AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರೇ ನನ್ನ ಫೇವರಿಟ್’; ತಮಿಳು ಮಾಧ್ಯಮಗಳಲ್ಲಿ ಪುನೀತ್​ನ ಹೊಗಳಿದ ಪ್ರಿಯಾ ಆನಂದ್

ಕರ್ನಾಟಕದಲ್ಲಿ ಸಿನಿಮಾ ರಂಗದವರು, ಸಾಮಾನ್ಯರು ಪುನೀತ್ ಅವರನ್ನು ಹೊಗಳುತ್ತಿದ್ದಾರೆ. ಅದೇ ರೀತಿ ಪರಭಾಷೆಯವರು ಬೇರೆ ರಾಜ್ಯದಲ್ಲಿ ಈ ಹೀರೋನ ಮೆಚ್ಚುತ್ತಿದ್ದಾರೆ. ಪ್ರಿಯಾ ಆನಂದ್ ಅವರಿಗೆ ಪುನೀತ್ ಬಗ್ಗೆ ಇರುವ ಗೌರವ ಎಂಥದ್ದು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ಪುನೀತ್ ಫೇವರಿಟ್ ಎಂದಿದ್ದಾರೆ.

‘ಅವರೇ ನನ್ನ ಫೇವರಿಟ್’; ತಮಿಳು ಮಾಧ್ಯಮಗಳಲ್ಲಿ ಪುನೀತ್​ನ ಹೊಗಳಿದ ಪ್ರಿಯಾ ಆನಂದ್
ಪ್ರಿಯಾ ಆನಂದ್-ಪುನೀತ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Aug 10, 2024 | 7:24 AM

ಪುನೀತ್ ರಾಜ್​ಕುಮಾರ್ ಅವರ ಬಗ್ಗೆ ಎಷ್ಟೇ ಹೇಳಿದರೂ ಸಾಕಾಗುವುದಿಲ್ಲ. ಅವರು ಅನೇಕರಿಗೆ ಮಾದರಿ. ಅವರು ಫೇವರಿಟ್ ನಟ ಮಾತ್ರವಲ್ಲ ಫೇವರಿಟ್ ವ್ಯಕ್ತಿ ಕೂಡ ಹೌದು. ಅವರು ಇಲ್ಲ ಎಂಬುದನ್ನು ಅನೇಕರಿಗೆ ನಂಬೋಕೆ ಈಗಲೂ ಸಾಧ್ಯವಾಗುತ್ತಿಲ್ಲ. ಈಗ ಪ್ರಿಯಾ ಆನಂದ್ ಅವರು ಪುನೀತ್ ರಾಜ್​ಕುಮಾರ್ ಬಗ್ಗೆ ಮಾತನಾಡಿದ್ದಾರೆ. ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

ಪ್ರಿಯಾ ಆನಂದ್ ಅವರು ಪುನೀತ್ ರಾಜ್​ಕುಮಾರ್ ಜೊತೆ ಮೊದಲ ಬಾರಿ ನಟಿಸಿದ್ದು ‘ರಾಜಕುಮಾರ’ ಸಿನಿಮಾದಲ್ಲಿ. ಈ ಸಿನಿಮಾ ಪುನೀತ್ ಅವರು ನಟಿಸಿದ ವಿಶೇಷ ಚಿತ್ರಗಳ ಸಾಲಿನಲ್ಲಿ ನಿಲ್ಲುತ್ತದೆ. ಸಂತೋಷ್ ಆನಂದ್​ರಾಮ್ ನಿರ್ದೇಶನದ ಈ ಸಿನಿಮಾಗೆ ಪ್ರಿಯಾ ಆನಂದ್ ನಾಯಕಿ. ಪ್ರಿಯಾ ಅವರು ಪುನೀತ್​ನ ಸೆಟ್​ನಲ್ಲಿ ಹತ್ತಿರದಿಂದ ಕಂಡವರು. ಆ ಬಳಿಕ ‘ಜೇಮ್ಸ್’ ಸಿನಿಮಾದಲ್ಲಿ ಪ್ರಿಯಾ ಆನಂದ್ ಅವರು ಪುನೀತ್ ಜೊತೆ ನಟಿಸಿದ್ದರು. ಇಬ್ಬರ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆಯಿತು. ‘ಜೇಮ್ಸ್’ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುವ ಮೊದಲೇ ಪುನೀತ್ ನಿಧನ ಹೊಂದಿದ್ದು ಬೇಸರದ ಸಂಗತಿ.

ಸಾಮಾನ್ಯವಾಗಿ ಕರ್ನಾಟಕದಲ್ಲಿ ಪುನೀತ್ ಅವರನ್ನು ಹೊಗಳೋದು ಸಾಮಾನ್ಯ. ಅವರ ಬಗ್ಗೆ ಮಾತನಾಡೋದು ಸಾಮಾನ್ಯ. ಅದೇ ರೀತಿ ಪರಭಾಷೆಯವರು ಬೇರೆ ರಾಜ್ಯದಲ್ಲಿ ಈ ಹೀರೋನ ಮೆಚ್ಚುತ್ತಿದ್ದಾರೆ. ಪ್ರಿಯಾ ಆನಂದ್ ಅವರಿಗೆ ಪುನೀತ್ ಬಗ್ಗೆ ಇರುವ ಗೌರವ ಎಂಥದ್ದು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ.

ಸಿನಿಮಾ ಪ್ರಚಾರಕ್ಕೆ ಕಾಲೇಜ್ ಒಂದಕ್ಕೆ ಪ್ರಿಯಾ ತೆರಳಿದ್ದರು. ಈ ವೇಳೆ ಅವರು ಟ್ರುತ್ ಆ್ಯಂಡ್ ಡೇರ್ ಆಡಿದ್ದಾರೆ. ‘ಟ್ರುತ್’ ಆಯ್ಕೆ ಅವರಿಗೆ ಬಂದಿದೆ. ‘ಇಷ್ಟದ ಕೋ ಸ್ಟಾರ್ ಯಾರು’ ಎಂದು ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರ ನೀಡಿದ್ದಾರೆ.

ಇದನ್ನೂ ಓದಿ:  ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?

‘ನನ್ನ ಫೇವರಿಟ್ ಆ್ಯಕ್ಟರ್ ಎಂದರೆ ಅದು ಪುನೀತ್ ರಾಜ್​ಕುಮಾರ್. ಅವರು ಫೇವರಿಟ್ ವ್ಯಕ್ತಿ ಕೂಡ ಹೌದು. ರಾಜಕುಮಾರ ಸಿನಿಮಾದಲ್ಲಿ ನಾನು ನಟಿಸಿದ್ದೆ. ಅವರ ಜೊತೆ ಕಳೆದು ಹೋದೆ’ ಎಂದಿದ್ದಾರೆ ಅವರು. ಪುನೀತ್ ರಾಜ್​ಕುಮಾರ್ ಅವರು 2021ರ ಅಕ್ಟೋಬರ್​ನಲ್ಲಿ ನಿಧನ ಹೊಂದಿದರು. ಹೃದಯಾಘಾತದಿಂದ ಅವರ ಕೊನೆಯುಸಿರು ಎಳೆದಿದ್ದಾರೆ. ಪ್ರಿಯಾ ಆನಂದ್ ಸಿನಿಮಾ ವಿಚಾರಕ್ಕೆ ಬರೋದಾದರೆ ಅವರು ಇತ್ತೀಚೆಗೆ ಕನ್ನಡದ ‘ಕರಟಕ ಧಮನಕ’ ಸಿನಿಮಾದಲ್ಲಿ ಶಿವಣ್ಣ ಜೊತೆ ತೆರೆ ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:54 am, Sat, 10 August 24

ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ