AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾನದಾರಿಯಲ್ಲಿ’ ಪ್ರೀತಂ ಗುಬ್ಬಿ- ಗಣೇಶ್ ಆಫ್ರಿಕಾ ಪಯಣ; ಹರೆಯದ ಹೃದಯಗಳ ಹಾರೈಕೆ ಕೋರಿದ ಗೋಲ್ಡನ್ ಸ್ಟಾರ್

Baanadariyalli | Ganesh | Preetham Gubbi: ‘ಬಾನದಾರಿಯಲ್ಲಿ’ ಚಿತ್ರದ ಮೂಲಕ ಕನ್ನಡದ ಸೂಪರ್ ಹಿಟ್ ಜೋಡಿ ಮತ್ತೆ ಒಂದಾಗುತ್ತಿದೆ. ರೊಮ್ಯಾಂಟಿಕ್ ಚಿತ್ರಗಳ ಮೂಲಕ ಗುರುತಿಸಿಕೊಂಡಿರುವ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಈ ಬಾರಿ ರೊಮ್ಯಾಂಟಿಕ್ ಜತೆಗೆ ಅಡ್ವೆಂಚರ್ ಕತೆಯನ್ನೂ ಹೇಳಲಿದ್ದಾರೆ.

‘ಬಾನದಾರಿಯಲ್ಲಿ’ ಪ್ರೀತಂ ಗುಬ್ಬಿ- ಗಣೇಶ್ ಆಫ್ರಿಕಾ ಪಯಣ; ಹರೆಯದ ಹೃದಯಗಳ ಹಾರೈಕೆ ಕೋರಿದ ಗೋಲ್ಡನ್ ಸ್ಟಾರ್
ಗಣೇಶ್- ಪ್ರೀತಂ ಗುಬ್ಬಿ (ಎಡ ಚಿತ್ರ), ‘ಬಾನ ದಾರಿಯಲ್ಲಿ’ ಪೋಸ್ಟರ್
TV9 Web
| Edited By: |

Updated on: Apr 03, 2022 | 2:41 PM

Share

‘ಬಾನದಾರಿಯಲ್ಲಿ’ (Baanadariyalli) ಪಯಣಿಸಲು ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಸಿದ್ಧರಾಗಿದ್ದಾರೆ. ಅರೇ ಇದೇನು ಎಂದು ಯೋಚಿಸಬೇಡಿ. ಇದು ಗೋಲ್ಡನ್ ಸ್ಟಾರ್ ಹೊಸ ಸಿನಿಮಾ. ವಿಶೇಷವೆಂದರೆ ಈ ಚಿತ್ರದ ಮೂಲಕ ಕನ್ನಡದ ಸೂಪರ್ ಹಿಟ್ ಜೋಡಿ ಮತ್ತೆ ಒಂದಾಗುತ್ತಿದೆ. ಹೌದು, ನಿರ್ದೇಶಕ ಪ್ರೀತಂ ಗುಬ್ಬಿ (Preetham Gubbi) ಹಾಗೂ ಗಣೇಶ್ ಈ ಹಿಂದೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ಗಣೇಶ್ ವೃತ್ತಿಜೀವನದ ಅತ್ಯಂತ ಯಶಸ್ವಿ ಚಿತ್ರ ‘ಮುಂಗಾರು ಮಳೆ’ಗೆ ಕತೆ ಬರೆದಿದ್ದವರು ಪ್ರೀತಂ ಗುಬ್ಬಿ. ನಂತರ ನಿರ್ದೇಶಕ- ನಟ ಕಾಂಬಿನೇಷನ್​ನಲ್ಲಿ ಗುರುತಿಸಿಕೊಂಡ ಪ್ರೀತಂ- ಗಣೇಶ್, ‘ಮಳೆಯಲಿ ಜೊತೆಯಲಿ’, ‘ದಿಲ್ ರಂಗೀಲಾ’ ಹಾಗೂ 99’ ಚಿತ್ರಗಳಲ್ಲಿ ಜತೆಯಾಗಿ ಕೆಲಸ ಮಾಡಿದ್ದರು. ಆ ಚಿತ್ರಗಳು ಪ್ರೇಕ್ಷಕರಿಗೆ ಇಷ್ಟವಾಗಿದ್ದವು. ‘99’ ನಂತರ ಪ್ರೀತಂ ಗುಬ್ಬಿ ಯಾವುದೇ ಸಿನಿಮಾ ಅನೌನ್ಸ್ ಮಾಡಿರಲಿಲ್ಲ. ಇದೀಗ ‘ಬಾನದಾರಿಯಲ್ಲಿ’ ಮೂಲಕ ಈರ್ವರೂ ಹೊಸ ಪಯಣ ಆರಂಭಿಸಲಿದ್ದಾರೆ.

ಮೇನಲ್ಲಿ ಸೆಟ್ಟೇರಲಿರುವ ‘ಬಾನ ದಾರಿಯಲ್ಲಿ’ ಚಿತ್ರದ ಶೀರ್ಷಿಕೆಯೇ ಕುತೂಹಲ ಹುಟ್ಟಿಸುವಂತಿದೆ. ಪುನೀತ್ ರಾಜ್​ಕುಮಾರ್ ಹಾಡಿದ್ದ ಈ ಗೀತೆ ಜನರ ಮನಸ್ಸಿನಲ್ಲಿ ಅಜರಾಮರವಾಗಿದೆ. ಚಿತ್ರಕ್ಕೆ ಈ ಶೀರ್ಷಿಕೆಯು ಸೂಕ್ತವಾಗಿರುವುದರಿಂದ ಹಾಡಿನ ಮೊದಲ ಪದವನ್ನೇ ಟೈಟಲ್ ಆಗಿ ಇಡಲಾಗಿದೆ. ಚಿತ್ರಕ್ಕೆ ‘ನೋಡು ಎಂಥ ಚಂದ’ ಎಂಬ ಟ್ಯಾಗ್ ಲೈನ್ ಕೂಡ ಇದೆ.

ಮೇನಲ್ಲಿ ಚಿತ್ರ ಸೆಟ್ಟೇರಲಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರದ ಮೊದಲ ಪೋಸ್ಟರ್​ಅನ್ನು ಚಿತ್ರತಂಡ ರಿಲೀಸ್ ಮಾಡಿದ್ದು, ಸಂಭ್ರಮ ಹಂಚಿಕೊಂಡಿದೆ. ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿ ಟ್ವೀಟ್ ಮಾಡಿರುವ ನಾಯಕ ನಟ ಗೋಲ್ಡನ್ ಸ್ಟಾರ್ ಗಣೇಶ್, ‘ಹರೆಯದ ಹೃದಯಗಳೇ ಹರಸಿ’ ಎಂದು ಕೋರಿಕೊಂಡಿದ್ದಾರೆ.

ರೊಮ್ಯಾಂಟಿಕ್ ಚಿತ್ರಗಳಿಗೆ ಹೆಸರುವಾಸಿಯಾಗಿರುವ ಪ್ರೀತಂ ಗುಬ್ಬಿ ಈ ಚಿತ್ರದಲ್ಲಿ ಪ್ರೀತಿಯ ಜತೆಗೆ ಅಡ್ವೆಂಚರ್ ಕತೆಯನ್ನೂ ಹೇಳಲಿದ್ದಾರೆ. ವಿಶೇಷವೆಂದರೆ ಬೆಂಗಳೂರು, ಚೆನ್ನೈ ಜತೆಗೆ ಆಫ್ರಿಕಾದಲ್ಲಿ ಚಿತ್ರೀಕರಣ ನಡೆಯಲಿದೆ. ಪೋಸ್ಟರ್​ನಲ್ಲಿ ಆಫ್ರಿಕನ್ನರಿರುವುದು ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ.

ಗಣೇಶ್ ಟ್ವೀಟ್ ಇಲ್ಲಿದೆ:

ಚಿತ್ರತಂಡದಲ್ಲಿ ಖ್ಯಾತನಾಮರು:

‘ಬಾನದಾರಿಯಲ್ಲಿ’ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ಬಡವ ರಾಸ್ಕಲ್’ ಸೇರಿದಂತೆ ಹಲವು ಖ್ಯಾತ ಚಿತ್ರಗಳಿಗೆ ಛಾಯಾಗ್ರಹಣ ಮಾಡಿರುವ ಪ್ರೀತ ಜಯರಾಂ ಈ ಚಿತ್ರದಲ್ಲಿ ಛಾಯಾಗ್ರಹಣ ಮಾಡಲಿದ್ದಾರೆ. ದೀಪು ಎಸ್ ಕುಮಾರ್ ಸಂಕಲನದ ಹೊಣೆ ಹೊತ್ತಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾ ಬಳಗದ ಆಯ್ಕೆ ನಡೆಯುತ್ತಿದೆ.

ಇದನ್ನೂ ಓದಿ:

RRR Box Office Collection: ಬಾಕ್ಸಾಫೀಸ್​ನಲ್ಲಿ ‘ಆರ್​ಆರ್​ಆರ್​’ ದಾಖಲೆಯ ಓಟ; ₹ 1,000 ಕೋಟಿ ಕ್ಲಬ್​ಗೆ ಇನ್ನೆಷ್ಟು ದೂರ?

ಸೌತ್​ ಸಿನಿಮಾ ಬಗ್ಗೆ ಹಗುರಾಗಿ ಮಾತಾಡಿದ್ದ ಜಾನ್​ ಅಬ್ರಾಹಂ; ‘ಆರ್​ಆರ್​ಆರ್​’ ಎದುರಲ್ಲಿ ಹೀನಾಯ ಸೋಲು

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ