AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಜೊತೆ ಸಿನಿಮಾ ನಿಂತು ಹೋಯ್ತಾ? ಉತ್ತರ ನೀಡಿದ ಪ್ರೇಮ್

Darshan: ರೇಣುಕಾ ಸ್ವಾಮಿ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಸಿನಿಮಾ ಚಿತ್ರೀಕರಣ ಯಾವಾಗ ಪ್ರಾರಂಭ ಮಾಡಲಿದ್ದಾರೆ ಎಂಬ ಕುತೂಹಲ ಮೂಡಿದೆ. ದರ್ಶನ್ ನಟಿಸುತ್ತಿದ್ದ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಪ್ರೇಮ್ ಜೊತೆ ಮಾಡಬೇಕಿದ್ದ ಸಿನಿಮಾದ ಬಗ್ಗೆ ಪ್ರಶ್ನೆಗಳು ಮೂಡಿವೆ. ಇದೀಗ ಈ ಬಗ್ಗೆ ನಟ ಪ್ರೇಮ್ ಮಾತನಾಡಿದ್ದಾರೆ.

ದರ್ಶನ್ ಜೊತೆ ಸಿನಿಮಾ ನಿಂತು ಹೋಯ್ತಾ? ಉತ್ತರ ನೀಡಿದ ಪ್ರೇಮ್
Prem Darshan
ಮಂಜುನಾಥ ಸಿ.
|

Updated on:Dec 24, 2024 | 1:32 PM

Share

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಇತ್ತೀಚೆಗಷ್ಟೆ ಜಾಮೀನು ಪಡೆದಿದ್ದಾರೆ. ಆದರೆ ಅವರ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದ್ದು, ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ದರ್ಶನ್ ಬೆಂಗಳೂರಿನಿಂದ ತಮ್ಮ ಮೈಸೂರಿನ ಫಾರಂ ಹೌಸ್​ಗೆ ವಾಸ್ತವ್ಯ ಬದಲಾಯಿಸಿದ್ದು, ಕೆಲ ದಿನದ ಹಿಂದೆ ಹರಿದಾಡಿದ ವಿಡಿಯೋನಲ್ಲಿ ದರ್ಶನ್ ನಡೆಯಲು ಸಹ ಕಷ್ಟಪಡುತ್ತಿದ್ದರು. ಇಂಥಹಾ ವಿಷಮ ಸ್ಥಿತಿಯಲ್ಲಿ ಅವರು ಒಪ್ಪಿಕೊಂಡಿರುವ ಸಿನಿಮಾಗಳನ್ನು ಹೇಗೆ ಪೂರೈಸುತ್ತಾರೆ ಎಂಬ ಪ್ರಶ್ನೆ ಎದ್ದಿತ್ತು. ದರ್ಶನ್ ಬಂಧನವಾದಾಗ ಅವರು ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿದ್ದರು. ನಿರ್ದೇಶಕ ಪ್ರೇಮ್ ಜೊತೆ ಮತ್ತೊಂದು ಸಿನಿಮಾ ಮಾಡಲಿದ್ದರು. ಈ ಸಿನಿಮಾಗಳು ನಿಂತು ಹೋಗಿವೆ ಎಂಬ ಸುದ್ದಿಯೂ ಹರಿದಾಡುತ್ತಿತ್ತು, ಇದೀಗ ಈ ಬಗ್ಗೆ ನಟ ಪ್ರೇಮ್ ಸ್ಪಷ್ಟನೆ ನೀಡಿದ್ದಾರೆ.

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿರುವ ಪ್ರೇಮ್, ‘ನಾನು ಹಾಗೂ ದರ್ಶನ್ ಅಣ್ಣ-ತಮ್ಮಂದಿರು. ನಾವು ಒಂದೇ ಕುಟುಂಬದವರು. ನಾನು ಮೊದಲ ಬಾರಿಗೆ ದರ್ಶನ್​ಗಾಗಿ ‘ಕರಿಯ’ ಸಿನಿಮಾ ಮಾಡಿದಾಗ ಆಗ ನಾವು ಪರಿಚಯದವರು ಅಷ್ಟೆ ಆದರೆ ಪತ್ನಿ ರಕ್ಷಿತಾ ಅವರಿಗೆ ಅದಾಗಲೇ ಅವರು ಬಹಳ ಆತ್ಮೀಯ ಗೆಳೆಯರು. ಒಬ್ಬರ ಕಷ್ಟಕ್ಕೆ ಇನ್ನೊಬ್ಬರು ಆಗುವ ಗೆಳೆಯರು. ನನಗೂ ಸಹ ದರ್ಶನ್ ಅವರು ಬಹಳ ಆಪ್ತರು’ ಎಂದಿದ್ದಾರೆ ಪ್ರೇಮ್.

ಇದನ್ನೂ ಓದಿ:‘ನೋಡಿ ಎಲ್ಲ ಕೆಡಿಗಳೇ..’: ಚಿಕ್ಕಮಗಳೂರಲ್ಲಿ ಪ್ರೇಮ್ ವಿಡಿಯೋ

‘ದರ್ಶನ್ ಹಾಗೂ ನಾನು ಒಟ್ಟಿಗೆ ಸಿನಿಮಾ ಮಾಡಬೇಕು ಎಂದು ಅಭಿಮಾನಿಗಳು ಹಲವು ವರ್ಷದಿಂದ ಕೇಳುತ್ತಲೇ ಇದ್ದರು. ಹಾಗಾಗಿ ನಾನು ಖಂಡಿತ ದರ್ಶನ್​ಗೆ ಸಿನಿಮಾ ಮಾಡುತ್ತೀನಿ. ಅದರಲ್ಲಿ ಅನುಮಾನವೇ ಬೇಡ. ಎಲ್ಲರೂ ಒಂದೇ ಕುಟುಂಬದ ರೀತಿ. ದರ್ಶನ್ ಅವರು ಆರೋಗ್ಯವಾಗಿದ್ದಿದ್ದರೆ ನಾನೇ ಅವರನ್ನು ಕರೀತಿದ್ದೆ. ಈ ಸಿನಿಮಾದ ಹಾಡನ್ನು ಅವರಿಂದಲೇ ಬಿಡುಗಡೆ ಮಾಡಿಸುತ್ತಿದ್ದೆ. ಆದರೆ ಅವರಿಗೆ ಬೆನ್ನು ನೋವು ಇರುವ ಕಾರಣ ಈಗ ಬೇಡ ಎಂದುಕೊಂಡೆ. ಮುಂದಿನ ದಿನಗಳಲ್ಲಿ ಅವರನ್ನು ಕರೆಯುತ್ತೀನಿ. ನನಗಾಗಲಿ, ರಕ್ಷಿತಾ, ಧ್ರುವ ಅವರಿಗಾಗಲಿ ಎಲ್ಲರಿಗೂ ಬೆಂಬಲ ಕೊಡುತ್ತಾರೆ’ ಎಂದಿದ್ದಾರೆ ನಿರ್ದೇಶಕ ಪ್ರೇಮ್.

ದರ್ಶನ್ ಈಗ ‘ಡೆವಿಲ್’ ಸಿನಿಮಾದಲ್ಲಿ ನಟಿಸುತ್ತಿದ್ದು, ಅದರ ಬಳಿಕ ಪ್ರೇಮ್ ನಿರ್ದೇಶನದ ನಟಿಸಲು ಒಪ್ಪಿಗೆ ನೀಡಿದ್ದರು. ಪ್ರೇಮ್ ಹಾಗೂ ದರ್ಶನ್ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಲು ಮುಂದಾಗಿತ್ತು. ಆದರೆ ರೇಣುಕಾ ಸ್ವಾಮಿ ಪ್ರಕರಣ ನಡೆದ ಕಾರಣ ‘ಡೆವಿಲ್’ ಸಿನಿಮಾದ ಚಿತ್ರೀಕರಣ ನಿಂತು ಹೋಗಿದೆ. ಕೆಲ ಮಾಹಿತಿಯ ಪ್ರಕಾರ, ‘ಡೆವಿಲ್’ ಸಿನಿಮಾದ ಚಿತ್ರೀಕರಣ ಮುಂದಿನ ತಿಂಗಳು ಪ್ರಾರಂಭ ಆಗಲಿದೆಯಂತೆ. ಅದಾದ ಬಳಿಕ ಪ್ರೇಮ್ ಜೊತೆಗಿನ ಸಿನಿಮಾದಲ್ಲಿ ದರ್ಶನ್ ನಟಿಸುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:29 pm, Tue, 24 December 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?