‘ನೆನಪಿರಲಿ’ ಪ್ರೇಮ್​ ಮುಂದಿನ ಚಿತ್ರಕ್ಕೆ 400 ಕೋಟಿ ರೂ. ಬಜೆಟ್​; ಹಾಲಿವುಡ್​ ಹಾದಿಯತ್ತ ‘ಲವ್ಲಿ ಸ್ಟಾರ್​’

‘ಪ್ರೇಮಂ ಪೂಜ್ಯಂ’ ಚಿತ್ರ ಮಾಡಿರುವ ತಂಡವೇ ಸೇರಿಕೊಂಡು ಮತ್ತೊಂದು ಸಿನಿಮಾ ಮಾಡಲಿದೆ. ಆ ಚಿತ್ರದಲ್ಲಿ ಪ್ರೇಮ್​ ಅವರು ವೀರ ಯೋಧನ ಪಾತ್ರ ಮಾಡಲಿದ್ದಾರೆ. ಆ ಚಿತ್ರ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ.

‘ನೆನಪಿರಲಿ’ ಪ್ರೇಮ್​ ಮುಂದಿನ ಚಿತ್ರಕ್ಕೆ 400 ಕೋಟಿ ರೂ. ಬಜೆಟ್​; ಹಾಲಿವುಡ್​ ಹಾದಿಯತ್ತ ‘ಲವ್ಲಿ ಸ್ಟಾರ್​’
‘ನೆನಪಿರಲಿ’ ಪ್ರೇಮ್​
Follow us
| Updated By: Digi Tech Desk

Updated on:Sep 23, 2021 | 12:17 PM

ನಟ ‘ನೆನಪಿರಲಿ’ ಪ್ರೇಮ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು ಬಹಳ ವರ್ಷ ಕಳೆದಿದೆ. ಸಿನಿಮಾಗಳ ವಿಚಾರದಲ್ಲಿ ಅವರು ತುಂಬ ಚ್ಯೂಸಿ ಎಂದರೂ ತಪ್ಪಿಲ್ಲ. ಆ ಕಾರಣಕ್ಕಾಗಿ ಅವರ ಖಾತೆಯಲ್ಲಿನ ಚಿತ್ರಗಳ ಸಂಖ್ಯೆ ಈಗಿನ್ನೂ 25ರ ಗಡಿ ಮುಟ್ಟಿದೆ. ಅವರು ನಟಿಸುತ್ತಿರುವ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ರಿಲೀಸ್​ಗೆ ಸಿದ್ಧವಾಗುತ್ತಿದೆ. ಈ ನಡುವೆ ಅವರ ಮುಂದಿನ ಸಿನಿಮಾ ಬಗ್ಗೆ ಭರ್ಜರಿ ಸುದ್ದಿ ಹೊರಬಿದ್ದಿದೆ. ಪ್ರೇಮ್​ ನಟಿಸಲಿರುವ ಹೊಸ ಚಿತ್ರ ಬರೋಬ್ಬರಿ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ ಎಂಬುದು ಅಚ್ಚರಿಯ ವಿಚಾರ. ‘ಪ್ರೇಮಂ ಪೂಜ್ಯಂ’ ಚಿತ್ರ ಮಾಡಿರುವ ತಂಡವೇ ಸೇರಿಕೊಂಡು ಮತ್ತೊಂದು ಸಿನಿಮಾ ಮಾಡಲಿದೆ. ಆ ಚಿತ್ರದಲ್ಲಿ ಪ್ರೇಮ್​ ಅವರು ಯೋಧನ ಪಾತ್ರ ಮಾಡಲಿದ್ದಾರೆ. ಆ ಚಿತ್ರ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ. ‘ಪ್ರೇಮಂ ಪೂಜ್ಯಂ’ ನಿರ್ದೇಶಕ ಡಾ. ರಾಘವೇಂದ್ರ ಅವರೇ ಪ್ರೇಮ್​ ಮುಂದಿನ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಅದಕ್ಕಾಗಿ ಈಗಾಗಲೇ ಸ್ಕ್ರಿಪ್ಟ್​ ಕೂಡ ಸಿದ್ಧವಾಗಿದೆ. ಅಂತಾರಾಷ್ಟ್ರೀಯ​ ಮಟ್ಟದಲ್ಲಿ ಈ ಚಿತ್ರ ಮೂಡಿಬರಲಿದ್ದು, ಹಾಲಿವುಡ್​ ಸ್ಟುಡಿಯೋಗಳ ಜೊತೆ ಚಿತ್ರತಂಡ ಕೈ ಜೋಡಿಸಲಿದೆ.

ಸದ್ಯಕ್ಕೆ 400 ಕೋಟಿ ರೂ. ಬಜೆಟ್​ ಎಂದು ಅಂದಾಜಿಸಲಾಗಿದೆ. ಆದರೆ ಅದು 450 ಕೋಟಿ ರೂ. ದಾಟಿದರೂ ದಾಟಬಹುದು ಎಂದು ಚಿತ್ರತಂಡ ಹೇಳಿಕೊಂಡಿದೆ. ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಮಿಂಚುವ ರೀತಿಯಲ್ಲಿ ಈ ಪ್ರಯತ್ನ ಮಾಡಲಾಗುವುದು. ಹಲವು ಭಾಷೆಗಳಿಗೆ ಡಬ್​ ಮಾಡಿ ಈ ಚಿತ್ರವನ್ನು ಬಿಡುಗಡೆ ಮಾಡಲು ತಂಡ ಪ್ಲ್ಯಾನ್​ ಮಾಡಿಕೊಂಡಿದೆ.

ಅಕ್ಟೋಬರ್​ ಕೊನೇ ವಾರದಲ್ಲಿ ಪ್ರೇಮಂ ಪೂಜ್ಯಂ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಪ್ರೇಮ್​ ಜೊತೆ ಬೃಂದಾ ಆಚಾರ್ಯಾ, ಐಂದ್ರಿತಾ ರೇ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾ ರಿಲೀಸ್​ ಆದ ಬಳಿಕ ಪ್ರೇಮ್ ಅವರು ವಿದೇಶಕ್ಕೆ ತೆರಳಿ ಹೊಸ ಚಿತ್ರಕ್ಕಾಗಿ ಒಂದಷ್ಟು ತರಬೇತಿ ಪಡೆದುಕೊಳ್ಳಲಿದ್ದಾರೆ. ನಿರ್ದೇಶಕ ಡಾ. ರಾಘವೇಂದ್ರ ಮತ್ತು ನಟ ಪ್ರೇಮ್​ ಜೊತೆ ಹಾಲಿವುಡ್​ನ ಅನೇಕ ತಂತ್ರಜ್ಞರು ಮತ್ತು ಕಲಾವಿದರು ಈ ಪ್ರಾಜೆಕ್ಟ್​ಗಾಗಿ ಕೆಲಸ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ‘ಪ್ರೇಮಂ ಪೂಜ್ಯಂ’ ತಂಡ ಈ ವಿಚಾರವನ್ನು ಹಂಚಿಕೊಂಡಿದೆ.

ಇದನ್ನೂ ಓದಿ:

ಹಾಲಿವುಡ್​ಗೆ ಹಾರಲಿದ್ದಾರೆ ಪ್ರಭಾಸ್​? ಹಾರರ್​ ಕಥೆಯಲ್ಲಿ ಸಲಾರ್​ ಹೀರೋ

ಬಾಲಿವುಡ್ ಅಥವಾ ಹಾಲಿವುಡ್- ನಿಮ್ಮ ಆಯ್ಕೆ ಯಾವುದು ಎಂಬ ಪ್ರಶ್ನೆಗೆ ಮುಖ ತಿರುಗಿಸಿಕೊಂಡು ನಡೆದ ಪ್ರಿಯಾಂಕ

Published On - 9:41 am, Thu, 23 September 21

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ