AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಹಾರುತ್ತಿದ್ದಾರೆ ಜೋಗಿ ಪ್ರೇಮ್, ಸುದ್ದಿ ಖಚಿತ

Jogi Prem: ಕನ್ನಡ ಚಿತ್ರರಂಗದ ಜನಪ್ರಿಯ ಮತ್ತು ಯಶಸ್ವಿ ನಿರ್ದೇಶಕ ಪ್ರೇಮ್ ಇದೀಗ ಬಾಲಿವುಡ್​ಗೆ ಹಾರುತ್ತಿದ್ದಾರೆ. ದಕ್ಷಿಣ ಭಾರತದ ಕೆಲವು ನಿರ್ದೇಶಕರು ಕಳೆದ ಕೆಲ ವರ್ಷಗಳಲ್ಲಿ ಹಿಂದಿ ಸಿನಿಮಾ ನಿರ್ದೇಶಿಸಿ ಹಿಟ್​ ನೀಡಿದ್ದಾರೆ. ಇದೀಗ ಪ್ರೇಮ್ ಸಹ ಬಾಲಿವುಡ್​ಗೆ ಹಾರುತ್ತಿದ್ದು ವಿಷಯವನ್ನು ಅವರೇ ಖಾತ್ರಿ ಪಡಿಸಿದ್ದಾರೆ.

ಬಾಲಿವುಡ್​ಗೆ ಹಾರುತ್ತಿದ್ದಾರೆ ಜೋಗಿ ಪ್ರೇಮ್, ಸುದ್ದಿ ಖಚಿತ
Prem
ಮಂಜುನಾಥ ಸಿ.
|

Updated on: Jan 03, 2025 | 6:12 PM

Share

ಇತ್ತೀಚೆಗಿನ ವರ್ಷದಲ್ಲಿ ದಕ್ಷಿಣ ಭಾರತದ ಕೆಲವು ನಿರ್ದೇಶಕರು ಬಾಲಿವುಡ್​ಗೆ ಹೋಗಿ ಭರ್ಜರಿ ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ. ತಮಿಳಿನ ಅಟ್ಲಿ, ಮುರುಗದಾಸ್ ಈಗಾಗಲೇ ಹಿಂದಿಯಲ್ಲಿ ಸಿನಿಮಾಗಳ ಮೇಲೆ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನ ಒಂದಿಬ್ಬರು ನಿರ್ದೇಶಕರು ಸಹ ಬಾಲಿವುಡ್​ಗೆ ಹಾರುತ್ತಿದ್ದಾರೆ. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಪ್ರೇಮ್ ಸಹ ಬಾಲಿವುಡ್​ಗೆ ಹಾರುತ್ತಿದ್ದಾರೆ. ಈ ಸುದ್ದಿ ಕಳೆದ ವರ್ಷವೇ ಪ್ರಕಟವಾಗಿತ್ತು, ಆದರೆ ಈಗದು ಖಾತ್ರಿಯಾಗಿದೆ.

ತಮ್ಮ ನಿರ್ದೇಶನದ ‘ಕೆಡಿ’ ಸಿನಿಮಾದ ಪ್ರಚಾರ ಮತ್ತು ಬಿಡುಗಡೆಯಲ್ಲಿ ತೊಡಗಿಕೊಂಡಿರುವ ಜೋಗಿ ಪ್ರೇಮ್ ಶೀಘ್ರವೇ ಹಿಂದಿ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಈ ಬಗ್ಗೆ ಟೈಮ್ಸ್​ ಎಂಟರ್ಟೈನ್​ಮೆಂಟ್​ಗೆ ನೀಡಿರುವ ಸಂದರ್ಶನದಲ್ಲಿ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ‘2024ರಲ್ಲೇ ನಾನು ಹಿಂದಿ ಸಿನಿಮಾ ನಿರ್ದೇಶನ ಮಾಡಬೇಕಿತ್ತು. ಆದರೆ ಅದು ರೀಮೇಕ್ ಸಿನಿಮಾ ಆಗಿತ್ತು, ಆದರೆ ನನಗೆ ರೀಮೇಕ್ ಸಿನಿಮಾ ನಿರ್ದೇಶಿಸುವುದು ಇಷ್ಟವಿಲ್ಲದ ಕಾರಣ ನಾನು ನಿರಾಕರಿಸಿದ್ದೆ’ ಎಂದಿದ್ದಾರೆ ಪ್ರೇಮ್.

‘ಆದರೆ ನಿರ್ಮಾಪಕರಿಗೆ ನಾನು ಮನವರಿಕೆ ಮಾಡಿಕೊಟ್ಟಿದ್ದು, ನಾನು ಸಿನಿಮಾ ಸ್ವಮೇಕ್ ಸಿನಿಮಾಗಳನ್ನು ಮಾತ್ರವೇ ನಿರ್ದೇಶನ ಮಾಡುವುದಾಗಿ ತಿಳಿಸಿದ್ದು, ಇದೀಗ ಸಿನಿಮಾದ ಮಾತುಕತೆ ಸಹ ಬಹುತೇಕ ಮುಗಿದಿದ್ದು, ಬಾಲಿವುಡ್​ನ ದೊಡ್ಡ ನಟರೊಬ್ಬರೊಡನೆ ಕೆಲಸ ಮಾಡಲಿದ್ದೇನೆ’ ಎಂದು ಪ್ರೇಮ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:‘ಶಿವ ಶಿವ..’ ಹಾಡಿಗೆ ಮೈಸೂರು ಹುಡುಗರ ಮಸ್ತ್ ಸ್ಟೆಪ್; ಫಿದಾ ಆದ ಧ್ರುವ, ಪ್ರೇಮ್

‘ದಕ್ಷಿಣ ಭಾರತದ ನಿರ್ದೇಶಕರು ಸದಾ ತಮ್ಮ ಕತೆ ಹೇಳುವ ಶೈಲಿಯಿಂದ, ಎಮೋಷನ್ಸ್​ಗಳಿಂದ ಪ್ರೇಕ್ಷಕರನ್ನು ಸೆಳೆದಿದ್ದಾರೆ. ಅದನ್ನು ಬಾಲಿವುಡ್ ಗುರುತಿಸಿದ್ದು, ಈಗಾಗಲೇ ಹಲವು ದಕ್ಷಿಣ ಭಾರತದ ನಿರ್ದೇಶಕರು ಬಾಲಿವುಡ್​ನಲ್ಲಿ ಸಿನಿಮಾಗಳನ್ನು ನಿರ್ದೇಶಿಸಿ ಯಶಸ್ಸು ಗಳಿಸಿದ್ದಾರೆ. ನಾವೆಲ್ಲ ಒಟ್ಟಾಗಿ ಭಾರತೀಯ ಸಿನಿಮಾಕ್ಕೆ ಕೊಡುಗೆ ನೀಡುತ್ತಿರುವ ಬಗ್ಗೆ ಖುಷಿ ಇದೆ’ ಎಂದು ಪ್ರೇಮ್ ಹೇಳಿಕೊಂಡಿದ್ದಾರೆ.

ಪ್ರೇಮ್ ಪ್ರಸ್ತುತ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ‘ಕೆಡಿ’ ಬಳಿಕ ದರ್ಶನ್​ ನಟನೆಯ ಸಿನಿಮಾ ನಿರ್ದೇಶನ ಮಾಡಬೇಕಿದೆ ಪ್ರೇಮ್. ಆದರೆ ಈ ನಡುವೆ ಬಾಲಿವುಡ್​ಗೂ ಹೋಗಿ ಬರಲಿದ್ದಾರೆ. ಪ್ರೇಮ್ ಶೈಲಿ ಹಿಂದಿ ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಗಲಿದೆಯೇ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು