AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಾ ಎರಡನೇ ಮದುವೆ ವದಂತಿಗೆ ಬ್ರೇಕ್​; ಸ್ಪಷ್ಟನೆ ನೀಡಿದ ನಟಿ

ಈಗ ಮನೆಯಲ್ಲಿ ಪ್ರೇಮಾಗೆ ಮದುವೆ ಆಗುವಂತೆ ಒತ್ತಾಯ ಬರುತ್ತಿದೆ. ಅವರು ಖಿನ್ನತೆಗೆ ಒಳಗಾಗಿದ್ದಾರೆ ಎಂಬಿತ್ಯಾದಿ ವಿಚಾರಗಳನ್ನು ಹರಿ ಬಿಡಲಾಗುತ್ತಿದೆ.

ಪ್ರೇಮಾ ಎರಡನೇ ಮದುವೆ ವದಂತಿಗೆ ಬ್ರೇಕ್​; ಸ್ಪಷ್ಟನೆ ನೀಡಿದ ನಟಿ
ಪ್ರೇಮಾ
ರಾಜೇಶ್ ದುಗ್ಗುಮನೆ
|

Updated on: Jun 02, 2021 | 9:14 PM

Share

ನಟಿ ಪ್ರೇಮಾ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ಯಾವ ಸಿನಿಮಾಗಳನ್ನೂ ಒಪ್ಪಿಕೊಂಡಿಲ್ಲ. ಇನ್ನು, ಅವರು ಇನ್​ಸ್ಟಾಗ್ರಾಂ ಬಿಟ್ಟು ಮತ್ತಾವುದೇ ಸೋಶಿಯಲ್​ ಮೀಡಿಯಾದಲ್ಲೂ ಆ್ಯಕ್ಟಿವ್​ ಇಲ್ಲ. ಆದಾಗ್ಯೂ ನಟಿ ಪ್ರೇಮಾ ಬಗ್ಗೆ ಕೆಲವರು ವದಂತಿ ಹಬ್ಬಿಸಿದ್ದಾರೆ. ಈ ಬಗ್ಗೆ ಖುದ್ದು ಪ್ರೇಮಾ ಅವರೇ ಸ್ಪಷ್ಟನೆ ನೀಡಿದ್ದಾರೆ.

ಪ್ರೇಮಾ ಮದುವೆ ಆಗಿದ್ದರು. ನಂತರ ವಿಚ್ಛೇದನ ಕೂಡ ಪಡೆದರು. ಈಗ ಮನೆಯಲ್ಲಿ ಪ್ರೇಮಾಗೆ ಮದುವೆ ಆಗುವಂತೆ ಒತ್ತಾಯ ಬರುತ್ತಿದೆ. ಅವರು ಖಿನ್ನತೆಗೆ ಒಳಗಾಗಿದ್ದಾರೆ ಎಂಬಿತ್ಯಾದಿ ವಿಚಾರಗಳನ್ನು ಹರಿ ಬಿಡಲಾಗುತ್ತಿದೆ. ಇದು ಪ್ರೇಮಾ ಅವರ ಗಮನಕ್ಕೂ ಬಂದಿದೆ. ಅಷ್ಟೇ ಅಲ್ಲ, ಪ್ರೇಮಾ ಈ ಬಗ್ಗೆ ಸ್ಪಷ್ಟನೆ ಕೂಡ ನೀಡಿದ್ದಾರೆ.

ನಕಲಿ ಸುದ್ದಿ ಹರಡಿದ ವೆಬ್​ಸೈಟ್​ನ ಸ್ಕ್ರೀನ್ ಶಾಟ್​ ಒಂದನ್ನು ಪ್ರೇಮಾ ಇನ್​ಸ್ಟಾಗ್ರಾಂ ಸ್ಟೇಟಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ಇದು ಸುಳ್ಳು ಸುದ್ದಿ. ಇದನ್ನು ಜನರು ನಂಬಬಾರದು ಎಂಬುದು ನನ್ನ ಮನವಿ ಎಂದು ಕೋರಿದ್ದಾರೆ. ಈ ಮೂಲಕ ಅವರ ಬಗ್ಗೆ ಹರಿದಾಡುತ್ತಿದ್ದ ಸುಳ್ಳು ಸುದ್ದಿಗೆ ಬ್ರೇಕ್​ ಹಾಕಿದ್ದಾರೆ.

1995ರಲ್ಲಿ ತೆರೆಗೆ ಬಂದ ‘ಸವ್ಯಸಾಚಿ’ ಸಿನಿಮಾ ಮೂಲಕ ಪ್ರೇಮಾ ಬಣ್ಣದ ಬದುಕು ಆರಂಭಿಸಿದರು. ಅದೇ ವರ್ಷ ತೆರೆಗೆ ಬಂದ ಶಿವರಾಜ್​ಕುಮಾರ್​ ನಟನೆಯ ‘ಓಂ’ ಸಿನಿಮಾ ಪ್ರೇಮಾ ಅವರ ಸಿನಿ ಬದುಕಿನ ದಿಕ್ಕನ್ನೇ ಬದಲಾಯಿಸಿ ಬಿಟ್ಟಿತ್ತು. ಈ ಚಿತ್ರದ ನಟನೆಗಾಗಿ ಅವರಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರೆತಿದೆ. 2009ರಲ್ಲಿ ತೆರೆಗೆ ಬಂದ ‘ಶಿಶಿರ’ ಚಿತ್ರದಲ್ಲಿ ಪ್ರೇಮಾ ನಟಿಸಿದ್ದರು. ನಂತರ ಚಿತ್ರರಂಗದಿಂದ ದೂರ ಉಳಿದಿದ್ದರು. 2017ರಲ್ಲಿ ತೆರೆಗೆ ಬಂದ ಉಪೇಂದ್ರ ಮತ್ತೆ ಬಾ ಸಿನಿಮಾದಲ್ಲಿ  ಪ್ರೇಮಾ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಲಾಕ್​ಡೌನ್​ ಮಧ್ಯೆಯೂ ಟೈಗರ್-ದಿಶಾ ರೊಮ್ಯಾಂಟಿಕ್​ ರೈಡ್​; ಇವರನ್ನು ತಡೆದ ಪೊಲೀಸರು, ಮುಂದೇನಾಯ್ತು?

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ