಚಾರವನ್ನು ಬಹಿರಂಗಪಡಿಸಿದರು.

ಕರ್ನಾಟಕ ಬಂದ್​ ದಿನ ಧ್ರುವ ಸರ್ಜಾ ಮನಸ್ಸಲ್ಲಿ ಇದ್ದ ನೋವು ಏನು? ಎಲ್ಲವನ್ನೂ ತೆರೆದಿಟ್ಟ ಪ್ರಥಮ್​
ಪ್ರಥಮ್​, ಧ್ರುವ ಸರ್ಜಾ
ಮದನ್​ ಕುಮಾರ್​
|

Updated on: Oct 02, 2023 | 7:25 PM

Share

ನಟ ಧ್ರುವ ಸರ್ಜಾ (Dhruva Sarja) ಅವರು ಸೆಪ್ಟೆಂಬರ್​ 29ರಂದು ಕರ್ನಾಟಕ ಬಂದ್​​ನಲ್ಲಿ ಭಾಗಿ ಆಗಿದ್ದರು. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ರೈತರಿಗೆ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಈ ಪ್ರತಿಭಟನೆಯಲ್ಲಿ ಇಡೀ ಕನ್ನಡ ಚಿತ್ರರಂಗ ಭಾಗಿ ಆಗಿತ್ತು. ಅಂದು ಧ್ರುವ ಸರ್ಜಾ ಅವರು ಮುನಿಸಿಕೊಂಡಿದ್ದರೇ ಎಂಬ ಅನುಮಾನ ಕೆಲವರಿಗೆ ಮೂಡಿದ್ದುಂಟು. ಬೇರೆ ನಟರ ಜೊತೆ ಅವರು ಹೆಚ್ಚು ಮಾತನಾಡದೇ ಇದ್ದಿದ್ದೇ ಅದಕ್ಕೆ ಕಾರಣ ಆಗಿತ್ತು. ಅಷ್ಟಕ್ಕೂ ಅಂದು ಧ್ರುವ ಸರ್ಜಾ ಸೈಲೆಂಟ್​ ಆಗಿ ಇದ್ದಿದ್ದು ಯಾಕೆ ಎಂಬುದನ್ನು ನಟ ಪ್ರಥಮ್​ (Pratham) ವಿವರಿಸಿದ್ದಾರೆ. ‘ರಾಜಮಾರ್ತಾಂಡ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ (Rajamarthanda Press meet) ಅವರು ಈ ವಿಚಾರ ಹಂಚಿಕೊಂಡಿದ್ದಾರೆ.

ಚಿರಂಜೀವಿ ಸರ್ಜಾ ನಟನೆಯ ‘ರಾಜಮಾರ್ತಾಂಡ’ ಸಿನಿಮಾದ ಸುದ್ದಿಗೋಷ್ಠಿ ಅಕ್ಟೋಬರ್​ 1ರಂದು ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ, ಮೇಘನಾ ರಾಜ್​, ಸುಂದರ್​ ರಾಜ್​, ಪ್ರಥಮ್​ ಮುಂತಾದವರು ಹಾಜರಿ ಹಾಕಿದ್ದರು. ಈ ವೇಳೆ ಪ್ರಥಮ್​ ಅವರು ಒಂದು ವಿಚಾರವನ್ನು ಬಹಿರಂಗಪಡಿಸಿದರು. ‘ಯಾರಿಗೂ ಗೊತ್ತಿಲ್ಲದ ಒಂದು ವಿಚಾರ ಹೇಳ್ತೀನಿ. ಸೆಪ್ಟೆಂಬರ್​ 29ರಂದು ಕರ್ನಾಟಕ ಬಂದ್​ ನಡೆಯಿತು. ಅದರ ಹಿಂದಿನ ದಿನ ಒಂದು ಘಟನೆ ನಡೆದಿತ್ತು. ಧ್ರುವ ಸರ್ಜಾ ಅವರ ಅಭಿಮಾನಿ ರಘುನಾಥ್​ ರಸ್ತೆ ಅಪಘಾತದಲ್ಲಿ ನಿಧನನಾದ’ ಎಂದು ಪ್ರಥಮ್​ ಹೇಳಿದ್ದಾರೆ.

ಅಣ್ಣನ ಕೊನೆಯ ಸಿನಿಮಾ ‘ರಾಜಮಾರ್ತಾಂಡ‘ ಬಗ್ಗೆ ಧ್ರುವ ಸರ್ಜಾ ಭಾವುಕ ಮಾತು

‘ರಘುನಾಥ್ ಒಬ್ಬ ಸಾಫ್ಟ್​ವೇರ್​ ಇಂಜಿನಿಯರ್​. ಧ್ರುವ ಸರ್ಜಾ ನಟನೆಯ ಸಿನಿಮಾಗೆ ನಿರ್ದೇಶನ ಮಾಡಬೇಕು ಎಂಬುದು ರಘುನಾಥ್ ಕನಸಾಗಿತ್ತು. ಒಮ್ಮೆ ಧ್ರುವ ಅವರನ್ನು ಭೇಟಿ ಮಾಡಿ ಮಾತನಾಡಬೇಕು ಎಂದು ಕಾಯುತ್ತಿದ್ದ. ಅದನ್ನು ನಾನು ಧ್ರುವ ಅವರಿಗೂ ಹೇಳಿದ್ದೆ. ಆದರೆ ಒಮ್ಮೆಯೂ ಭೇಟಿ ಮಾಡಲು ಸಾಧ್ಯವಾಗದೇ ಆತ ನಿಧನನಾಗಿರುವ ವಿಷಯ ತಿಳಿದು ಧ್ರುವ ಅವರು ಖಿನ್ನತೆಗೆ ಜಾರಿದರು. ಅದು ಯಾರಿಗೂ ಗೊತ್ತಿಲ್ಲ. ರಘುನಾಥ್​ ಅಂತ್ಯ ಸಂಸ್ಕಾರಕ್ಕೆ ನಾನು ಕೂಡ ಹೋಗೋಕೆ ಸಾಧ್ಯವಾಗಲಿಲ್ಲ’ ಎಂದಿದ್ದಾರೆ ಪ್ರಥಮ್​.

‘ಈ ರೀತಿಯ ಹಲವು ನೋವುಗಳನ್ನು ನುಂಗಿಕೊಂಡು ಧ್ರುವ ಸರ್ಜಾ ಅವರು ಈ ವೇದಿಕೆಯಲ್ಲಿ ಕುಳಿತಿದ್ದಾರೆ. ಅವರಿಗೆ ಚೈತನ್ಯ ನೀಡಬೇಕು ಎಂದರೆ ಅಕ್ಟೋಬರ್​ 6ರಂದು ರಾಜಮಾರ್ತಾಂಡ ಸಿನಿಮಾ ನೋಡಿ, ಆ ಚಿತ್ರವನ್ನು ಗೆಲ್ಲಿಸಿ. ಆ ಮೂಲಕ ಅವರಿಗೆ ಒಂದು ಶಕ್ತಿಯಾಗಿ ನಿಂತುಕೊಳ್ಳಿ. ಅದರಿಂದ ನಿರ್ಮಾಪಕರು ನಗಲು ಸಾಧ್ಯವಾಗುತ್ತದೆ. ಈ ಸಿನಿಮಾ ಗೆದ್ದರೆ ಮೇಘನಾ ರಾಜ್​ ಅವರಿಗೆ ಉತ್ತೇಜನ ಸಿಗುತ್ತದೆ. ರಾಯನ್​ ಭವಿಷ್ಯಕ್ಕೆ ಒಂದು ದೊಡ್ಡ ಶಕ್ತಿ ಆಗುತ್ತದೆ. ಸುಂದರ್​ ರಾಜ್​ ಅವರಿಗೆ ಸ್ಫೂರ್ತಿ ಸಿಗುತ್ತದೆ’ ಎಂದು ಪ್ರಥಮ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು