AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Savi Madappa: ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣ; ಡೆತ್​ನೋಟನ್ನು FSL ಪರೀಕ್ಷೆಗೆ ಕಳುಹಿಸಲು ಮುಂದಾದ ಪೊಲೀಸರು

ನಟಿ ಸವಿ ಮಾದಪ್ಪ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಪೊಲೀಸರ ಕೈಸೇರಿದೆ. ಎಫ್​ಎಸ್​​ಎಲ್ ವರದಿ ಕೈಸೇರಿದ ನಂತರ ಅಂತಿಮ ವರದಿಯನ್ನು ವೈದ್ಯರು ನೀಡಲಿದ್ದಾರೆ.

Savi Madappa: ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣ; ಡೆತ್​ನೋಟನ್ನು FSL ಪರೀಕ್ಷೆಗೆ ಕಳುಹಿಸಲು ಮುಂದಾದ ಪೊಲೀಸರು
ಸವಿ ಮಾದಪ್ಪ
TV9 Web
| Edited By: |

Updated on: Oct 20, 2021 | 9:59 AM

Share

ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರಣೋತ್ತರ ಪರೀಕ್ಷೆ ವರದಿ ಪೊಲೀಸರ ‌ಕೈ ಸೇರಿದೆ. ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯ ವೈದ್ಯರಿಂದ ಪ್ರಾಥಮಿಕ ವರದಿ ಸಲ್ಲಿಕೆಯಾಗಿದ್ದು, ನೇಣುಬಿಗಿದುಕೊಂಡು ಸಾವನ್ನಪ್ಪಿರುವುದನ್ನು ಖಚಿತಪಡಿಸಿದ್ದಾರೆ. ತಾವಿದ್ದ ಅಪಾರ್ಟ್ಮೆಂಟ್ ನಲ್ಲಿ ಐದು ಪುಟಗಳ ಡೆತ್ ನೋಟ್ ಬರೆದಿಟ್ಟು, ಸೆಪ್ಟೆಂಬರ್ 30 ರಂದು ಸವಿ ಮಾದಪ್ಪ ನೇಣಿಗೆ ಶರಣಾಗಿದ್ದರು. ಮಗಳ ಸಾವಿಗ ಬಗ್ಗೆ ಅನುಮಾನ ‌ವ್ಯಕ್ತಪಡಿಸಿ ಕುಂಬಳಗೂಡು ಠಾಣೆಗೆ ಸವಿ‌ ತಂದೆ ಪ್ರಭು ಮಾದಪ್ಪ ದೂರು ನೀಡಿದ್ದರು.

ಪ್ರಸ್ತುತ ವೈದ್ಯರು ಅಂತಿಮ ವರದಿ ನೀಡಲು ಕಾಯುತ್ತಿದ್ದಾರೆ. ಎಫ್​ಎಸ್​​ಎಲ್ ವರದಿ ಬಂದ ನಂತರ ಅಂತಿಮ ವರದಿಯನ್ನು ವೈದ್ಯರು ನೀಡಲಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ನೇಣುಬಿಗಿದುಕೊಂಡು ಸಾವು ಎಂದು ವರದಿ ನೀಡಲಾಗಿದೆ. ಆದರೆ, ದೇಹದ ಇತರೆ ಭಾಗಕ್ಕೆ ಬೇರೆ ಏನಾದರೂ ಸೇರಿದೆಯಾ ಎಂದು ತಿಳಿಯಲು ಎಫ್​​ಎಸ್​ಎಲ್​ಗೆ ಕಳುಹಿಸಲಾಗಿತ್ತು. ಆ ವರದಿ ಬಂದ ನಂತರ ಸಾವಿನ ಅಂತಿಮ ವರದಿಯನ್ನು ವೈದ್ಯರು ಕುಂಬಳಗೂಡು ಪೊಲೀಸರಿಗೆ ನೀಡಲಿದ್ದಾರೆ.

ಇನ್ನು ಡೆತ್ ನೋಟ್​ಗಳನ್ನು ಕೂಡ ಎಫ್​ಎಸ್​​ಎಲ್ ಪರೀಕ್ಷೆಗೆ ಕಳುಹಿಸಲು‌ ಕುಂಬಳಗೂಡು ಪೊಲೀಸರು ಮುಂದಾಗಿದ್ದಾರೆ. ಡೆತ್ ನೋಟ್ ನಲ್ಲಿ ಇರುವ ಬರವಣಿಗೆ ಸವಿ ಮಾದಪ್ಪ ಅವರದ್ದೇ ಹೌದೇ ಎಂದು ಖಚಿತಪಡಿಸಲು ಎಫ್​ಎಸ್​​ಎಲ್​ ಪರೀಕ್ಷೆಗೆ ರವಾನಿಸಲಾಗುವುದು. ಈ ಕುರಿತು ರಾಮನಗರ ಎಸ್​ಪಿ ಗಿರೀಶ್.ಎಸ್ ಹೇಳಿಕೆ ನೀಡಿದ್ದಾರೆ.

ಡೆತ್​ನೋಟ್​ನಲ್ಲಿ ಸವಿಮಾದಪ್ಪ ಬರೆದಿದ್ದೇನು? ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಸವಿ ಮಾದಪ್ಪ ಅವರು ಡೆತ್​ ನೋಟ್​ ಬರೆದಿಟ್ಟಿದ್ದರು. ಆ ಪತ್ರದಲ್ಲಿ ಗೆಳೆಯ ವಿವೇಕ್​ಗೆ ಅವರು ಕ್ಷಮೆ ಕೇಳಿದ್ದರು. ಜೀವನದಲ್ಲಿ ಅಂದುಕೊಂಡಿದ್ದು ಆಗಲಿಲ್ಲ. ಕೆಲಸದ ವಿಚಾರದಲ್ಲಿ ಯಶಸ್ಸು ಸಿಗಲಿಲ್ಲ. ಹಣಕಾಸಿನ ಸಮಸ್ಯೆಯಿಂದ ಸಾಲ ಮಾಡಿಕೊಳ್ಳುವಂತಾಯಿತು. ಹೆಣ್ಣುಮಕ್ಕಳಿಗೆ ಆಗುವು ದೈಹಿಕ ಸಮಸ್ಯೆಯಿಂದಲೂ ಸಾಕಷ್ಟು ನೋವು ಅನುಭವಿಸಬೇಕಾಯಿತು. ಈ ಎಲ್ಲ ಕಾರಣದಿಂದ ಡಿಪ್ರೆಷನ್​ ಮೂಡಿತು. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ ನೋಟ್​ನಲ್ಲಿ ಸವಿ ಮಾದಪ್ಪ ಬರೆದಿದ್ದರು. ತಮ್ಮ ಎಲ್ಲ ಸಮಸ್ಯೆಗಳನ್ನು 5 ಪುಟಗಳ ಡೆತ್ ​ನೋಟ್​ನಲ್ಲಿ ಅವರು ವಿವರಿಸಿದ್ದರು.

ಇದನ್ನೂ ಓದಿ:

Savi Madappa: ನಟಿ ಸವಿ ಮಾದಪ್ಪ ಸಾವಿನ ಸತ್ಯ ಬಯಲು; ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ನಟಿ ಸಂಜನಾಗೆ ವಂಚನೆ ಪ್ರಕರಣ; ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್​ಐಆರ್​ ದಾಖಲು

ಈ 3 ರಾಶಿಯ ಜನರು ಪ್ರೇಮ-ಪ್ರಣಯದ ಉತ್ಕರ್ಷದಲ್ಲಿ ಇರುತ್ತಾರೆ! ಯಾವುವು ಆ ಮೂರು ರೋಮ್ಯಾಂಟಿಕ್ ರಾಶಿ ತಿಳಿಯೋಣ ಬನ್ನೀ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್