AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಬ್ಲಾಕ್​ ಬಸ್ಟರ್​ ಗೆಲುವು ಕಂಡ ಬಳಿಕ ‘ಪುಷ್ಪ 2’ ಚಿತ್ರತಂಡಕ್ಕೆ ಚಿಂತೆ ಶುರು; ಏನಿದು ಟಾಕ್​?

Pushpa 2 | KGF Chapter 2: ‘ಕೆಜಿಎಫ್​: ಚಾಪ್ಟರ್​ 2’ ಮಾಡಿದ ದಾಖಲೆಗಳನ್ನು ಮುರಿಯಲು ‘ಪುಷ್ಪ 2’ ಚಿತ್ರಕ್ಕೆ ಸಾಧ್ಯವೇ? ಈ ಕುರಿತು ಫ್ಯಾನ್ಸ್​ ಚರ್ಚೆ ಮಾಡುತ್ತಿದ್ದಾರೆ.

‘ಕೆಜಿಎಫ್​ 2’ ಬ್ಲಾಕ್​ ಬಸ್ಟರ್​ ಗೆಲುವು ಕಂಡ ಬಳಿಕ ‘ಪುಷ್ಪ 2’ ಚಿತ್ರತಂಡಕ್ಕೆ ಚಿಂತೆ ಶುರು; ಏನಿದು ಟಾಕ್​?
ಅಲ್ಲು ಅರ್ಜುನ್, ಯಶ್
TV9 Web
| Edited By: |

Updated on: Apr 16, 2022 | 9:24 AM

Share

ಈಗ ದೇಶಾದ್ಯಂತ ದಕ್ಷಿಣ ಭಾರತದ ಸಿನಿಮಾಗಳು ಸೌಂಡು ಮಾಡುತ್ತಿವೆ. ‘ಕೆಜಿಎಫ್​ 2’, ‘ಆರ್​ಆರ್​ಆರ್​’, ‘ಪುಷ್ಪ’ ಮುಂತಾದ ಸಿನಿಮಾಗಳ ಅಬ್ಬರದಿಂದಾಗಿ ಸೌತ್​ ಸಿನಿಮಾ ಇಂಡಸ್ಟ್ರಿಗೆ ದೊಡ್ಡ ಬಲ ಬಂದಿದೆ. ಈ ಚಿತ್ರಗಳ ಎದುರು ಬಾಲಿವುಡ್​ ಮಂದಿ ಮಂಕಾಗಿದ್ದಾರೆ. ದಕ್ಷಿಣದ ನಿರ್ದೇಶಕರು ಮಾಡುವ ಸಿನಿಮಾಗಳನ್ನು ಕಂಡು ಹಿಂದಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಏ.14ರಂದು ತೆರೆಕಂಡ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಸೂಪರ್​ ಹಿಟ್​ ಆಗಿದೆ ಮೊದಲ ದಿನವೇ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಬರೋಬ್ಬರಿ 134.5 ಕೋಟಿ ರೂಪಾಯಿ ಕಮಾಯಿ ಮಾಡುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಈ ಗೆಲುವಿನಿಂದಾಗಿ ‘ಪುಷ್ಪ 2’ (Pushpa 2) ತಂಡಕ್ಕೆ ಹೊಸದೊಂದು ಚಿಂತೆ ಶುರುವಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಸಿನಿಪ್ರಿಯರು ಈ ರೀತಿ ಚರ್ಚೆ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್​ (Allu Arjun) ನಟನೆಯ ‘ಪುಷ್ಪ 2’ ಚಿತ್ರತಂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಎಲ್ಲರಿಗೂ ನೆನಪಿರಬಹುದು.. ‘ಪುಷ್ಪ’ ಸಿನಿಮಾ ತೆರೆಕಾಣುವಾಗ ‘ಒಂದು ಪುಷ್ಪ ಚಿತ್ರ 10 ಕೆಜಿಎಫ್​ ಸಿನಿಮಾಗೆ ಸಮ’ ಎಂಬ ಮಾತು ವೈರಲ್​ ಆಗಿತ್ತು. ಆ ಕಾರಣಕ್ಕಾಗಿ ‘ಪುಷ್ಪ’ ವರ್ಸಸ್ ‘ಕೆಜಿಎಫ್​’ ಎನ್ನುವ ಚರ್ಚೆ ಸೋಶಿಯಲ್​ ಮೀಡಿಯಾದಲ್ಲಿ ನಡೆದಿತ್ತು. ಈಗ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಬಿಡುಗಡೆ ಆಗಿರುವ ಸಂದರ್ಭದಲ್ಲಿ ಮತ್ತೆ ಅದೇ ವಿಷಯ ಮುನ್ನೆಲೆಗೆ ಬಂದಿದೆ.

‘ಕೆಜಿಎಫ್​: ಚಾಪ್ಟರ್​ 1’ ಮಾಡಿದ್ದ ದಾಖಲೆಯನ್ನು ‘ಪುಷ್ಪ’ ಸಿನಿಮಾ ಅಳಿಸಿ ಹಾಕಿತು ಎಂಬುದು ನಿಜ. ಆದರೆ ‘ಪುಷ್ಪ’ ಚಿತ್ರದ ಎಲ್ಲ ದಾಖಲೆಗಳನ್ನು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ನೆಲಸಮ ಮಾಡಿ ಹಾಕಿದೆ. ಮೊದಲ ದಿನವೇ ಹಿಂದಿ ಮಾರುಕಟ್ಟೆಯಲ್ಲಿ 53.95 ಕೋಟಿ ಹಾಗೂ ಒಟ್ಟಾರೆ ಭಾರತೀಯ ಬಾಕ್ಸ್​ ಆಫೀಸ್​ನಲ್ಲಿ 134.5 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ ಸುನಾಮಿಯನ್ನೇ ಸೃಷ್ಟಿಸಿದೆ. ಇದರಿಂದ ‘ಪುಷ್ಪ 2’ ತಂಡಕ್ಕೆ ಹೊಸ ಟಾರ್ಗೆಟ್​ ಹಾಕಿಕೊಟ್ಟಂತೆ ಆಗಿದೆ. ಇದನ್ನು ಬೀಟ್​ ಮಾಡಲು ‘ಪುಷ್ಪ 2’ ತಂಡಕ್ಕೆ ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ.

ಅಲ್ಲು ಅರ್ಜುನ್​ ಅವರಿಗೂ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಹಾಗಿದ್ದರೂ ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಿರುವ ಸಾಧನೆಯನ್ನು ‘ಪುಷ್ಪ 2’ ತಂಡ ಬೀಟ್​ ಮಾಡಬೇಕು ಎಂದರೆ ಸುಲಭದ ಮಾತಲ್ಲ. ಹಾಗಾಗಿ ನಿರ್ದೇಶಕ ಸುಕುಮಾರ್​ ಸೇರಿದಂತೆ ಇಡೀ ತಂಡಕ್ಕೆ ಟೆನ್ಷನ್​ ಶುರುವಾಗಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಅಬ್ಬರ ಸದ್ಯಕ್ಕಂತೂ ನಿಲ್ಲುವುದಿಲ್ಲ. ಎರಡನೇ ದಿನವೂ ಬಹುತೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್​ ಆದ್ದರಿಂದ ದುಪ್ಪಟ್ಟು ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಆ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಅದ್ಭುತವನ್ನೇ ಸೃಷ್ಟಿ ಮಾಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗೆಲುವಿನಿಂದಾಗಿ ಯಶ್​ ಹವಾ ಹೆಚ್ಚಿದೆ. ದೇಶಾದ್ಯಂತ ಅವರ ಮಾರುಕಟ್ಟೆ ವಿಸ್ತಾರ ಆಗಿದೆ. ಅಷ್ಟೇ ಅಲ್ಲ, ವಿದೇಶದಲ್ಲೂ ಈ ಚಿತ್ರ ಭರ್ಜರಿ ಕಮಾಯಿ ಮಾಡುತ್ತಿದೆ. ಅಮೆರಿಕಾ, ಕೆನಡಾ ಮುಂತಾದ ಕಡೆ ಇರುವ ಕನ್ನಡಿಗರು ಮುಗಿಬಿದ್ದು ಈ ಚಿತ್ರವನ್ನು ನೋಡುತ್ತಿದ್ದಾರೆ.

ಇದನ್ನೂ ಓದಿ:

‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

KGF Chapter 2 Collection: ಫಸ್ಟ್​ ಡೇ 134.5 ಕೋಟಿ ರೂ. ಕಲೆಕ್ಷನ್​ ಮಾಡಿದ ‘ಕೆಜಿಎಫ್​ 2’; ವಿಶ್ವಾದ್ಯಂತ ಗಳಿಸಿದ್ದು ಇನ್ನೂ ಹೆಚ್ಚು

Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!