AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಂಭದ ಹುಡುಗಿ’ ಪ್ರಿಯಾ ಹಾಸನ್​ ಬಿಡುಗಡೆ ಮಾಡಿದ ‘ರಣಹದ್ದು’ ಫಸ್ಟ್ ಲುಕ್ ಪೋಸ್ಟರ್​

ಯಶ್​ ನಟಿಸಿದ ಮೊದಲ ಸಿನಿಮಾ ‘ಜಂಭದ ಹುಡುಗಿ’ 2007ರಲ್ಲಿ ತೆರೆಕಂಡಿತ್ತು. ಆ ಸಿನಿಮಾದ ನಾಯಕಿ ಪ್ರಿಯಾ ಹಾಸನ್​ ಅವರು ಈಗ ಹೊಸಬರ ‘ರಣಹದ್ದು’ ಸಿನಿಮಾ ತಂಡದ ಬೆನ್ನು ತಟ್ಟಿದ್ದಾರೆ. ಫಸ್ಟ್​ ಲುಕ್​ ಪೋಸ್ಟರ್​ ಅನಾವರಣ ಮಾಡಿಕೊಡುವ ಮೂಲಕ ಅವರು ಈ ಟೀಮ್​ಗೆ ಸಾಥ್​ ನೀಡಿದ್ದಾರೆ. ನಿರ್ಮಾಪಕ ಟೇಶಿ ವೆಂಕಟೇಶ್​ ಕೂಡ ಪೋಸ್ಟರ್​ ರಿಲೀಸ್​ ಮಾಡಿದ್ದಾರೆ.

‘ಜಂಭದ ಹುಡುಗಿ’ ಪ್ರಿಯಾ ಹಾಸನ್​ ಬಿಡುಗಡೆ ಮಾಡಿದ ‘ರಣಹದ್ದು’ ಫಸ್ಟ್ ಲುಕ್ ಪೋಸ್ಟರ್​
‘ರಣಹದ್ದು’ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಿದ ಪ್ರಿಯಾ ಹಾಸನ್​
ಮದನ್​ ಕುಮಾರ್​
|

Updated on:Sep 13, 2023 | 1:53 PM

Share

ಪರಭಾಷೆ ಮಂದಿ ಕೂಡ ಸ್ಯಾಂಡಲ್​ವುಡ್​ನಲ್ಲಿ (Sandalwood) ಸಿನಿಮಾ ಮಾಡಲು ಉತ್ಸಾಹ ತೋರಿಸುತ್ತಾರೆ. ಅಂಥ ಸಿನಿಮಾ ತಂಡಗಳಿಗೆ ಇಲ್ಲಿ ಸ್ವಾಗತ ಸಿಗುತ್ತದೆ. ಈಗ ತಮಿಳಿನ ನಿರ್ದೇಶಕ ಮಾಣಿಕ್ಯ ಜೈ ಅವರು ಕನ್ನಡದಲ್ಲಿ ಒಂದು ಸಿನಿಮಾ ಮಾಡಿದ್ದಾರೆ. ಈ ಚಿತ್ರಕ್ಕೆ ‘ರಣಹದ್ದು’ (Rana Haddu) ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಇದು ಸಂಪೂರ್ಣ ಹೊಸಬರೇ ಸೇರಿಕೊಂಡು ಮಾಡಿರುವ ಸಿನಿಮಾ. ‘ರಣಹದ್ದು’ ಚಿತ್ರಕ್ಕೆ ಚಂದನವನದ ಅನುಭವಿಗಳು ಬೆಂಬಲ ನೀಡಿದ್ದಾರೆ. ನಟಿ ಪ್ರಿಯಾ ಹಾಸನ್​ (Priya Hassan) ಮತ್ತು ನಿರ್ಮಾಪಕ ಟೇಶಿ ವೆಂಕಟೇಶ್​ ಅವರು ಪೋಸ್ಟರ್​ ಬಿಡುಗಡೆ ಮಾಡಿದ್ದಾರೆ. ಆ ಮೂಲಕ ಚಿತ್ರತಂಡದ ಬೆನ್ನು ತಟ್ಟಿದ್ದಾರೆ.

ಮಾಣಿಕ್ಯ ಜೈ ಅವರು ‘ರಣಹದ್ದು’ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ನಟನೆ ಕೂಡ ಮಾಡಿದ್ದಾರೆ. ಅವರ ಜೊತೆ ಹೊಸ ಕಲಾವಿದರು ಬಣ್ಣ ಹಚ್ಚಿದ್ದಾರೆ. ಮಾಣಿಕ್ಯ ಜೈ ಅವರು ತಮಿಳಿನಲ್ಲಿ ಈಗಾಗಲೇ ಎರಡು ಚಿತ್ರಗಳಿಗೆ ಆ್ಯಕ್ಷನ್​-ಕಟ್​ ಹೇಳುವ ಮೂಲಕ ಅನುಭವ ಪಡೆದಿದ್ದಾರೆ. ಕನ್ನಡದಲ್ಲಿ ಅವರಿಗೆ ‘ರಣಹದ್ದು’ ಮೊದಲ ಸಿನಿಮಾ. ಫಸ್ಟ್​ ಲುಕ್​ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯ ಹುಳುಕುಗಳ ಬಗ್ಗೆ ಮಾತಾಡೋ ಬನ್-ಟೀ: ಟ್ರೈಲರ್ ಬಿಡುಗಡೆ

‘ರಾಕಿಂಗ್​ ಸ್ಟಾರ್​’ ಯಶ್​ ನಟಿಸಿದ ಮೊದಲ ಸಿನಿಮಾ ‘ಜಂಭದ ಹುಡುಗಿ’ 2007ರಲ್ಲಿ ತೆರೆಕಂಡಿತ್ತು. ಆ ಸಿನಿಮಾದ ನಾಯಕಿ ಪ್ರಿಯಾ ಹಾಸನ್​ ಅವರು ಈಗ ಹೊಸಬರ ‘ರಣಹದ್ದು’ ಸಿನಿಮಾ ತಂಡದ ಬೆನ್ನು ತಟ್ಟಿದ್ದಾರೆ. ಫಸ್ಟ್​ ಲುಕ್​ ಪೋಸ್ಟರ್​ ಅನಾವರಣ ಮಾಡಿಕೊಡುವ ಮೂಲಕ ಅವರು ಈ ಟೀಮ್​ಗೆ ಸಾಥ್​ ನೀಡಿದ್ದಾರೆ. ಅದೇ ರೀತಿ ನಿರ್ಮಾಪಕ ಟೇಶಿ ವೆಂಕಟೇಶ್​ ಕೂಡ ಪೋಸ್ಟರ್​ ರಿಲೀಸ್​ ಮಾಡಿಕೊಟ್ಟಿದ್ದಾರೆ. ಇಬ್ಬರೂ ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಇದನ್ನೂ ಓದಿ: ಹಿಂದಿ ಪ್ರೇಕ್ಷಕರ ಮನಗೆದ್ದ ನಿಖಿಲ್​ ಕುಮಾರ್​; ‘ರೈಡರ್’ ಚಿತ್ರಕ್ಕೆ 100 ಮಿಲಿಯನ್​ ವೀಕ್ಷಣೆ

ಮಾಣಿಕ್ಯ ಜೈ ಅವರ ಜೊತೆಗೆ ‘ರಣಹದ್ದು’ ಚಿತ್ರದ ಮುಖ್ಯ ಪಾತ್ರಗಳಲ್ಲಿ ರಂಜಿತ್, ಯತೀಶ್, ಸೌಮ್ಯ ಅಭಿನಯಿಸಿದ್ದಾರೆ. ಈ ಸಿನಿಮಾದ ಶೂಟಿಂಗ್​ ಕೊನೇ ಹಂತದಲ್ಲಿದೆ. ಶೀಘ್ರದಲ್ಲೇ ಚಿತ್ರೀಕರಣ ಮುಗಿಸಲಾಗುತ್ತದೆ. ನವೆಂಬರ್​ನಲ್ಲಿ ರಿಲೀಸ್​ ಮಾಡಬೇಕು ಎಂದು ಚಿತ್ರತಂಡ ಗುರಿ ಇಟ್ಟುಕೊಂಡಿದೆ. ಸರಸ್ವತಿ ಮತ್ತು ಜೈ ಅವರು ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ತಾಜ್ ಸಂಗೀತ ನಿರ್ದೇಶನ, ಜೀವನ್ ಛಾಯಾಗ್ರಹಣ ಮಾಡಿದ್ದಾರೆ.

‘ರಣಹದ್ದು’ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಿದ ಟೇಶಿ ವೆಂಕಟೇಶ್​

ಈ ಸಿನಿಮಾದ ಕಥೆ ಏನು?

ಕುತೂಹಲ ಮೂಡಿಸುವ ರೀತಿಯಲ್ಲಿ ‘ರಣಹದ್ದು’ ಸಿನಿಮಾದ ಪೋಸ್ಟರ್​ ವಿನ್ಯಾಸ ಮಾಡಲಾಗಿದೆ. ಚಿತ್ರತಂಡ ಹೇಳಿಕೊಂಡಿರುವಂತೆ ಕೆಲವು ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗಿದೆ. ಮೊಬೈಲ್ ಫೋನ್ ಮೂಲಕ ನಡೆಯುವ ಮೋಸ, ವಂಚನೆ ಕುರಿತು ಈ ಸಿನಿಮಾದಲ್ಲಿ ತೋರಿಸಲಾಗುವುದು. ಆ್ಯಕ್ಷನ್​ ಮತ್ತು ಥ್ರಿಲ್ಲರ್​ ಮಾದರಿಯಲ್ಲಿ ಈ ಚಿತ್ರ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:14 pm, Wed, 13 September 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ