AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithviraj Sukumaran: ‘ಸಲಾರ್’ ಚಿತ್ರದಲ್ಲಿ ಪೃಥ್ವಿರಾಜ್​ಗೆ ಖಡಕ್ ಪಾತ್ರ; ಹುಟ್ಟುಹಬ್ಬದ ದಿನವೇ ಫಸ್ಟ್ ಲುಕ್ ರಿಲೀಸ್​

Salaar | Hombale Films: ಪೃಥ್ವಿರಾಜ್ ಸುಕುಮಾರನ್​ ಅವರು ‘ಸಲಾರ್​’ ಚಿತ್ರತಂಡಕ್ಕೆ ಎಂಟ್ರಿ ನೀಡಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಜನ್ಮದಿನದ ಪ್ರಯುಕ್ತ ಅವರ ಫಸ್ಟ್​ಲುಕ್​ ಬಿಡುಗಡೆ ಆಗಿದೆ.

Prithviraj Sukumaran: ‘ಸಲಾರ್’ ಚಿತ್ರದಲ್ಲಿ ಪೃಥ್ವಿರಾಜ್​ಗೆ ಖಡಕ್ ಪಾತ್ರ; ಹುಟ್ಟುಹಬ್ಬದ ದಿನವೇ ಫಸ್ಟ್ ಲುಕ್ ರಿಲೀಸ್​
ಪೃಥ್ವಿರಾಜ್ ಸುಕುಮಾರನ್
TV9 Web
| Edited By: |

Updated on: Oct 16, 2022 | 9:44 PM

Share

‘ಹೊಂಬಾಳೆ ಫಿಲ್ಮ್ಸ್​’ (Hombale Films) ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ ಎಲ್ಲ ಸಿನಿಮಾಗಳ ಮೇಲೆ ಜನರಿಗೆ ಸಖತ್​ ನಿರೀಕ್ಷೆ ಇದೆ. ವಿಜಯ್ ಕಿರಗಂದೂರು ಅವರು ಒಂದಕ್ಕಿಂತ ಮತ್ತೊಂದು ಭಿನ್ನ ಸಿನಿಮಾಗಳಿಗೆ ಬಂಡವಾಳ ಹೂಡುತ್ತಿದ್ದಾರೆ. ಅವರ ನಿರ್ಮಾಣದಲ್ಲಿ ಸಿದ್ಧ ಆಗುತ್ತಿರುವ ‘ಸಲಾರ್​’ (Salaar) ಚಿತ್ರದ ಮೇಲೆ ಕೂಡ ಸಾಕಷ್ಟು ಕ್ರೇಜ್​ ಇದೆ. ಈ ಸಿನಿಮಾಗೆ ಪ್ರಭಾಸ್​ ಹೀರೋ. ಜೊತೆಗೆ ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರ ಪಾತ್ರದ ಫಸ್ಟ್​ ಲುಕ್​ ಅನಾವರಣ ಮಾಡಲಾಗಿದೆ.

ಬಹುಭಾಷೆಯಲ್ಲಿ ನಟ/ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಅವರು ಫೇಮಸ್​ ಆಗಿದ್ದಾರೆ. ಅವರು ‘ಸಲಾರ್​’ ತಂಡಕ್ಕೆ ಎಂಟ್ರಿ ನೀಡಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇಂದು (ಅ.16) ಅವರ ಜನ್ಮದಿನ. ಆ ಪ್ರಯುಕ್ತ ಫಸ್ಟ್​ಲುಕ್​ ಅನಾವರಣ ಆಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ‘ಸಲಾರ್​’ ಚಿತ್ರದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್​ ಈ ಪೋಸ್ಟರ್​ ಮೂಲಕ ಕಾಣಿಸಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Dhoomam: ‘ಧೂಮಂ’ ಚಿತ್ರಕ್ಕೆ ಮುಹೂರ್ತ ನೆರವೇರಿಸಿದ ‘ಹೊಂಬಾಳೆ ಫಿಲ್ಮ್​’; ಇಲ್ಲಿದೆ ಫೋಟೋ ಗ್ಯಾಲರಿ
Image
Kichcha Sudeep: ‘ಹೊಂಬಾಳೆ ಫಿಲ್ಮ್ಸ್​’ ಜತೆ ಕಿಚ್ಚ ಸುದೀಪ್​ ಸಿನಿಮಾ? ಅಚ್ಚರಿ ಹುಟ್ಟುಹಾಕಿದೆ ಈ ಫೋಟೋ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

‘ಸಲಾರ್​’ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ನಂತರ ಅವರ ಮೇಲೆ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಾಯಕಿಯಾಗಿ ಶ್ರುತಿ ಹಾಸನ್​ ಅಭಿನಯಿಸುತ್ತಿದ್ದಾರೆ. ಮಧು ಗುರುಸ್ವಾಮಿ, ಜಗಪತಿ ಬಾಬು, ಈಶ್ವರಿ ರಾವ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಪ್ರಶಾಂತ್ ನೀಲ್, ಪ್ರಭಾಸ್ ಮತ್ತು ಪೃಥ್ವಿರಾಜ್ ಕಾಂಬಿನೇಷನ್​ ಎಂದರೆ ಬಾಕ್ಸ್​ ಆಫೀಸ್​ ಲೂಟಿ ಆಗುವುದು ಗ್ಯಾರಂಟಿ ಎನ್ನುವ ನಿರೀಕ್ಷೆ ಅಭಿಮಾನಿಗಳಿಗೆ ಇದೆ. ಪೃಥ್ವಿರಾಜ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿ ಪ್ರಶಾಂತ್ ನೀಲ್ ಮಾತಾಡಿದ್ದಾರೆ. ‘ಪೃಥ್ವಿರಾಜ್ ಪಾತ್ರವು ಸ್ನೇಹಿತ ಮತ್ತು ಶತ್ರುವನ್ನು ಆಳವಾಗಿ ಬಿಂಬಿಸುತ್ತದೆ. ಈ ಪಾತ್ರ ಪ್ರಭಾಸ್ ಪಾತ್ರಕ್ಕೆ ಸಮನಾಗಿದೆ. ನಾವು ಬಯಸಿದ ರೀತಿಯಲ್ಲಿ ಈ ಪಾತ್ರವನ್ನು ಪೃಥ್ವಿರಾಜ್‌ ಮಾತ್ರ ಮಾಡಲು ಸಾಧ್ಯ. ಇದು ಹೊಸ ಅಲೆಯನ್ನು ಸೃಷ್ಟಿಸಲಿದೆ. ಈ ಹೊಸ ಅವತಾರದಲ್ಲಿ ಅಭಿಮಾನಿಗಳಿಗೆ ಅವರು ಇಷ್ಟವಾಗಲಿದ್ದಾರೆ’ ಎಂದು ಪ್ರಶಾಂತ್​ ನೀಲ್​ ಹೇಳಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ರೀತಿಯೇ ‘ಸಲಾರ್​’ ಕೂಡ ಪ್ಯಾನ್​ ಇಂಡಿಯಾ ಸಿನಿಮಾ. 2023ರ ಸೆಪ್ಟೆಂಬರ್ 28ರಂದು ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಈಗಾಗಲೇ ಶೇಕಡ 50 ಭಾಗ ಶೂಟಿಂಗ್​ ಮುಕ್ತಾಯ ಆಗಿದೆ. 10 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದ್ರದ ಮಧ್ಯದಲ್ಲಿ 20 ನಿಮಿಷಗಳ ಚೇಸಿಂಗ್ ಸನ್ನಿವೇಶವನ್ನು ಚಿತ್ರೀಕರಿಸಲಾಗಿದೆ. ಭಾರತದಲ್ಲಿ ಮೊದಲ ಬಾರಿಗೆ, ಡಾರ್ಕ್ ಸೆಂಟ್ರಿಕ್ ಥೀಮ್ (ಡಿಸಿಟಿ) ತಂತ್ರಜ್ಞಾನವನ್ನು ಚಿತ್ರೀಕರಣಕ್ಕೆ ಬಳಸಲಾಗುತ್ತಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಈ ಸಿನಿಮಾದ ಬಜೆಟ್​ 400 ಕೋಟಿ ರೂಪಾಯಿಗೂ ಹೆಚ್ಚಾಗಲಿದೆ. ಫೈಟಿಂಗ್​ ಸನ್ನಿವೇಶಗಳು ಬಹಳ ಅದ್ದೂರಿಯಾಗಿ ಮೂಡಿಬರುತ್ತಿವೆ. ಇಂದು ಬಿಡುಗಡೆ ಆಗಿರುವ ಪೃಥ್ವಿರಾಜ್​ ಸುಕುಮಾರನ್​ ಅವರ ಫಸ್ಟ್​ಲುಕ್​ ಪೋಸ್ಟರ್​ ಸಖತ್​ ವೈರಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ