AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾನದಾರಿಯಲ್ಲಿ’ ಪ್ರೀತಂ ಗುಬ್ಬಿ- ಗಣೇಶ್ ಆಫ್ರಿಕಾ ಪಯಣ; ಹರೆಯದ ಹೃದಯಗಳ ಹಾರೈಕೆ ಕೋರಿದ ಗೋಲ್ಡನ್ ಸ್ಟಾರ್

Baanadariyalli | Ganesh | Preetham Gubbi: ‘ಬಾನದಾರಿಯಲ್ಲಿ’ ಚಿತ್ರದ ಮೂಲಕ ಕನ್ನಡದ ಸೂಪರ್ ಹಿಟ್ ಜೋಡಿ ಮತ್ತೆ ಒಂದಾಗುತ್ತಿದೆ. ರೊಮ್ಯಾಂಟಿಕ್ ಚಿತ್ರಗಳ ಮೂಲಕ ಗುರುತಿಸಿಕೊಂಡಿರುವ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಈ ಬಾರಿ ರೊಮ್ಯಾಂಟಿಕ್ ಜತೆಗೆ ಅಡ್ವೆಂಚರ್ ಕತೆಯನ್ನೂ ಹೇಳಲಿದ್ದಾರೆ.

‘ಬಾನದಾರಿಯಲ್ಲಿ’ ಪ್ರೀತಂ ಗುಬ್ಬಿ- ಗಣೇಶ್ ಆಫ್ರಿಕಾ ಪಯಣ; ಹರೆಯದ ಹೃದಯಗಳ ಹಾರೈಕೆ ಕೋರಿದ ಗೋಲ್ಡನ್ ಸ್ಟಾರ್
ಗಣೇಶ್- ಪ್ರೀತಂ ಗುಬ್ಬಿ (ಎಡ ಚಿತ್ರ), ‘ಬಾನ ದಾರಿಯಲ್ಲಿ’ ಪೋಸ್ಟರ್
TV9 Web
| Edited By: |

Updated on: Apr 03, 2022 | 2:41 PM

Share

‘ಬಾನದಾರಿಯಲ್ಲಿ’ (Baanadariyalli) ಪಯಣಿಸಲು ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಸಿದ್ಧರಾಗಿದ್ದಾರೆ. ಅರೇ ಇದೇನು ಎಂದು ಯೋಚಿಸಬೇಡಿ. ಇದು ಗೋಲ್ಡನ್ ಸ್ಟಾರ್ ಹೊಸ ಸಿನಿಮಾ. ವಿಶೇಷವೆಂದರೆ ಈ ಚಿತ್ರದ ಮೂಲಕ ಕನ್ನಡದ ಸೂಪರ್ ಹಿಟ್ ಜೋಡಿ ಮತ್ತೆ ಒಂದಾಗುತ್ತಿದೆ. ಹೌದು, ನಿರ್ದೇಶಕ ಪ್ರೀತಂ ಗುಬ್ಬಿ (Preetham Gubbi) ಹಾಗೂ ಗಣೇಶ್ ಈ ಹಿಂದೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ಗಣೇಶ್ ವೃತ್ತಿಜೀವನದ ಅತ್ಯಂತ ಯಶಸ್ವಿ ಚಿತ್ರ ‘ಮುಂಗಾರು ಮಳೆ’ಗೆ ಕತೆ ಬರೆದಿದ್ದವರು ಪ್ರೀತಂ ಗುಬ್ಬಿ. ನಂತರ ನಿರ್ದೇಶಕ- ನಟ ಕಾಂಬಿನೇಷನ್​ನಲ್ಲಿ ಗುರುತಿಸಿಕೊಂಡ ಪ್ರೀತಂ- ಗಣೇಶ್, ‘ಮಳೆಯಲಿ ಜೊತೆಯಲಿ’, ‘ದಿಲ್ ರಂಗೀಲಾ’ ಹಾಗೂ 99’ ಚಿತ್ರಗಳಲ್ಲಿ ಜತೆಯಾಗಿ ಕೆಲಸ ಮಾಡಿದ್ದರು. ಆ ಚಿತ್ರಗಳು ಪ್ರೇಕ್ಷಕರಿಗೆ ಇಷ್ಟವಾಗಿದ್ದವು. ‘99’ ನಂತರ ಪ್ರೀತಂ ಗುಬ್ಬಿ ಯಾವುದೇ ಸಿನಿಮಾ ಅನೌನ್ಸ್ ಮಾಡಿರಲಿಲ್ಲ. ಇದೀಗ ‘ಬಾನದಾರಿಯಲ್ಲಿ’ ಮೂಲಕ ಈರ್ವರೂ ಹೊಸ ಪಯಣ ಆರಂಭಿಸಲಿದ್ದಾರೆ.

ಮೇನಲ್ಲಿ ಸೆಟ್ಟೇರಲಿರುವ ‘ಬಾನ ದಾರಿಯಲ್ಲಿ’ ಚಿತ್ರದ ಶೀರ್ಷಿಕೆಯೇ ಕುತೂಹಲ ಹುಟ್ಟಿಸುವಂತಿದೆ. ಪುನೀತ್ ರಾಜ್​ಕುಮಾರ್ ಹಾಡಿದ್ದ ಈ ಗೀತೆ ಜನರ ಮನಸ್ಸಿನಲ್ಲಿ ಅಜರಾಮರವಾಗಿದೆ. ಚಿತ್ರಕ್ಕೆ ಈ ಶೀರ್ಷಿಕೆಯು ಸೂಕ್ತವಾಗಿರುವುದರಿಂದ ಹಾಡಿನ ಮೊದಲ ಪದವನ್ನೇ ಟೈಟಲ್ ಆಗಿ ಇಡಲಾಗಿದೆ. ಚಿತ್ರಕ್ಕೆ ‘ನೋಡು ಎಂಥ ಚಂದ’ ಎಂಬ ಟ್ಯಾಗ್ ಲೈನ್ ಕೂಡ ಇದೆ.

ಮೇನಲ್ಲಿ ಚಿತ್ರ ಸೆಟ್ಟೇರಲಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರದ ಮೊದಲ ಪೋಸ್ಟರ್​ಅನ್ನು ಚಿತ್ರತಂಡ ರಿಲೀಸ್ ಮಾಡಿದ್ದು, ಸಂಭ್ರಮ ಹಂಚಿಕೊಂಡಿದೆ. ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿ ಟ್ವೀಟ್ ಮಾಡಿರುವ ನಾಯಕ ನಟ ಗೋಲ್ಡನ್ ಸ್ಟಾರ್ ಗಣೇಶ್, ‘ಹರೆಯದ ಹೃದಯಗಳೇ ಹರಸಿ’ ಎಂದು ಕೋರಿಕೊಂಡಿದ್ದಾರೆ.

ರೊಮ್ಯಾಂಟಿಕ್ ಚಿತ್ರಗಳಿಗೆ ಹೆಸರುವಾಸಿಯಾಗಿರುವ ಪ್ರೀತಂ ಗುಬ್ಬಿ ಈ ಚಿತ್ರದಲ್ಲಿ ಪ್ರೀತಿಯ ಜತೆಗೆ ಅಡ್ವೆಂಚರ್ ಕತೆಯನ್ನೂ ಹೇಳಲಿದ್ದಾರೆ. ವಿಶೇಷವೆಂದರೆ ಬೆಂಗಳೂರು, ಚೆನ್ನೈ ಜತೆಗೆ ಆಫ್ರಿಕಾದಲ್ಲಿ ಚಿತ್ರೀಕರಣ ನಡೆಯಲಿದೆ. ಪೋಸ್ಟರ್​ನಲ್ಲಿ ಆಫ್ರಿಕನ್ನರಿರುವುದು ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ.

ಗಣೇಶ್ ಟ್ವೀಟ್ ಇಲ್ಲಿದೆ:

ಚಿತ್ರತಂಡದಲ್ಲಿ ಖ್ಯಾತನಾಮರು:

‘ಬಾನದಾರಿಯಲ್ಲಿ’ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ಬಡವ ರಾಸ್ಕಲ್’ ಸೇರಿದಂತೆ ಹಲವು ಖ್ಯಾತ ಚಿತ್ರಗಳಿಗೆ ಛಾಯಾಗ್ರಹಣ ಮಾಡಿರುವ ಪ್ರೀತ ಜಯರಾಂ ಈ ಚಿತ್ರದಲ್ಲಿ ಛಾಯಾಗ್ರಹಣ ಮಾಡಲಿದ್ದಾರೆ. ದೀಪು ಎಸ್ ಕುಮಾರ್ ಸಂಕಲನದ ಹೊಣೆ ಹೊತ್ತಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾ ಬಳಗದ ಆಯ್ಕೆ ನಡೆಯುತ್ತಿದೆ.

ಇದನ್ನೂ ಓದಿ:

RRR Box Office Collection: ಬಾಕ್ಸಾಫೀಸ್​ನಲ್ಲಿ ‘ಆರ್​ಆರ್​ಆರ್​’ ದಾಖಲೆಯ ಓಟ; ₹ 1,000 ಕೋಟಿ ಕ್ಲಬ್​ಗೆ ಇನ್ನೆಷ್ಟು ದೂರ?

ಸೌತ್​ ಸಿನಿಮಾ ಬಗ್ಗೆ ಹಗುರಾಗಿ ಮಾತಾಡಿದ್ದ ಜಾನ್​ ಅಬ್ರಾಹಂ; ‘ಆರ್​ಆರ್​ಆರ್​’ ಎದುರಲ್ಲಿ ಹೀನಾಯ ಸೋಲು

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ