AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಬಾಳೆ ನಿರ್ಮಾಣದ ಹೃತಿಕ್ ರೋಷನ್ ಚಿತ್ರಕ್ಕೆ ಡೈರೆಕ್ಷನ್ ಮಾಡಲಿದ್ದಾರೆ ದಕ್ಷಿಣದ ಖ್ಯಾತ ಹೀರೋ

ಕನ್ನಡದ ಹೊಂಬಾಳೆ ಫಿಲ್ಮ್ಸ್ ಇತ್ತೀಚೆಗೆ ಹೃತಿಕ್ ರೋಷನ್ ಜೊತೆ ಸಿನಿಮಾ ಘೋಷಣೆ ಮಾಡಿದೆ. ಈ ವಿಚಾರ ಕನ್ನಡದ ಅನೇಕರಿಗೆ ಖುಷಿ ಕೊಟ್ಟಿದೆ. ಕನ್ನಡದ ಬ್ಯಾನರ್ ಒಂದು ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದ್ದು ಖುಷಿಯ ವಿಚಾರ. ಈಗ ಈ ಚಿತ್ರಕ್ಕೆ ನಿರ್ದೇಶನ ಯಾರು ಮಾಡಲಿದ್ದಾರೆ ಎನ್ನುವ ವಿಚಾರ ರಿವೀಲ್ ಆಗಿದೆ.

ಹೊಂಬಾಳೆ ನಿರ್ಮಾಣದ ಹೃತಿಕ್ ರೋಷನ್ ಚಿತ್ರಕ್ಕೆ ಡೈರೆಕ್ಷನ್ ಮಾಡಲಿದ್ದಾರೆ ದಕ್ಷಿಣದ ಖ್ಯಾತ ಹೀರೋ
ಹೃತಿಕ್ ರೋಷನ್
ರಾಜೇಶ್ ದುಗ್ಗುಮನೆ
|

Updated on: May 30, 2025 | 7:41 AM

Share

ವಿಜಯ್ ಕಿರಗಂದೂರು ನೇತೃತ್ವದ ‘ಹೊಂಬಾಳೆ ಫಿಲ್ಮ್ಸ್’ (Hombale Films) ಕನ್ನಡದಲ್ಲಿ ಯಶಸ್ಸು ಕಂಡ ಬಳಿಕ ತೆಲುಗು, ತಮಿಳು ಮೊದಲಾದ ಭಾಷೆಗಳಿಗೆ ತೆರಳಿ ಸಿನಿಮಾ ನಿರ್ಮಾಣ ಮಾಡುತ್ತಿದೆ. ಬಾಲಿವುಡ್​ನಲ್ಲೂ ಈ ಸಂಸ್ಥೆ ಸಿನಿಮಾ ನಿರ್ಮಿಸುತ್ತಿದ್ದೆ. ಬಾಲಿವುಡ್​ನ ಖ್ಯಾತ ನಟ ಹೃತಿಕ್ ರೋಷನ್ ಜೊತೆ ಹೊಂಬಾಳೆ ಕೈ ಜೋಡಿಸಿದೆ. ಈ ಚಿತ್ರವನ್ನು ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ಕುತೂಹಲ ಮೂಡಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ದಕ್ಷಿಣದ ನಟ ಹಾಗೂ ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಅವರು ಈ ಚಿತ್ರದ ಜವಾಬ್ದಾರಿ ಹೊತ್ತಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಪೃಥ್ವಿರಾಜ್ ಹಾಗೂ ಹೊಂಬಾಳೆ ಫಿಲ್ಮ್ಸ್ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಈ ಮೊದಲು ಹೊಂಬಾಳೆ ನಿರ್ಮಾಣದ ‘ಸಲಾರ್’ ಚಿತ್ರದಲ್ಲಿ ಪೃಥ್ವಿರಾಜ್ ನಟಿಸಿದ್ದರು. ಈಗ ‘ಸಲಾರ್ 2’ ಚಿತ್ರಕ್ಕಾಗಿ ಅವರು ರೆಡಿ ಆಗುತ್ತಿದ್ದಾರೆ. ಈಗ ಅವರು ಈ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಚಾರ ನಿಜವಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ
Image
ಸುಹಾಸಿನಿ ಸರಳತೆ; ಬೀದಿ ಬದಿ ಕಲಾವಿದ ಹಾಡು ಕೇಳಿ ಮೆಚ್ಚುಗೆ
Image
ರಶ್ಮಿಕಾಗೆ ನ್ಯಾಷನಲ್ ಕ್ರಶ್ ಎಂದು ಕರೆದ ಅಭಿಮಾನಿ; ನಟಿಯ ಪ್ರತಿಕ್ರಿಯೆ ಏನು?
Image
ಕಿಚ್ಚ ಸುದೀಪ್-ರಾಜೇಶ್ ಕೃಷ್ಣನ್ ಹಾಡಿನ್ ಜುಗಲ್​ಬಂದಿ; ಅಪರೂಪದ ವಿಡಿಯೋ
Image
ಎ,ಓಂ ಚಿತ್ರವನ್ನು ನಾನು ಮಾಡಿದ್ದರೆ ನಿವೃತ್ತಿ ಪಡೆಯುತ್ತಿದ್ದೆ; ಸುಕುಮಾರ್

ಪೃಥ್ವಿರಾಜ್ ಅವರು ‘ಲುಸಿಫರ್’ ಹಾಗೂ ‘ಎಲ್​ 2: ಎಂಪುರಾನ್’ ಚಿತ್ರಗಳನ್ನು ನಿರ್ದೇಶಿಸಿದ್ದು ಇದಕ್ಕೆ ಮೋಹನ್​ಲಾಲ್ ಅವರು ಹೀರೋ. ಮೋಹನ್​ಲಾಲ್ ಅವರ ಸ್ಟಾರ್​ಗಿರಿಗೆ ತಕ್ಕಂತೆ ಸಿನಿಮಾನ ಕಟ್ಟಿಕೊಟ್ಟಿದ್ದರು. ಅಷ್ಟು ದೊಡ್ಡ ಹೀರೋನ ಉತ್ತಮವಾಗಿ ನಿಭಾಯಿಸಿದ್ದರು ಪೃಥ್ವಿರಾಜ್. ಈಗ ಹೃತಿಕ್ ಸಿನಿಮಾದ ಜವಾಬ್ದಾರಿಯನ್ನು ಹೊಂಬಾಳೆ ಇವರಿಗೆ ವಹಿಸಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಾವು ಸಂಭವಿಸಿದ್ದು ಕಾಂತಾರ ಚಿತ್ರೀಕರಣದ ವೇಳೆ ಅಲ್ಲ: ಹೊಂಬಾಳೆ ಫಿಲ್ಮ್ಸ್​ ಸ್ಪಷ್ಟನೆ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುವ ಸಿನಿಮಾ ಒಂದನ್ನು ಪೃಥ್ವಿರಾಜ್ ಅವರು ನಿರ್ದೇಶನ ಮಾಡಬೇಕಿದೆ. ಈ ಸಂಸ್ಥೆ ಪೃಥ್ವಿರಾಜ್ ಕಾಲ್​ಶೀಟ್ ಪಡೆದು ಸಾಕಷ್ಟು ಸಮಯ ಆಗಿದೆ. ಈಗ ಅದಕ್ಕೆ ಮುಹೂರ್ತ ಕೂಡಿ ಬಂದಿದೆ ಎಂದು ಹೇಳಲಾಗುತ್ತಿದೆ. ಹೃತಿಕ್ ರೋಷನ್ ಅವರಿಗೆ ಬಾಲಿವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಅವರ ಚಿತ್ರವನ್ನು ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ ಎನ್ನುವ ಕಾರಣಕ್ಕೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!