AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ek Love Ya: ಇಂದು ಬಿಡುಗಡೆಯಾಗುತ್ತಿಲ್ಲ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಟ್ರೈಲರ್; ಕಾರಣವೇನು?

Prem: ಪ್ರೇಮ್ ನಿರ್ದೇಶನದ ಬಹುನಿರೀಕ್ಷಿತ ‘ಏಕ್ ಲವ್ ಯಾ’ದ ಟ್ರೈಲರ್ ಇಂದು ಸಂಜೆ ಬಿಡುಗಡೆಯಾಗಬೇಕಿತ್ತು. ಆದರೆ ಪ್ರೇಕ್ಷಕರು ಟ್ರೈಲರ್​ಗೆ ಇನ್ನಷ್ಟು ಕಾಲ ಕಾಯಬೇಕಾಗಿದೆ. ಕಾರಣವೇನು?

Ek Love Ya: ಇಂದು ಬಿಡುಗಡೆಯಾಗುತ್ತಿಲ್ಲ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಟ್ರೈಲರ್; ಕಾರಣವೇನು?
‘ಏಕ್​ ಲವ್ ಯಾ’ ಪೋಸ್ಟರ್​
TV9 Web
| Edited By: |

Updated on: Jan 04, 2022 | 1:21 PM

Share

ರಕ್ಷಿತಾ ಪ್ರೇಮ್ (Rakshita Prem) ಸಹೋದರ ರಾಣಾ (Rana) ‘ಏಕ್ ಲವ್ ಯಾ’ (Ek Love Ya) ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ (Sandalwood) ಪದಾರ್ಪಣೆ ಮಾಡುತ್ತಿದ್ದಾರೆ. ಪ್ರೇಮ್ ನಿರ್ದೇಶನದ ಈ ಚಿತ್ರ ಈಗಾಗಲೇ ಹಾಡುಗಳಿಂದ ಬಹುದೊಡ್ಡ ನಿರೀಕ್ಷೆ ಹುಟ್ಟುಹಾಕಿದೆ. ವಾಸ್ತವವಾಗಿ ಇಂದು (ಮಂಗಳವಾರ, ಜ.4) ಚಿತ್ರದ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿತ್ತು. ಮೈಸೂರಿನ ಡಿಆರ್​ಸಿ ಮಾಲ್​ನಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ ಎಂದೂ ತಿಳಿಸಲಾಗಿತ್ತು. ಆದ್ದರಿಂದ ಅಭಿಮಾನಿಗಳು ಚಿತ್ರದ ಟ್ರೈಲರ್​ಗೆ ಕಾತರದಿಂದ ಕಾಯುತ್ತಿದ್ದರು. ಆದರೆ ಅಭಿಮಾನಿಗಳು ಇನ್ನಷ್ಟು ದಿನ ಕಾಯುವುದು ಅನಿವಾರ್ಯವಾಗಿದೆ. ಇದನ್ನು ಸ್ವತಃ ನಿರ್ದೇಶಕ ಪ್ರೇಮ್ (Prem) ಖಚಿತಪಡಿಸಿದ್ದು, ಟ್ರೈಲರ್ ಇಂದು ಬಿಡುಗಡೆಯಾಗುತ್ತಿಲ್ಲ ಎಂದಿದ್ದಾರೆ. 

ಟ್ರೈಲರ್ ಏಕೆ ಬಿಡುಗಡೆಯಾಗುತ್ತಿಲ್ಲ? ನಿರ್ದೇಶಕ ಪ್ರೇಮ್ ಚಿತ್ರದ ಟ್ರೈಲರ್ ಬಿಡುಗಡೆ ಮುಂದೂಡಲ್ಪಟ್ಟಿರುವುದರ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೆ ತಾಂತ್ರಿಕ ದೋಷ ಕಾರಣ ಎಂದು ಅವರು ಹೇಳಿದ್ದಾರೆ. ‘‘ಜನವರಿ 4ರಂದು ತೆರೆಕಾಣಬೇಕಿದ್ದ ಏಕ್ ಲವ್ ಯಾ ಟ್ರೈಲರ್ ಬಿಡುಗಡೆಯನ್ನು ತಾಂತ್ರಿಕ ದೋಷದಿಂದ ಮುಂದೂಡಲಾಗಿದೆ. ನಿಮ್ಮ ಪ್ರೀತಿ, ನಿರೀಕ್ಷೆ ಹೀಗೆ ಇರಲಿ’’ ಎಂದು ಚಿತ್ರತಂಡ ಬರೆದುಕೊಂಡಿದೆ. ಟ್ರೈಲರ್ ಹಾಗೂ ಚಿತ್ರದ 6ನೇ ಹಾಡು ಸದ್ಯದಲ್ಲೇ ಎಲ್ಲರ ಮುಂದೆ ಬರಲಿದೆ ಎಂದು ಪ್ರೇಮ್ ಭರವಸೆಯನ್ನೂ ನೀಡಿದ್ದಾರೆ.

ಈ ಕುರಿತು ಪ್ರೇಮ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಜನವರಿ 21ರಂದು ‘ಏಕ್ ಲವ್ ಯಾ’ ತೆರೆಗೆ: ಈಗಾಗಲೇ ‘ಏಕ್ ಲವ್ ಯಾ’ ಚಿತ್ರವನ್ನು ಜನವರಿ 21ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಹೊಸ ಪೋಸ್ಟರ್​ನಲ್ಲೂ ಇದನ್ನು ಖಚಿತಪಡಿಸಲಾಗಿದೆ. ‘ಏಕ್ ಲವ್ ಯಾ’ ಚಿತ್ರದಲ್ಲಿ ರಾಣಾ ನಾಯಕನಾಗಿ ಕಾಣಿಸಿಕೊಂಡಿದ್ದು, ರಚಿತಾ ರಾಮ್ ಹಾಗೂ ರೀಷ್ಮಾ ನಾಣಯ್ಯ ಮುಖ್ಯಪಾತ್ರ ನಿಭಾಯಿಸಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಎಲ್ಲರ ಮನಗೆದ್ದಿದ್ದು, ನಿರೀಕ್ಷೆ ಹುಟ್ಟಿಸಿವೆ.

ಇದನ್ನೂ ಓದಿ:

‘ನಾನು ಸಿಗರೇಟ್​ ಸೇದಿದ್ದಕ್ಕೆ ಕಾರಣ ಇದೆ’; ಬೋಲ್ಡ್​ ದೃಶ್ಯಗಳ ಬಗ್ಗೆ ನೇರವಾಗಿ ಮಾತಾಡಿದ ರಚಿತಾ

ರಜನಿಕಾಂತ್​, ಪ್ರಭಾಸ್ ಸಿನಿಮಾ ಮಾಡೋಕೆ ಕರೆದಿದ್ರು, ನಾನು ಹೋಗಿಲ್ಲ; ಜೋಗಿ ಪ್ರೇಮ್​

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ