AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕೂಲ್​ ಟೀಚರ್​ ಆದ್ರು ಪ್ರಿಯಾಂಕಾ ಉಪೇಂದ್ರ; ‘ಮಿಸ್​ ನಂದಿನಿ’ ಚಿತ್ರದಲ್ಲಿ ಹಿರಿಯ ನಟಿ ಭವ್ಯಾ ಪಾತ್ರ ಏನು?

ಇದೇ ಮೊದಲ ಬಾರಿಗೆ ಶಾಲೆಯ ಶಿಕ್ಷಕಿಯ ಪಾತ್ರದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ..

ಸ್ಕೂಲ್​ ಟೀಚರ್​ ಆದ್ರು ಪ್ರಿಯಾಂಕಾ ಉಪೇಂದ್ರ; ‘ಮಿಸ್​ ನಂದಿನಿ’ ಚಿತ್ರದಲ್ಲಿ ಹಿರಿಯ ನಟಿ ಭವ್ಯಾ ಪಾತ್ರ ಏನು?
ಪ್ರಿಯಾಂಕಾ ಉಪೇಂದ್ರ, ಭವ್ಯಾ
TV9 Web
| Edited By: |

Updated on: Jun 05, 2022 | 7:30 AM

Share

ನಟಿ ಪ್ರಿಯಾಂಕಾ ಉಪೇಂದ್ರ ಅವರು ಒಂದಕ್ಕಿಂತ ಒಂದು ಭಿನ್ನ ಕಥಾಹಂದರದ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ನಟಿಸುತ್ತಿರುವ ‘ಮಿಸ್​ ನಂದಿನಿ’ ಸಿನಿಮಾ (Miss Nandini Movie) ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಭರದಿಂದ ಶೂಟಿಂಗ್​ ಮಾಡಲಾಗುತ್ತಿದೆ. ಜೊತೆಗೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಕೂಡ ಚುರುಕಿನಿಂದ ಸಾಗುತ್ತಿವೆ. ಈ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಸ್ಕೂಲ್​ ಟೀಚರ್​ ಪಾತ್ರ ಮಾಡುತ್ತಿದ್ದಾರೆ. ಸದ್ಯ ಇದರ ಶೂಟಿಂಗ್​ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ತಲುಪಿದೆ. ಗುರುದತ್ತ ಎಸ್.ಆರ್. ಅವರು ‘ಮಿಸ್​ ನಂದಿನಿ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ‘ಕಡೂರು, ಚಿಕ್ಕಮಗಳೂರು, ಬಾಗಲಕೋಟೆ, ಬೆಂಗಳೂರು ಮುಂತಾದ ಕಡೆಗಳಲ್ಲಿ 35 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಸರ್ಕಾರಿ ಕನ್ನಡ ಶಾಲೆ (Government School) ಉಳಿಸಬೇಕು ಎನ್ನುವ ಪರಿಕಲ್ಪನೆಯೊಂದಿಗೆ ಚಿತ್ರದ ಕಥೆ ಸಾಗುತ್ತದೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಮಿಸ್​ ನಂದಿನಿ’ ಸಿನಿಮಾದಲ್ಲಿ ಹಿರಿಯ ನಟಿ ಭವ್ಯಾ ಕೂಡ ಅಭಿನಯಿಸುತ್ತಿದ್ದಾರೆ. ವಿದ್ಯಾರ್ಥಿಯ ತಾಯಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಅವರ ಜೊತೆ ತೆರೆ ಹಂಚಿಕೊಳ್ಳುತ್ತಿರುವುದಕ್ಕೆ ಪ್ರಿಯಾಂಕಾ ಉಪೇಂದ್ರ ಖುಷಿ ಆಗಿದ್ದಾರೆ. ಡ್ಯಾನಿ ಕುಟ್ಟಪ್ಪ, ರತನ್, ಅನ್‌ಮೋಲ್, ಸೃಷ್ಟಿ, ಶ್ರುತಿ, ಅಪ್ಪಣ್ಣ ಮುಂತಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಸಾಯಿ ಸರ್ವೇಶ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಹಾಡುಗಳಿಗೆ ವಿಜಯ್​ ಪ್ರಕಾಶ್, ವಾಸುಕಿ ವೈಭವ್, ಅನುರಾಧಾ ಭಟ್ ಅವರು ಧ್ವನಿಯಾಗಿದ್ದಾರೆ.

ಇದನ್ನೂ ಓದಿ: ‘ನಮ್ಮ ಬಾಡಿ ಬಗ್ಗೆಯೂ ಕಮೆಂಟ್​ ಮಾಡ್ತಾರೆ, ಅದಕ್ಕೆ ತಲೆ ಕೆಡಿಸಿಕೊಳ್ಳಬಾರದು’: ಪ್ರಿಯಾಂಕಾ ಉಪೇಂದ್ರ

ಇದನ್ನೂ ಓದಿ
Image
ಮೇ 23ರಿಂದ ‘ಅರ್ಧಾಂಗಿ’ ಸೀರಿಯಲ್​ ಶುರು; ಹೊಸ ಧಾರಾವಾಹಿಗೆ ‘ಸ್ಟಾರ್​’ ಕಳೆ ತಂದ ಪ್ರಿಯಾಂಕಾ ಉಪೇಂದ್ರ
Image
‘ನಮ್ಮ ಬಾಡಿ ಬಗ್ಗೆಯೂ ಕಮೆಂಟ್​ ಮಾಡ್ತಾರೆ, ಅದಕ್ಕೆ ತಲೆ ಕೆಡಿಸಿಕೊಳ್ಳಬಾರದು’: ಪ್ರಿಯಾಂಕಾ ಉಪೇಂದ್ರ
Image
ಮನೆಯಲ್ಲಿ ಎನರ್ಜಿ ಚೇಂಜ್​ ಆಗ್ಬೇಕು ಅಂದ್ರೆ ಏನು ಮಾಡ್ಬೇಕು?; ಪ್ರಿಯಾಂಕಾ ಉಪೇಂದ್ರ ಕೊಟ್ರು ಟಿಪ್ಸ್​
Image
‘ಉಗ್ರಾವತಾರ’ದಲ್ಲಿ ಸಿದ್ದಿ ಹಾಡುಗಾರರಿಂದ ವಿಶೇಷ ಹಾಡು; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?

‘ಶ್ರೀ ವಿಜಯ್ ಫಿಲ್ಮ್ಸ್​’ ಬ್ಯಾನರ್​ ಮೂಲಕ ನೀಲಕಂಠ ಸ್ವಾಮಿ ಅವರು ‘ಮಿಸ್​ ನಂದಿನಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆಶಾ ಸಹ ನಿರ್ಮಾಪಕರು. ಈ ಸಿನಿಮಾದ ಕಥೆ ಎಲ್ಲ ರಾಜ್ಯಗಳಿಗೂ ಅನ್ವಯ ಆಗುವ ರೀತಿ ಇರುವುದರಿಂದ ಕನ್ನಡ ಮಾತ್ರವಲ್ಲದೇ ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಭಾಷೆಯಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ಒಟಿಟಿದಿಂದ ಬೇಡಿಕೆ ಬಂದಿದ್ದು, ಆ ಬಗ್ಗೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: ಉಪ್ಪಿ ಡೈರೆಕ್ಷನ್​ ಸಿನಿಮಾ ಟೈಟಲ್​ ಅರ್ಥವೇನು?; ಎಲ್ಲವನ್ನೂ ವಿವರಿಸಿದ ಪ್ರಿಯಾಂಕಾ ಉಪೇಂದ್ರ

‘ಬೆಂಗಳೂರಿನಿಂದ ಆಧುನಿಕ ಶಿಕ್ಷಕಿಯಾಗಿ ಸರ್ಕಾರಿ ಶಾಲೆಗೆ ಬಂದು ಪರಿವರ್ತನೆ ಮಾಡುವ ಪಾತ್ರದಲ್ಲಿ ನಟಿಸುತ್ತಿದ್ದೇನೆ. ನಾನು ಅಮೆರಿಕದ ಸರ್ಕಾರಿ ಶಾಲೆಯಲ್ಲಿ ಓದಿದವಳು. ಅಲ್ಲಿನ ಗುಣಮಟ್ಟ ಚೆನ್ನಾಗಿದೆ. ನಮ್ಮ ದೇಶದ ಸರ್ಕಾರಿ ಶಾಲೆಯಲ್ಲೂ ಅದು ಸಾಧ್ಯವಾಗಬೇಕು. ಈ ಸಿನಿಮಾದಲ್ಲಿ ಅರ್ಥಪೂರ್ಣ ಸಂದೇಶವನ್ನು ಹಾಸ್ಯದ ಅಂಶಗಳೊಂದಿಗೆ ಹೇಳಲಾಗುತ್ತಿದೆ’ ಎಂದಿದ್ದಾರೆ ಪ್ರಿಯಾಂಕಾ ಉಪೇಂದ್ರ. ನಾಗರಾಜ ವೀನಸ್ ಅವರು ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​