Kantara: ‘ವರಾಹ ರೂಪಂ..’ ಹಾಡಿನ ವಿವಾದ: ನಟ ಪೃಥ್ವಿರಾಜ್​ ಸುಕುಮಾರನ್​​ ಮೇಲಿನ ಎಫ್​ಐಆರ್​ಗೆ ಕೋರ್ಟ್​ ತಡೆ

Prithviraj Sukumaran | Varaha Roopam Song: ತಮ್ಮ ಮೇಲೆ ಎಫ್​ಐಆರ್​ ಹಾಕಿರುವುದನ್ನು ಪ್ರಶ್ನಿಸಿ ಪೃಥ್ವಿರಾಜ್​ ಸುಕುಮಾರನ್​ ಅವರು ಕೇರಳ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದಿದ್ದು ಗುರುವಾರ (ಫೆ.16) ತೀರ್ಪು ಪ್ರಕಟ ಆಗಿದೆ.

Kantara: ‘ವರಾಹ ರೂಪಂ..’ ಹಾಡಿನ ವಿವಾದ: ನಟ ಪೃಥ್ವಿರಾಜ್​ ಸುಕುಮಾರನ್​​ ಮೇಲಿನ ಎಫ್​ಐಆರ್​ಗೆ ಕೋರ್ಟ್​ ತಡೆ
ರಿಷಬ್ ಶೆಟ್ಟಿ, ಪೃಥ್ವಿರಾಜ್ ಸುಕುಮಾರನ್

Updated on: Feb 16, 2023 | 6:34 PM

ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ (Kantara Movie) ಸಿನಿಮಾಗೆ ಸಿಕ್ಕಂತಹ ಜನಸ್ಪಂದನೆ ತುಂಬ ದೊಡ್ಡದು. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಅನೇಕ ದಾಖಲೆಗಳನ್ನು ಬರೆಯಿತು. ಅದರ ಜೊತೆಗೆ ಒಂದಷ್ಟು ವಿವಾದಗಳು ಕೂಡ ಸುತ್ತಿಕೊಂಡವು. ಅತಿ ದೊಡ್ಡ ವಿವಾದ ಎದುರಾಗಿದ್ದು ‘ವರಾಹ ರೂಪಂ..’ (Varaha Roopam) ಹಾಡಿನ ಕಾರಣದಿಂದ. ಅಜನೀಶ್​ ಲೋಕನಾಥ್​ ಸಂಗೀತ ನೀಡಿದ ಈ ಹಾಡಿನ ಮೇಲೆ ಕೃತಿ ಚೌರ್ಯದ ಆರೋಪ ಎದುರಾಯಿತು. ಅಷ್ಟೇ ಅಲ್ಲದೇ ಆ ಪ್ರಕರಣ ಕೋರ್ಟ್​ ಮೆಟ್ಟಿಲೇರಿತು ಕೂಡ. ಈ ಕೇಸ್​ನಲ್ಲಿ ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran)​ ಕೂಡ ಸಮಸ್ಯೆ ಎದುರಿಸುವಂತಾಗಿದ್ದು ಅಚ್ಚರಿ. ಆದರೆ ಅವರಿಗೆ ಈಗ ರಿಲೀಫ್​ ಸಿಕ್ಕಿದೆ. ಅವರ ಮೇಲಿದ್ದ ಎಫ್​ಐಆರ್​ಗೆ ಕೇರಳ ಹೈಕೋರ್ಟ್​ ತಡೆ ನೀಡಿದೆ.

ಮೊದಲು ಕನ್ನಡದಲ್ಲಿ ರಿಲೀಸ್​ ಆಗಿದ್ದ ‘ಕಾಂತಾರ’ ಚಿತ್ರವನ್ನು ನಂತರ ಬೇರೆ ಬೇರೆ ಭಾಷೆಗಳಿಗೆ ಡಬ್​ ಮಾಡಿ ತೆರೆಕಾಣಿಸಲಾಯಿತು. ಕೇರಳದಲ್ಲಿ ಈ ಚಿತ್ರದ ಮಲಯಾಳಂ ವರ್ಷನ್​ ಬಿಡುಗಡೆ ಮಾಡಿದ್ದು ಖ್ಯಾತ ನಟ ಪೃಥ್ವಿರಾಜ್​ ಸುಕುಮಾರನ್​. ಅವರ ವಿತರಣಾ ಕಂಪನಿ ಮೂಲಕ ‘ಕಾಂತಾರ’ ರಿಲೀಸ್​ ಆಯಿತು. ‘ವರಾಹಂ ರೂಪಂ..’ ಹಾಡನ್ನು ಕಾಪಿ ಮಾಡಲಾಗಿದೆ ಎಂದು ಹಾಕಿದ್ದ ಕೇಸ್​ನಲ್ಲಿ ಪೃಥ್ವಿರಾಜ್​ ಸುಕುಮಾರನ್​​ ಅವರ ಹೆಸರನ್ನೂ ಸೇರಿಸಲಾಯಿತು. ಬಳಿಕ ಎಫ್​ಐಆರ್​ ದಾಖಲಾಯಿತು.

ಇದನ್ನೂ ಓದಿ: Urvashi Rautela: ‘ಕಾಂತಾರ 2’ ಚಿತ್ರದಲ್ಲಿ ಊರ್ವಶಿ ರೌಟೇಲಾ ನಟಿಸೋದು ನಿಜವಲ್ಲ; ಫೋಟೋ ಹಿಂದಿನ ಸತ್ಯ ಇಲ್ಲಿದೆ

ಇದನ್ನೂ ಓದಿ
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ತಮ್ಮ ಮೇಲೆ ಎಫ್​ಐಆರ್​ ಹಾಕಿರುವುದನ್ನು ಪ್ರಶ್ನಿಸಿ ಪೃಥ್ವಿರಾಜ್​ ಸುಕುಮಾರನ್​​ ಅವರು ಕೇರಳ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದಿದ್ದು ಗುರುವಾರ (ಫೆಬ್ರವರಿ 16) ತೀರ್ಪು ಪ್ರಕಟ ಆಗಿದೆ. ‘ಪೃಥ್ವಿರಾಜ್​ ಸುಕುಮಾರನ್​ ಅವರು ಈ ಸಿನಿಮಾವನ್ನು ವಿತರಣೆ ಮಾಡಿದ್ದಾರೆ ಅಷ್ಟೇ. ಅದಕ್ಕಾಗಿ ಕಾಪಿರೈಟ್​ ವಿಷಯದಲ್ಲಿ ಅವರನ್ನು ಅನಗತ್ಯವಾಗಿ ಎಳೆದು ತರಲಾಗಿದೆ’ ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ. ಮುಂದಿನ 7 ದಿನಗಳ ಕಾಲ ಯಾವುದೇ ವಿಚಾರಣೆ ಮಾಡಬಾರದು ಎಂದು ತೀರ್ಪು ನೀಡಲಾಗಿದೆ.

ಇದನ್ನೂ ಓದಿ: Rishab Shetty: ‘ಕಾಂತಾರ’ ಚಿತ್ರದ ನಟ, ನಿರ್ದೇಶಕ ರಿಷಬ್​ ಶೆಟ್ಟಿಗೆ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’

‘ಕಾಂತಾರ 2’ ಮಾಡಲು ರಿಷಬ್​ ಶೆಟ್ಟಿ ಸಿದ್ಧತೆ:

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರಿಗೆ ‘ಕಾಂತಾರ’ ಸಿನಿಮಾದಿಂದ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಯಶಸ್ಸು ಸಿಕ್ಕಿದೆ. ಅವರು ಅವರು ‘ಕಾಂತಾರ 2’ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಜೂನ್​ ತಿಂಗಳಲ್ಲಿ ಇದರ ಶೂಟಿಂಗ್​ ಆರಂಭ ಆಗುವ ಸಾಧ್ಯತೆ ಇದೆ. ಭಾರಿ ನಿರೀಕ್ಷೆ ಮೂಡಿಸಿರುವ ಈ ಚಿತ್ರಕ್ಕೆ ‘ಹೊಂಬಾಳೆ ಫಿಲ್ಮ್ಸ್​’ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಿದೆ. ಪಾತ್ರವರ್ಗಕ್ಕೆ ಹೊಸ ಕಲಾವಿದರು ಕೂಡ ಎಂಟ್ರಿ ಆಗಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:34 pm, Thu, 16 February 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us