AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೆನಪಿರಲಿ’ ಪ್ರೇಮ್​ ಮುಂದಿನ ಚಿತ್ರಕ್ಕೆ 400 ಕೋಟಿ ರೂ. ಬಜೆಟ್​; ಹಾಲಿವುಡ್​ ಹಾದಿಯತ್ತ ‘ಲವ್ಲಿ ಸ್ಟಾರ್​’

‘ಪ್ರೇಮಂ ಪೂಜ್ಯಂ’ ಚಿತ್ರ ಮಾಡಿರುವ ತಂಡವೇ ಸೇರಿಕೊಂಡು ಮತ್ತೊಂದು ಸಿನಿಮಾ ಮಾಡಲಿದೆ. ಆ ಚಿತ್ರದಲ್ಲಿ ಪ್ರೇಮ್​ ಅವರು ವೀರ ಯೋಧನ ಪಾತ್ರ ಮಾಡಲಿದ್ದಾರೆ. ಆ ಚಿತ್ರ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ.

‘ನೆನಪಿರಲಿ’ ಪ್ರೇಮ್​ ಮುಂದಿನ ಚಿತ್ರಕ್ಕೆ 400 ಕೋಟಿ ರೂ. ಬಜೆಟ್​; ಹಾಲಿವುಡ್​ ಹಾದಿಯತ್ತ ‘ಲವ್ಲಿ ಸ್ಟಾರ್​’
‘ನೆನಪಿರಲಿ’ ಪ್ರೇಮ್​
Follow us
TV9 Web
| Updated By: Digi Tech Desk

Updated on:Sep 23, 2021 | 12:17 PM

ನಟ ‘ನೆನಪಿರಲಿ’ ಪ್ರೇಮ್​ ಅವರು ಚಿತ್ರರಂಗಕ್ಕೆ ಕಾಲಿಟ್ಟು ಬಹಳ ವರ್ಷ ಕಳೆದಿದೆ. ಸಿನಿಮಾಗಳ ವಿಚಾರದಲ್ಲಿ ಅವರು ತುಂಬ ಚ್ಯೂಸಿ ಎಂದರೂ ತಪ್ಪಿಲ್ಲ. ಆ ಕಾರಣಕ್ಕಾಗಿ ಅವರ ಖಾತೆಯಲ್ಲಿನ ಚಿತ್ರಗಳ ಸಂಖ್ಯೆ ಈಗಿನ್ನೂ 25ರ ಗಡಿ ಮುಟ್ಟಿದೆ. ಅವರು ನಟಿಸುತ್ತಿರುವ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ರಿಲೀಸ್​ಗೆ ಸಿದ್ಧವಾಗುತ್ತಿದೆ. ಈ ನಡುವೆ ಅವರ ಮುಂದಿನ ಸಿನಿಮಾ ಬಗ್ಗೆ ಭರ್ಜರಿ ಸುದ್ದಿ ಹೊರಬಿದ್ದಿದೆ. ಪ್ರೇಮ್​ ನಟಿಸಲಿರುವ ಹೊಸ ಚಿತ್ರ ಬರೋಬ್ಬರಿ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ ಎಂಬುದು ಅಚ್ಚರಿಯ ವಿಚಾರ. ‘ಪ್ರೇಮಂ ಪೂಜ್ಯಂ’ ಚಿತ್ರ ಮಾಡಿರುವ ತಂಡವೇ ಸೇರಿಕೊಂಡು ಮತ್ತೊಂದು ಸಿನಿಮಾ ಮಾಡಲಿದೆ. ಆ ಚಿತ್ರದಲ್ಲಿ ಪ್ರೇಮ್​ ಅವರು ಯೋಧನ ಪಾತ್ರ ಮಾಡಲಿದ್ದಾರೆ. ಆ ಚಿತ್ರ 400 ಕೋಟಿ ರೂ. ಬಜೆಟ್​ನಲ್ಲಿ ಮೂಡಿಬರಲಿದೆ. ‘ಪ್ರೇಮಂ ಪೂಜ್ಯಂ’ ನಿರ್ದೇಶಕ ಡಾ. ರಾಘವೇಂದ್ರ ಅವರೇ ಪ್ರೇಮ್​ ಮುಂದಿನ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಅದಕ್ಕಾಗಿ ಈಗಾಗಲೇ ಸ್ಕ್ರಿಪ್ಟ್​ ಕೂಡ ಸಿದ್ಧವಾಗಿದೆ. ಅಂತಾರಾಷ್ಟ್ರೀಯ​ ಮಟ್ಟದಲ್ಲಿ ಈ ಚಿತ್ರ ಮೂಡಿಬರಲಿದ್ದು, ಹಾಲಿವುಡ್​ ಸ್ಟುಡಿಯೋಗಳ ಜೊತೆ ಚಿತ್ರತಂಡ ಕೈ ಜೋಡಿಸಲಿದೆ.

ಸದ್ಯಕ್ಕೆ 400 ಕೋಟಿ ರೂ. ಬಜೆಟ್​ ಎಂದು ಅಂದಾಜಿಸಲಾಗಿದೆ. ಆದರೆ ಅದು 450 ಕೋಟಿ ರೂ. ದಾಟಿದರೂ ದಾಟಬಹುದು ಎಂದು ಚಿತ್ರತಂಡ ಹೇಳಿಕೊಂಡಿದೆ. ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಮಿಂಚುವ ರೀತಿಯಲ್ಲಿ ಈ ಪ್ರಯತ್ನ ಮಾಡಲಾಗುವುದು. ಹಲವು ಭಾಷೆಗಳಿಗೆ ಡಬ್​ ಮಾಡಿ ಈ ಚಿತ್ರವನ್ನು ಬಿಡುಗಡೆ ಮಾಡಲು ತಂಡ ಪ್ಲ್ಯಾನ್​ ಮಾಡಿಕೊಂಡಿದೆ.

ಅಕ್ಟೋಬರ್​ ಕೊನೇ ವಾರದಲ್ಲಿ ಪ್ರೇಮಂ ಪೂಜ್ಯಂ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಪ್ರೇಮ್​ ಜೊತೆ ಬೃಂದಾ ಆಚಾರ್ಯಾ, ಐಂದ್ರಿತಾ ರೇ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾ ರಿಲೀಸ್​ ಆದ ಬಳಿಕ ಪ್ರೇಮ್ ಅವರು ವಿದೇಶಕ್ಕೆ ತೆರಳಿ ಹೊಸ ಚಿತ್ರಕ್ಕಾಗಿ ಒಂದಷ್ಟು ತರಬೇತಿ ಪಡೆದುಕೊಳ್ಳಲಿದ್ದಾರೆ. ನಿರ್ದೇಶಕ ಡಾ. ರಾಘವೇಂದ್ರ ಮತ್ತು ನಟ ಪ್ರೇಮ್​ ಜೊತೆ ಹಾಲಿವುಡ್​ನ ಅನೇಕ ತಂತ್ರಜ್ಞರು ಮತ್ತು ಕಲಾವಿದರು ಈ ಪ್ರಾಜೆಕ್ಟ್​ಗಾಗಿ ಕೆಲಸ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ‘ಪ್ರೇಮಂ ಪೂಜ್ಯಂ’ ತಂಡ ಈ ವಿಚಾರವನ್ನು ಹಂಚಿಕೊಂಡಿದೆ.

ಇದನ್ನೂ ಓದಿ:

ಹಾಲಿವುಡ್​ಗೆ ಹಾರಲಿದ್ದಾರೆ ಪ್ರಭಾಸ್​? ಹಾರರ್​ ಕಥೆಯಲ್ಲಿ ಸಲಾರ್​ ಹೀರೋ

ಬಾಲಿವುಡ್ ಅಥವಾ ಹಾಲಿವುಡ್- ನಿಮ್ಮ ಆಯ್ಕೆ ಯಾವುದು ಎಂಬ ಪ್ರಶ್ನೆಗೆ ಮುಖ ತಿರುಗಿಸಿಕೊಂಡು ನಡೆದ ಪ್ರಿಯಾಂಕ

Published On - 9:41 am, Thu, 23 September 21

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್