AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೆನಪಿರಲಿ’ ಪ್ರೇಮ್​ ಮುಂದಿನ ಚಿತ್ರಕ್ಕೆ 400 ಕೋಟಿ ರೂ. ಬಜೆಟ್​; ಹಾಲಿವುಡ್​ ಹಾದಿಯತ್ತ ‘ಲವ್ಲಿ ಸ್ಟಾರ್​’

‘ಪ್ರೇಮಂ ಪೂಜ್ಯಂ’ ಚಿತ್ರ ಮಾಡಿರುವ ತಂಡವೇ ಸೇರಿಕೊಂಡು ಮತ್ತೊಂದು ಸಿನಿಮಾ ಮಾಡಲಿದೆ. ಆ ಚಿತ್ರದಲ್ಲಿ ಪ್ರೇಮ್​ ಅವರು ವೀರ ಯೋಧನ ಪಾತ್ರ ಮಾಡಲಿದ್ದಾರೆ. ಆ ಚಿತ್ರ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ.

‘ನೆನಪಿರಲಿ’ ಪ್ರೇಮ್​ ಮುಂದಿನ ಚಿತ್ರಕ್ಕೆ 400 ಕೋಟಿ ರೂ. ಬಜೆಟ್​; ಹಾಲಿವುಡ್​ ಹಾದಿಯತ್ತ ‘ಲವ್ಲಿ ಸ್ಟಾರ್​’
‘ನೆನಪಿರಲಿ’ ಪ್ರೇಮ್​
TV9 Web
| Edited By: |

Updated on:Sep 23, 2021 | 12:17 PM

Share

ನಟ ‘ನೆನಪಿರಲಿ’ ಪ್ರೇಮ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು ಬಹಳ ವರ್ಷ ಕಳೆದಿದೆ. ಸಿನಿಮಾಗಳ ವಿಚಾರದಲ್ಲಿ ಅವರು ತುಂಬ ಚ್ಯೂಸಿ ಎಂದರೂ ತಪ್ಪಿಲ್ಲ. ಆ ಕಾರಣಕ್ಕಾಗಿ ಅವರ ಖಾತೆಯಲ್ಲಿನ ಚಿತ್ರಗಳ ಸಂಖ್ಯೆ ಈಗಿನ್ನೂ 25ರ ಗಡಿ ಮುಟ್ಟಿದೆ. ಅವರು ನಟಿಸುತ್ತಿರುವ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ರಿಲೀಸ್​ಗೆ ಸಿದ್ಧವಾಗುತ್ತಿದೆ. ಈ ನಡುವೆ ಅವರ ಮುಂದಿನ ಸಿನಿಮಾ ಬಗ್ಗೆ ಭರ್ಜರಿ ಸುದ್ದಿ ಹೊರಬಿದ್ದಿದೆ. ಪ್ರೇಮ್​ ನಟಿಸಲಿರುವ ಹೊಸ ಚಿತ್ರ ಬರೋಬ್ಬರಿ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ ಎಂಬುದು ಅಚ್ಚರಿಯ ವಿಚಾರ. ‘ಪ್ರೇಮಂ ಪೂಜ್ಯಂ’ ಚಿತ್ರ ಮಾಡಿರುವ ತಂಡವೇ ಸೇರಿಕೊಂಡು ಮತ್ತೊಂದು ಸಿನಿಮಾ ಮಾಡಲಿದೆ. ಆ ಚಿತ್ರದಲ್ಲಿ ಪ್ರೇಮ್​ ಅವರು ಯೋಧನ ಪಾತ್ರ ಮಾಡಲಿದ್ದಾರೆ. ಆ ಚಿತ್ರ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ. ‘ಪ್ರೇಮಂ ಪೂಜ್ಯಂ’ ನಿರ್ದೇಶಕ ಡಾ. ರಾಘವೇಂದ್ರ ಅವರೇ ಪ್ರೇಮ್​ ಮುಂದಿನ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಅದಕ್ಕಾಗಿ ಈಗಾಗಲೇ ಸ್ಕ್ರಿಪ್ಟ್​ ಕೂಡ ಸಿದ್ಧವಾಗಿದೆ. ಅಂತಾರಾಷ್ಟ್ರೀಯ​ ಮಟ್ಟದಲ್ಲಿ ಈ ಚಿತ್ರ ಮೂಡಿಬರಲಿದ್ದು, ಹಾಲಿವುಡ್​ ಸ್ಟುಡಿಯೋಗಳ ಜೊತೆ ಚಿತ್ರತಂಡ ಕೈ ಜೋಡಿಸಲಿದೆ.

ಸದ್ಯಕ್ಕೆ 400 ಕೋಟಿ ರೂ. ಬಜೆಟ್​ ಎಂದು ಅಂದಾಜಿಸಲಾಗಿದೆ. ಆದರೆ ಅದು 450 ಕೋಟಿ ರೂ. ದಾಟಿದರೂ ದಾಟಬಹುದು ಎಂದು ಚಿತ್ರತಂಡ ಹೇಳಿಕೊಂಡಿದೆ. ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಮಿಂಚುವ ರೀತಿಯಲ್ಲಿ ಈ ಪ್ರಯತ್ನ ಮಾಡಲಾಗುವುದು. ಹಲವು ಭಾಷೆಗಳಿಗೆ ಡಬ್​ ಮಾಡಿ ಈ ಚಿತ್ರವನ್ನು ಬಿಡುಗಡೆ ಮಾಡಲು ತಂಡ ಪ್ಲ್ಯಾನ್​ ಮಾಡಿಕೊಂಡಿದೆ.

ಅಕ್ಟೋಬರ್​ ಕೊನೇ ವಾರದಲ್ಲಿ ಪ್ರೇಮಂ ಪೂಜ್ಯಂ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಪ್ರೇಮ್​ ಜೊತೆ ಬೃಂದಾ ಆಚಾರ್ಯಾ, ಐಂದ್ರಿತಾ ರೇ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾ ರಿಲೀಸ್​ ಆದ ಬಳಿಕ ಪ್ರೇಮ್ ಅವರು ವಿದೇಶಕ್ಕೆ ತೆರಳಿ ಹೊಸ ಚಿತ್ರಕ್ಕಾಗಿ ಒಂದಷ್ಟು ತರಬೇತಿ ಪಡೆದುಕೊಳ್ಳಲಿದ್ದಾರೆ. ನಿರ್ದೇಶಕ ಡಾ. ರಾಘವೇಂದ್ರ ಮತ್ತು ನಟ ಪ್ರೇಮ್​ ಜೊತೆ ಹಾಲಿವುಡ್​ನ ಅನೇಕ ತಂತ್ರಜ್ಞರು ಮತ್ತು ಕಲಾವಿದರು ಈ ಪ್ರಾಜೆಕ್ಟ್​ಗಾಗಿ ಕೆಲಸ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ‘ಪ್ರೇಮಂ ಪೂಜ್ಯಂ’ ತಂಡ ಈ ವಿಚಾರವನ್ನು ಹಂಚಿಕೊಂಡಿದೆ.

ಇದನ್ನೂ ಓದಿ:

ಹಾಲಿವುಡ್​ಗೆ ಹಾರಲಿದ್ದಾರೆ ಪ್ರಭಾಸ್​? ಹಾರರ್​ ಕಥೆಯಲ್ಲಿ ಸಲಾರ್​ ಹೀರೋ

ಬಾಲಿವುಡ್ ಅಥವಾ ಹಾಲಿವುಡ್- ನಿಮ್ಮ ಆಯ್ಕೆ ಯಾವುದು ಎಂಬ ಪ್ರಶ್ನೆಗೆ ಮುಖ ತಿರುಗಿಸಿಕೊಂಡು ನಡೆದ ಪ್ರಿಯಾಂಕ

Published On - 9:41 am, Thu, 23 September 21

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್