AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 60 ಅಡಿ ಎತ್ತರದ ಪೋಸ್ಟರ್​ ಮೂಲಕ ಅನಾವರಣ ಆಯ್ತು ‘ಕ್ಯಾಪ್ಚರ್​’ ಶೀರ್ಷಿಕೆ

ನಟಿ ಪ್ರಿಯಾಂಕಾ ಉಪೇಂದ್ರ ಮತ್ತು ನಿರ್ದೇಶಕ ಲೋಹಿತ್​ ಅವರ ಕಾಂಬಿನೇಷನ್​ನಲ್ಲಿ ‘ಕ್ಯಾಪ್ಚರ್’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರಕ್ಕೆ ಸದ್ದಿಲ್ಲದೇ ಶೂಟಿಂಗ್​ ಮುಗಿಸಲಾಗಿದೆ. ಟೈಟಲ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರವಿರಾಜ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಬರೋಬ್ಬರಿ 60 ಅಡಿ ಎತ್ತರದ ಪೋಸ್ಟರ್​ ಮೂಲಕ ಅನಾವರಣ ಆಯ್ತು ‘ಕ್ಯಾಪ್ಚರ್​’ ಶೀರ್ಷಿಕೆ
ಕ್ಯಾಪ್ಚರ್​ ಸಿನಿಮಾ ಟೈಟಲ್​ ಪೋಸ್ಟರ್​ ಅನಾವರಣ ಕಾರ್ಯಕ್ರಮ
Follow us
ಮದನ್​ ಕುಮಾರ್​
|

Updated on: Oct 18, 2023 | 2:34 PM

ಕನ್ನಡ ಚಿತ್ರರಂಗದ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಈಗಾಗಲೇ ಹಾರರ್​ ಸಿನಿಮಾಗಳನ್ನು ಮಾಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈಗ ಮತ್ತೊಂದು ಹಾರರ್ ಚಿತ್ರದ (Horror Movie) ಮೂಲಕ ಪ್ರೇಕ್ಷಕರ ಮುಂದೆ ಬರಲು ರೆಡಿ ಆಗಿದ್ದಾರೆ. ಪ್ರಿಯಾಂಕಾ ಉಪೇಂದ್ರ ಅವರು ನಟಿಸಿರುವ ಹೊಸ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ‘ಕ್ಯಾಪ್ಚರ್’ (Capture) ಎಂಬುದು ಈ ಸಿನಿಮಾದ ಶೀರ್ಷಿಕೆ. ವಿಶೇಷ ಏನೆಂದರೆ, ಅಪಾರ ಸಂಖ್ಯೆಯ ಅಭಿಮಾನಿಗಳ ಎದುರಲ್ಲಿ ‘ಕ್ಯಾಪ್ಚರ್’ ಸಿನಿಮಾದ ಪೋಸ್ಟರ್ ಅನಾವರಣ ಮಾಡಲಾಗಿದೆ. ಈ ಪೋಸ್ಟರ್​ ಬರೋಬ್ಬರಿ 60 ಅಡಿ ಎತ್ತರ ಇದೆ. ಚಂದನವನದಲ್ಲಿ ಇದೇ ಮೊದಲ ಬಾರಿಗೆ ನಟಿಯ ಪೋಸ್ಟರ್​ ಅನ್ನು ಇಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಿರುವುದು ಪ್ರಿಯಾಂಕಾ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಕ್ಯಾಪ್ಚರ್’ ಸಿನಿಮಾಗೆ ಲೋಹಿತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಲೋಹಿತ್​ ಮತ್ತು ಪ್ರಿಯಾಂಕಾ ಅವರು ‘ಮಮ್ಮಿ’ ಹಾಗೂ ‘ದೇವಕಿ’ ಚಿತ್ರದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು. ಈಗ ಅವರ ಕಾಂಬಿನೇಷನ್​ನ 3ನೇ ಚಿತ್ರವಾಗಿ ‘ಕ್ಯಾಪ್ಚರ್​’ ಮೂಡಿಬರುತ್ತಿದೆ. ಪ್ರಸಿದ್ಧ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ ರವಿರಾಜ್ ಅವರು ಈ ಚಿತ್ರಕ್ಕೆ ‘ಶ್ರೀದುರ್ಗಪರಮೇಶ್ವರಿ ಪ್ರೊಡಕ್ಷನ್ಸ್​’ ಮೂಲಕ ಬಂಡವಾಳ ಹೂಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಇದು.

Priyanka Upendra starrer Capture movie 60 feet tall Title Poster unveiled by Upendra

ಕ್ಯಾಪ್ಚರ್​ ಸಿನಿಮಾ ಟೈಟಲ್​ ಪೋಸ್ಟರ್​

ಬೆಂಗಳೂರಿನ ವೀರೇಶ್ ಚಿತ್ರಮಂದಿರದ ಎದುರುಗಡೆ ವಿಭಿನ್ನವಾಗಿ ‘ಕ್ಯಾಪ್ಚರ್’ ಚಿತ್ರದ ಟೈಟಲ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಪ್ರಿಯಾಂಕಾ ಉಪೇಂದ್ರ ಅವರ ಬರೋಬ್ಬರಿ 60 ಅಡಿ ಎತ್ತರದ ಕಟೌಟ್ ನಿಲ್ಲಿಸಲಾಗಿದೆ. ಇದನ್ನು ‘ರಿಯಲ್ ಸ್ಟಾರ್’ ಉಪೇಂದ್ರ ಹಾಗೂ ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ ಅವರು ಅನಾವರಣ ಮಾಡಿದರು. ಇದು ಹಾರರ್​ ಸಿನಿಮಾ ಆದ್ದರಿಂದ ಅದಕ್ಕೆ ತಕ್ಕಂತೆಯೇ ಪೋಸ್ಟರ್​ ವಿನ್ಯಾಸ ಮಾಡಲಾಗಿದೆ. ಇದು ಸಿನಿಪ್ರಿಯರ ಗಮನ ಸೆಳೆದಿದೆ. ಈ ಸಿನಿಮಾದ ಪ್ರಮುಖ ಆಕರ್ಷಣೆ ಏನೆಂದರೆ, ಇದು ಸಂಪೂರ್ಣವಾಗಿ ಸಿಸಿ ಟಿವಿ ಕಾನ್ಸೆಪ್ಟ್‌ನಲ್ಲಿ ಚಿತ್ರೀಕರಣ ಆಗಿರುವ ಸಿನಿಮಾ. ಪ್ರಪಂಚದಲ್ಲೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡಲಾಗಿದೆ ಎಂದು ‘ಕ್ಯಾಪ್ಚರ್​’ ತಂಡ ಹೇಳಿಕೊಂಡಿದೆ.

ಇದನ್ನೂ ಓದಿ: ನಿಮಗೆ ಭೂತ ಕಂಡಿತ್ತಾ? ಈ ಸೆಲೆಬ್ರಿಟಿಗಳಿಗೆ ಆಗಿತ್ತು ಹಾರರ್​ ಅನುಭವ

ಅಂದಹಾಗೆ, ಈ ಸಿನಿಮಾಗೆ ಸದ್ದಿಲ್ಲದೇ ಶೂಟಿಂಗ್​ ಮುಗಿಸಲಾಗಿದೆ. ಟೈಟಲ್ ಪೋಸ್ಟರ್ ಬಿಡುಗಡೆ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಎಸ್. ಪಾಂಡಿಕುಮಾರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ರವಿಚಂದ್ರನ್ ಸಂಕಲನ ಮಾಡುತ್ತಿದ್ದಾರೆ. ಪ್ರಿಯಾಂಕಾ ಉಪೇಂದ್ರ ಅವರ ಜೊತೆ ಇನ್ನೂ ಅನೇಕ ಕಲಾವಿದರು ನಟಿಸಿದ್ದು, ಆ ಬಗ್ಗೆ ಮುಂದಿನ ದಿನಗಳಲ್ಲಿ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ. ನವೆಂಬರ್‌ನಲ್ಲಿ ಈ ಚಿತ್ರ ಬಿಡುಗಡೆ ಆಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ