AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಕ್ಕೂ ಸೋನು ಶ್ರೀನಿವಾಸ್ ಗೌಡಗೂ ಇದೆ ಹಳೆಯ ನಂಟು

Sonu Srinivas Gowda: ಸೋನು ಶ್ರೀನಿವಾಸ ಗೌಡ ಟಿಕ್ ಟಾಕ್ ವಿಡಿಯೋ ಮಾಡಿ ಫೇಮಸ್ ಆದವರು. ಟಿಕ್ ಟಾಕ್ ಬ್ಯಾನ್ ಆದ ನಂತರ ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಮಾಡೋಕೆ ಆರಂಭಿಸಿದರು. ಆ ಬಳಿಕ ಅವರ ಖಾಸಗಿ ವಿಡಿಯೋ ವೈರಲ್ ಆಯಿತು. ಈ ವಿಡಿಯೋ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು.

ವಿವಾದಕ್ಕೂ ಸೋನು ಶ್ರೀನಿವಾಸ್ ಗೌಡಗೂ ಇದೆ ಹಳೆಯ ನಂಟು
ಸೋನು ಶ್ರೀನಿವಾಸ ಗೌಡ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 22, 2024 | 11:19 AM

Share

ಟಿಕ್ ಟಾಕ್ ವಿಡಿಯೋ ಹಾಗೂ ರೀಲ್ಸ್ ಮಾಡಿ ಫೇಮಸ್ ಆದ ನಂತರ ‘ಬಿಗ್ ಬಾಸ್ ಕನ್ನಡ ಒಟಿಟಿ’ (Bigg Boss OTT) ಅವಕಾಶ ಪಡೆದುಕೊಂಡವರು ಸೋನು ಶ್ರೀನಿವಾಸ ಗೌಡ. ಈಗ ಅವರು ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಈ ಮಧ್ಯೆ ಅವರು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಅಕ್ರಮವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿ ಅವರು ಅರೆಸ್ಟ್ ಆಗಿದ್ದಾರೆ. ಸೋನು ಶ್ರೀನಿವಾಸ ಗೌಡಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಅವರು ಈ ಮೊದಲು ಹಲವು ವಿವಾದಗಳನ್ನು ಮಾಡಿಕೊಂಡಿದ್ದರು.

ಸೋನು ಶ್ರೀನಿವಾಸ ಗೌಡ ಟಿಕ್ ಟಾಕ್ ವಿಡಿಯೋ ಮಾಡಿ ಫೇಮಸ್ ಆದವರು. ಟಿಕ್ ಟಾಕ್ ಬ್ಯಾನ್ ಆದ ನಂತರ ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಮಾಡೋಕೆ ಆರಂಭಿಸಿದರು. ಆ ಬಳಿಕ ಅವರ ಖಾಸಗಿ ವಿಡಿಯೋ ವೈರಲ್ ಆಯಿತು. ಈ ವಿಡಿಯೋ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಪಡ್ಡೆಗಳ ಮೊಬೈಲ್​ನಲ್ಲಿ ಈ ವಿಡಿಯೋ ಹರಿದಾಡಿತು. ಅವರ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಎಲ್ಲರೂ ನೆಗೆಟಿವ್ ಆಗಿ ಕಮೆಂಟ್ ಹಾಕೋಕೆ ಆರಂಭಿಸಿದರು. ಈ ಕಾರಣಕ್ಕೆ ಅವರು ಕಮೆಂಟ್ ಆಯ್ಕೆಯನ್ನೇ ಕೆಲವು ಸಮಯ ಆಫ್ ಮಾಡಿದರು.

ಆ ಬಳಿಕ ಸೋನುಗೆ ಬಿಗ್ ಬಾಸ್​ಗೆ ಅವಕಾಶ ಬಂತು. ಅವರನ್ನು ಬಿಗ್ ಬಾಸ್​ಗೆ ಕರೆಸಿದ್ದು ಏಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದೂ ಇದೆ. ಬಿಗ್ ಬಾಸ್​ಗೆ ಹೋದ ಬಳಿಕ ಅವರ ಮೇಲೆ ಇದ್ದ ಅಭಿಪ್ರಾಯ ಒಂದಷ್ಟು ಜನರಿಗೆ ಬದಲಾಯಿತು. ಖಾಸಗಿ ವಿಡಿಯೋ ಲೀಕ್ ಆದ ಬಗ್ಗೆ ಅವರು ಓಪನ್ ಆಗಿ ಮಾತನಾಡಿದ್ದರು. ಯಾವುದೋ ಹುಡುಗ ನಂಬಿಸಿ ಮೋಸ್ ಮಾಡಿದ್ದಾಗಿ, ವಿಡಿಯೋ ಲೀಕ್ ಆಗಲು ಅವನೇ ಕಾರಣ ಎಂದು ಸೋನು ಹೇಳಿಕೊಂಡಿದ್ದರು. ಆದರೆ, ಒಂದು ವರ್ಗದ ಜನರು ಅವರನ್ನು ಈಗಲೂ ಟೀಕೆ ಮಾಡುತ್ತಾರೆ. ಮಾಲ್ಡೀವ್ಸ್​ನಲ್ಲಿ ಬಿಕಿನಿ ಹಾಕಿ ಅವರು ಟೀಕೆಗೆ ಒಳಗಾಗಿದ್ದೂ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

ಇತ್ತೀಚೆಗೆ ಸೋನು ಶ್ರೀನಿವಾಸ ಗೌಡ ನೆಗೆಟಿವ್ ಕಮೆಂಟ್​ಗಳಿಗೆ ತಲೆಕೆಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಿಬಿಟ್ಟಿದ್ದಾರೆ. ತಾವಾಯ್ತು ತಮ್ಮ ಕೆಲಸವಾಯ್ತು ಎಂದು ಹಾಯಾಗಿ ಇದ್ದರು. ಆದರೆ, ಈಗ ಅರೆಸ್ಟ್ ಆಗುವ ಮೂಲಕ ಅವರು ಮತ್ತೆ ಸುದ್ದಿ ಆಗಿದ್ದಾರೆ. ಅವರು ದೊಡ್ಡ ವಿವಾದವನ್ನೇ ಮೈಮೇಲೆ ಎಳೆದುಕೊಂಡಿದ್ದಾರೆ.

ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡ ಅರೆಸ್ಟ್: ಎಫ್​ಐಆರ್​ನಲ್ಲಿ​ ಉಲ್ಲೇಖವಾದ ವಿಚಾರಗಳೇನು?

ಸೋನು ಅವರು ಇತ್ತೀಚೆಗೆ ಮಗುವನ್ನು ದತ್ತು ಪಡೆದಿದ್ದಾರೆ. ಆದರೆ, ಇದಕ್ಕೆ ಯಾವುದೇ ಕಾನೂನು ಕ್ರಮವನ್ನು ಪಾಲಿಸಿಲ್ಲ. ಮಗು ಇಷ್ಟವಾಯಿತು ಎಂದು ಅವಳ ಅಮ್ಮನ ಬಳಿ ಮಾತನಾಡಿ ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡಿದ್ದರು. ಹೀಗಾಗಿ, ಅವರ ವಿರುದ್ಧ ದೂರು ದಾಖಲಾಯಿತು. ಪೊಲೀಸರು ಎಫ್​ಐಆರ್ ದಾಖಲು ಮಾಡಿಕೊಂಡು ಅವರು ಬಂಧಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಾಗಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್