AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೆನಪಿರಲಿ’ ಪ್ರೇಮ್​ ಮುಂದಿನ ಚಿತ್ರಕ್ಕೆ 400 ಕೋಟಿ ರೂ. ಬಜೆಟ್​; ಹಾಲಿವುಡ್​ ಹಾದಿಯತ್ತ ‘ಲವ್ಲಿ ಸ್ಟಾರ್​’

‘ಪ್ರೇಮಂ ಪೂಜ್ಯಂ’ ಚಿತ್ರ ಮಾಡಿರುವ ತಂಡವೇ ಸೇರಿಕೊಂಡು ಮತ್ತೊಂದು ಸಿನಿಮಾ ಮಾಡಲಿದೆ. ಆ ಚಿತ್ರದಲ್ಲಿ ಪ್ರೇಮ್​ ಅವರು ವೀರ ಯೋಧನ ಪಾತ್ರ ಮಾಡಲಿದ್ದಾರೆ. ಆ ಚಿತ್ರ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ.

‘ನೆನಪಿರಲಿ’ ಪ್ರೇಮ್​ ಮುಂದಿನ ಚಿತ್ರಕ್ಕೆ 400 ಕೋಟಿ ರೂ. ಬಜೆಟ್​; ಹಾಲಿವುಡ್​ ಹಾದಿಯತ್ತ ‘ಲವ್ಲಿ ಸ್ಟಾರ್​’
‘ನೆನಪಿರಲಿ’ ಪ್ರೇಮ್​
TV9 Web
| Edited By: |

Updated on:Sep 23, 2021 | 12:17 PM

Share

ನಟ ‘ನೆನಪಿರಲಿ’ ಪ್ರೇಮ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು ಬಹಳ ವರ್ಷ ಕಳೆದಿದೆ. ಸಿನಿಮಾಗಳ ವಿಚಾರದಲ್ಲಿ ಅವರು ತುಂಬ ಚ್ಯೂಸಿ ಎಂದರೂ ತಪ್ಪಿಲ್ಲ. ಆ ಕಾರಣಕ್ಕಾಗಿ ಅವರ ಖಾತೆಯಲ್ಲಿನ ಚಿತ್ರಗಳ ಸಂಖ್ಯೆ ಈಗಿನ್ನೂ 25ರ ಗಡಿ ಮುಟ್ಟಿದೆ. ಅವರು ನಟಿಸುತ್ತಿರುವ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ರಿಲೀಸ್​ಗೆ ಸಿದ್ಧವಾಗುತ್ತಿದೆ. ಈ ನಡುವೆ ಅವರ ಮುಂದಿನ ಸಿನಿಮಾ ಬಗ್ಗೆ ಭರ್ಜರಿ ಸುದ್ದಿ ಹೊರಬಿದ್ದಿದೆ. ಪ್ರೇಮ್​ ನಟಿಸಲಿರುವ ಹೊಸ ಚಿತ್ರ ಬರೋಬ್ಬರಿ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ ಎಂಬುದು ಅಚ್ಚರಿಯ ವಿಚಾರ. ‘ಪ್ರೇಮಂ ಪೂಜ್ಯಂ’ ಚಿತ್ರ ಮಾಡಿರುವ ತಂಡವೇ ಸೇರಿಕೊಂಡು ಮತ್ತೊಂದು ಸಿನಿಮಾ ಮಾಡಲಿದೆ. ಆ ಚಿತ್ರದಲ್ಲಿ ಪ್ರೇಮ್​ ಅವರು ಯೋಧನ ಪಾತ್ರ ಮಾಡಲಿದ್ದಾರೆ. ಆ ಚಿತ್ರ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ. ‘ಪ್ರೇಮಂ ಪೂಜ್ಯಂ’ ನಿರ್ದೇಶಕ ಡಾ. ರಾಘವೇಂದ್ರ ಅವರೇ ಪ್ರೇಮ್​ ಮುಂದಿನ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಅದಕ್ಕಾಗಿ ಈಗಾಗಲೇ ಸ್ಕ್ರಿಪ್ಟ್​ ಕೂಡ ಸಿದ್ಧವಾಗಿದೆ. ಅಂತಾರಾಷ್ಟ್ರೀಯ​ ಮಟ್ಟದಲ್ಲಿ ಈ ಚಿತ್ರ ಮೂಡಿಬರಲಿದ್ದು, ಹಾಲಿವುಡ್​ ಸ್ಟುಡಿಯೋಗಳ ಜೊತೆ ಚಿತ್ರತಂಡ ಕೈ ಜೋಡಿಸಲಿದೆ.

ಸದ್ಯಕ್ಕೆ 400 ಕೋಟಿ ರೂ. ಬಜೆಟ್​ ಎಂದು ಅಂದಾಜಿಸಲಾಗಿದೆ. ಆದರೆ ಅದು 450 ಕೋಟಿ ರೂ. ದಾಟಿದರೂ ದಾಟಬಹುದು ಎಂದು ಚಿತ್ರತಂಡ ಹೇಳಿಕೊಂಡಿದೆ. ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಮಿಂಚುವ ರೀತಿಯಲ್ಲಿ ಈ ಪ್ರಯತ್ನ ಮಾಡಲಾಗುವುದು. ಹಲವು ಭಾಷೆಗಳಿಗೆ ಡಬ್​ ಮಾಡಿ ಈ ಚಿತ್ರವನ್ನು ಬಿಡುಗಡೆ ಮಾಡಲು ತಂಡ ಪ್ಲ್ಯಾನ್​ ಮಾಡಿಕೊಂಡಿದೆ.

ಅಕ್ಟೋಬರ್​ ಕೊನೇ ವಾರದಲ್ಲಿ ಪ್ರೇಮಂ ಪೂಜ್ಯಂ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಪ್ರೇಮ್​ ಜೊತೆ ಬೃಂದಾ ಆಚಾರ್ಯಾ, ಐಂದ್ರಿತಾ ರೇ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾ ರಿಲೀಸ್​ ಆದ ಬಳಿಕ ಪ್ರೇಮ್ ಅವರು ವಿದೇಶಕ್ಕೆ ತೆರಳಿ ಹೊಸ ಚಿತ್ರಕ್ಕಾಗಿ ಒಂದಷ್ಟು ತರಬೇತಿ ಪಡೆದುಕೊಳ್ಳಲಿದ್ದಾರೆ. ನಿರ್ದೇಶಕ ಡಾ. ರಾಘವೇಂದ್ರ ಮತ್ತು ನಟ ಪ್ರೇಮ್​ ಜೊತೆ ಹಾಲಿವುಡ್​ನ ಅನೇಕ ತಂತ್ರಜ್ಞರು ಮತ್ತು ಕಲಾವಿದರು ಈ ಪ್ರಾಜೆಕ್ಟ್​ಗಾಗಿ ಕೆಲಸ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ‘ಪ್ರೇಮಂ ಪೂಜ್ಯಂ’ ತಂಡ ಈ ವಿಚಾರವನ್ನು ಹಂಚಿಕೊಂಡಿದೆ.

ಇದನ್ನೂ ಓದಿ:

ಹಾಲಿವುಡ್​ಗೆ ಹಾರಲಿದ್ದಾರೆ ಪ್ರಭಾಸ್​? ಹಾರರ್​ ಕಥೆಯಲ್ಲಿ ಸಲಾರ್​ ಹೀರೋ

ಬಾಲಿವುಡ್ ಅಥವಾ ಹಾಲಿವುಡ್- ನಿಮ್ಮ ಆಯ್ಕೆ ಯಾವುದು ಎಂಬ ಪ್ರಶ್ನೆಗೆ ಮುಖ ತಿರುಗಿಸಿಕೊಂಡು ನಡೆದ ಪ್ರಿಯಾಂಕ

Published On - 9:41 am, Thu, 23 September 21

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ