AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್ ಮಾಡಿಸುತ್ತಿರುವುದೇ ದರ್ಶನ್: ಓಪನ್ ಆಗಿ ಹೇಳಿದ ನಟ ಪ್ರಥಮ್

ಮಾಫಿಯಾ ನಡೆಸಬೇಡಿ ಎಂದು ನಟ ಪ್ರಥಮ್ ಅವರು ದರ್ಶನ್ ವಿರುದ್ಧ ಗುಡುಗಿದ್ದಾರೆ. ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳಿಸಿದ್ದನ್ನು ಪ್ರಥಮ್ ಖಂಡಿಸಿದ್ದಾರೆ. ತಮ್ಮ ವಿರುದ್ಧ ಟ್ರೋಲ್ ಮಾಡಿಸುತ್ತಿರುವುದೇ ದರ್ಶನ್ ಎಂದು ಪ್ರಥಮ್ ನೇರವಾಗಿ ಆರೋಪ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಟ್ರೋಲ್ ಮಾಡಿಸುತ್ತಿರುವುದೇ ದರ್ಶನ್: ಓಪನ್ ಆಗಿ ಹೇಳಿದ ನಟ ಪ್ರಥಮ್
Darshan, Pratham
ಮದನ್​ ಕುಮಾರ್​
|

Updated on: Jul 29, 2025 | 8:16 PM

Share

ನಟ ಪ್ರಥಮ್ ಅವರು ದರ್ಶನ್ (Darshan) ಅಭಿಮಾನಿಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ತಮ್ಮ ತಂಟೆಗೆ ಬಂದವರಿಗೆ ಕಾನೂನಿನ ಮೂಲಕ ಉತ್ತರ ನೀಡಲು ಅವರು ಮುಂದಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಪ್ರಥಮ್ ಮತ್ತು ದರ್ಶನ್ ಫ್ಯಾನ್ಸ್ ನಡುವೆ ತಿಕ್ಕಾಟ ನಡೆಯುತ್ತಲೇ ಇದೆ. ಪ್ರಥಮ್ ಮೇಲೆ ದರ್ಶನ್ ಫ್ಯಾನ್ಸ್ (Darshan Fans) ಹಲ್ಲೆಗೆ ಪ್ರಯತ್ನಿಸಿದ್ದಾರೆ. ಹಾಗಾಗಿ ಪ್ರಥಮ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮೊದಲಿನಿಂದಲೂ ಪ್ರಥಮ್ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಈ ರೀತಿಯ ಟ್ರೋಲ್​​ಗೆ ದರ್ಶನ್ ಕಾರಣ ಎಂದು ಪ್ರಥಮ್ (Pratham) ಅವರು ಹೇಳಿದ್ದಾರೆ.

‘ದೂರು ಕೊಡಬೇಡಿ ಅಂತ ಆ ನಟ ಹೇಳಿಲ್ಲ. ನಿನ್ನೆ ಸಂಜೆಯಿಂದ ಟ್ರೋಲ್ ಮಾಡಿಸುತ್ತಿರುವುದು ದರ್ಶನ್ ಸರ್. ಅದು ತಪ್ಪು. ನನ್ನ ಬಗ್ಗೆ ನೆಗೆಟಿವ್ ಆಗಿ ಪ್ರಚಾರ ಮಾಡುವಂತಿಲ್ಲ ಎಂದು ನಾನು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದೇನೆ. ಅದಕ್ಕೂ ಇವರು ಮರ್ಯಾದೆ ಕೊಡುತ್ತಿಲ್ಲ. ಇವರು ಕಾನೂನು ಉಲ್ಲಂಘನೆ ಮಾಡಿದಂತೆ ಆಗಿದೆ’ ಎಂದು ನಟ ಪ್ರಥಮ್ ಅವರು ದರ್ಶನ್ ಹಾಗೂ ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿದ್ದಾರೆ.

‘ನನಗೆ ಚುಚ್ಚೋಕೆ ಬಂದಿದ್ದರಿಂದಲೇ ನಾನು ಇಷ್ಟು ಅಗ್ರೆಸಿವ್ ಆಗಿ ಮಾತನಾಡುತ್ತಿದ್ದೇನೆ. ನಿಮ್ಮ ಸೆಲ್​ನಲ್ಲಿ ಇದ್ದವನೇ ಚುಚ್ಚೋಕೆ ಬಂದಿದ್ದು. ಅದನ್ನು ತಲೆಯಲ್ಲಿ ಇಟ್ಟುಕೊಳ್ಳಿ. ಯಾವ ಸ್ಟಾರ್​ಗೆ ನಾನು ಯಾಕೆ ಹೆದರಿಕೊಳ್ಳಬೇಕು? ನೀವು ಇಲ್ಲಿ ಬಂದು ಹೇಳಿಕೆ ನೀಡಬೇಕು. ನಾನು ಸಿನಿಮಾ ಬಿಟ್ಟು ಊರಿಗೆ ಹೋಗುತ್ತಿದ್ದೇನೆ. ಚಿತ್ರರಂಗದಲ್ಲಿ ಬೇರೆಯವರಿಗಾದರೂ ಉಪಯೋಗ ಆಗಲಿ. ಈ ದೌರ್ಜನ್ಯಗಳು ನಿಲ್ಲಲಿ’ ಎಂದಿದ್ದಾರೆ ಪ್ರಥಮ್.

ಇದನ್ನೂ ಓದಿ
Image
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
Image
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
Image
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
Image
ಕರ್ನಾಟಕದ ಮುಖ್ಯ ಮಂತ್ರಿಯಾದ ನಟ ದರ್ಶನ್, ಪಕ್ಷ ಯಾವುದು ಗೊತ್ತೆ?

‘ಟ್ರೋಲ್ ಮಾಡುವ ಎಲ್ಲ ಪೇಜ್​​ಗಳು ಡಿಲೀಟ್ ಆಗಬೇಕು. ಅದು ತುಂಬಾ ಮುಖ್ಯ. ಎಲ್ಲವನ್ನು ನೋಡಿ ನೀವು ಮಜಾ ತೆಗೆದುಕೊಳ್ಳುತ್ತಾ ಇದ್ದೀರಿ. ನಿಮ್ಮ ಪುಡಾಂಗ್​​ಗಳಿಗೆ, ತಗಡುಗಳಿಗೆ ಬಿಸಿ ಮುಟ್ಟಿಸಬೇಕು. ಯಾವ ಹೀರೋಗಳ ಸಹವಾಸಕ್ಕೆ ಹೋಗಬೇಡಿ ಅಂತ ನೀವು ವಿಡಿಯೋ ಮಾಡಿ ಹೇಳಬೇಕು. ಅಶ್ವಿನಿ ಪುನೀತ್ ರಾಜ್​ಕುಮಾರ್, ಸುದೀಪ್, ಗಣೇಶ್, ಯಶ್, ಶಿವಣ್ಣ, ಧ್ರುವ, ಧನಂಜಯ, ರಮ್ಯಾ ಮುಂತಾದ ಕಲಾವಿದರ ವಿಚಾರಕ್ಕೆ ಹೋಗಬಾರದು ಅಂತ ನೀವು ಅಭಿಮಾನಿಗಳಿಗೆ ಹೇಳಿ’ ಎಂದು ದರ್ಶನ್​ಗೆ ಪ್ರಥಮ್ ಹೇಳಿದ್ದಾರೆ.

ಇದನ್ನೂ ಓದಿ: ದರ್ಶನ್ ಬಂದು ಹೇಳಿಕೆ ನೀಡುವ ತನಕ ಉಪವಾಸ ಸತ್ಯಾಗ್ರಹ ಮಾಡ್ತೀನಿ: ಪ್ರಥಮ್

‘ರಮ್ಯಾ ಅವರು ಸಿನಿಮಾ ಮಾಡೋದು ನಿಲ್ಲಿಸಿ ಹಲವು ವರ್ಷ ಆಗಿದೆ. ಇಂದಿಗೂ ಅವರನ್ನು ಸ್ಯಾಂಡಲ್​ವುಡ್ ಕ್ವೀನ್ ಅಂತಾರೆ. ಅವರು ಹಾಕಿದ ಚಪ್ಪಲಿಯನ್ನು ಹರಾಜಿಗೆ ಹಾಕಿದರೂ 2ರಿಂದ 5 ಲಕ್ಷ ರೂಪಾಯಿ ಆಗುತ್ತದೆ. ಅದು ರಮ್ಯಾ ಅವರ ಕ್ರೇಜ್. ನಿಮ್ಮ ಪಾಡಿಗೆ ನೀವು ಇರಿ. ಮಾಫಿಯಾ ನಡೆಸಬೇಡಿ’ ಎಂದು ಪ್ರಥಮ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು