AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಿಮ್​ಗೆ ಹೋಗೋದ್ರಿಂದ ಸಾವು ಸಂಭವಿಸುತ್ತೆ ಅನ್ನೋದು ತಪ್ಪು’: ನಟ ನೆನಪಿರಲಿ ಪ್ರೇಮ್​

‘ಪುನೀತ್ ನನ್ನ ಆತ್ಮೀಯ ಗೆಳೆಯ. ಫ್ಯಾಮಿಲಿ ಫ್ರೆಂಡ್​ ಆಗಿದ್ದರು. ನನ್ನ ಬಗ್ಗೆ, ನಮ್ಮ ಮಕ್ಕಳ ಬಗ್ಗೆ ಅವರಿಗೆ ಕಾಳಜಿಯಿತ್ತು. ಸಿಕ್ಕಾಗ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದೆವು. ಮಾತಾಡುತ್ತಿದ್ದೆವು’ ಎಂದಿದ್ದಾರೆ ನೆನಪಿರಲಿ ಪ್ರೇಮ್​.

‘ಜಿಮ್​ಗೆ ಹೋಗೋದ್ರಿಂದ ಸಾವು ಸಂಭವಿಸುತ್ತೆ ಅನ್ನೋದು ತಪ್ಪು’: ನಟ ನೆನಪಿರಲಿ ಪ್ರೇಮ್​
ಪುನೀತ್​ ರಾಜ್​ಕುಮಾರ್​, ನೆನಪಿರಲಿ ಪ್ರೇಮ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 06, 2021 | 3:14 PM

ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ಸಾಕಷ್ಟು ಯುವಕರು ಜಿಮ್​ಗೆ ಹೋಗುವುದನ್ನು ನಿಲ್ಲಿಸಿದ್ದಾರೆ. ಹೃದಯಾಘಾತಕ್ಕೂ ಜಿಮ್​ಗೂ ಸಂಬಂಧ ಇದೆ ಎಂದು ಕೆಲವರು ಭಾವಿಸಿದ್ದಾರೆ. ಆ ಕುರಿತು ನಟ ನೆನಪಿರಲಿ ಪ್ರೇಮ್​ ಮಾತನಾಡಿದ್ದಾರೆ. ‘ಜಿಮ್​ಗೆ ಹೋಗೋದ್ರಿಂದ ಸಾವು ಸಂಭವಿಸುತ್ತೆ ಅನ್ನೋದು ತಪ್ಪು. ಅದೇ ಟೈಮ್​ನಲ್ಲಿ ಓವರ್​​ ಆಗಿ ಏನೇ ಮಾಡಿದರೂ ಆರೋಗ್ಯದಲ್ಲಿ ವ್ಯತ್ಯಾಸ ಆಗುತ್ತದೆ. ಒತ್ತಾಯಪೂರ್ವಕವಾಗಿ ಹಾಗೆ ಮಾಡಿದರೆ ಅಪಾಯದ ಸಾಧ್ಯತೆ ಇರುತ್ತದೆ. ಜಿಮ್​​ಗೆ ಹೋಗುವುದರಿಂದ ಆ ರೀತಿ ಆಗುತ್ತೆ ಎನ್ನುವುದು ಸುಳ್ಳು. ಲಕ್ಷಾಂತರ ಜನ ಜಿಮ್​ ನಂಬಿ ಬದುಕುತ್ತಿದ್ದಾರೆ’ ಎಂದು ಪ್ರೇಮ್​ ಹೇಳಿದ್ದಾರೆ.

‘ಜಿಮ್​ಗೆ ಹೋಗುವುದರಿಂದ ಅನೇಕರು ಆರೋಗ್ಯ ಕಾಪಾಡಿಕೊಂಡಿದ್ದಾರೆ. ಯಾವುದೇ ಆದ್ರೂ ಹಂತಹಂತವಾಗಿ ಮಾಡಿಕೊಂಡು ಹೋಗ್ಬೇಕು. ಕೆಲವರು ಯಾವುದೋ ಒಂದು ವಿಡಿಯೋ ನೋಡಿ ವರ್ಕೌಟ್ ಮಾಡುತ್ತಾರೆ. ಒಂದೇ ದಿನದಲ್ಲಿ ಫಿಟ್ ಆಗಬೇಕು, ತೂಕ ಇಳಿಸಬೇಕೆಂದು ಕಸರತ್ತು ಮಾಡ್ತಾರೆ. ತುಂಬಾನೇ ವರ್ಕೌಟ್​ ಮಾಡಿದಾಗ ಹೀಗೆ ಆಗುವುದು ಸಾಮಾನ್ಯ’ ಎಂಬುದು ಪ್ರೇಮ್​ ಅಭಿಪ್ರಾಯ.

‘ಪುನೀತ್ ನನ್ನ ಆತ್ಮೀಯ ಗೆಳೆಯ. ಫ್ಯಾಮಿಲಿ ಫ್ರೆಂಡ್​ ಆಗಿದ್ದರು. ನನ್ನ ಬಗ್ಗೆ, ನಮ್ಮ ಮಕ್ಕಳ ಬಗ್ಗೆ ಅವರಿಗೆ ಕಾಳಜಿಯಿತ್ತು. ಸಿಕ್ಕಾಗ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದೆವು. ಮಾತಾಡುತ್ತಿದ್ದೆವು. ಅಪ್ಪು ಸರ್ ನಿಧನರಾದಾಗ ನನ್ನ ಪುತ್ರಿ ನೋಡಬೇಕೆಂದು ಹೇಳಿದ್ದಳು. ತುಂಬಾ ಜನರಿದ್ದಾರೆ ಎಂದು ಹೇಳಿದಾಗ ಊಟ ಬಿಟ್ಟು ಮಲಗಿದ್ದಳು. ಮರುದಿನ ಮನೆಯವರೆಲ್ಲರನ್ನೂ ಕರೆದೊಯ್ದು ಅಂತಿಮ ದರ್ಶನ ಮಾಡಿಸಿದೆ. ಯಾಕಮ್ಮ ಇಷ್ಟೊಂದು ಹಠ ಮಾಡಿದೆ ಎಂದು ಮಗಳನ್ನು ಕೇಳಿದೆ. ಎಷ್ಟೇ ಜನರ ನಡುವೆ ಇದ್ದರೂ ನನ್ನನ್ನು ಗುರುತಿಸಿ ಮಾತಾಡುತ್ತಿದ್ರು, ನನ್ನನ್ನು ಗುರುತಿಸಿ ಕರೆದು ಮಾತನಾಡಿಸುತ್ತಿದ್ದರು ಅಂತ ಮಗಳು ಹೇಳಿದಳು. ನಮ್ಮ ಮತ್ತು ಅವರ ಕುಟುಂಬದ ನಡುವೆ ಅಂತಹ ಬಾಂಧವ್ಯವಿತ್ತು’ ಎಂದಿದ್ದಾರೆ ಪ್ರೇಮ್​.

ಇದನ್ನೂ ಓದಿ:

‘ಸಮಾಜ ಸೇವೆ ಮಾಡಿದ ಅಪ್ಪು​ ಯಾವ ದೇವರಿಗೂ ಕಮ್ಮಿ ಇಲ್ಲ’; ಸಮಾಧಿ ಬಳಿ ಮದುವೆ ಆಗಲು ಬಂದ ಪ್ರೇಮಿಗಳ ಮಾತು

ಪುನೀತ್​ ಸಮಾಧಿಗೆ ಪ್ರತಿದಿನ 20 ಸಾವಿರ ಮಂದಿ ಭೇಟಿ; ಕಂಠೀರವ ಸ್ಟುಡಿಯೋದಲ್ಲಿ ಈಗ ಹೇಗಿದೆ ಪರಿಸ್ಥಿತಿ?

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು