AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್​ ಒಡೆತನದ ಪಿಆರ್​ಕೆ ಪ್ರೊಡಕ್ಷನ್​ ಏನಾಗಲಿದೆ?

2017ರ ಜುಲೈ 20ರಂದು ಪಿಆರ್​ಕೆ ಪ್ರೊಡಕ್ಷನ್​ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ.

ಪುನೀತ್ ರಾಜ್​ಕುಮಾರ್​ ಒಡೆತನದ ಪಿಆರ್​ಕೆ ಪ್ರೊಡಕ್ಷನ್​ ಏನಾಗಲಿದೆ?
ಪುನೀತ್ ರಾಜ್​ಕುಮಾರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 31, 2021 | 1:49 PM

Share

ಪುನೀತ್​ ರಾಜ್​ಕುಮಾರ್​ ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಭೇಷ್​ ಎನಿಸಿಕೊಂಡಿದ್ದಾರೆ. ಅವರು ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್​ವುಡ್​​ನಲ್ಲಿ ಅವರು ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದರು. ಆದರೆ, ಅವರಿಲ್ಲದೆ ಪಿಆರ್​ಕೆ ಪ್ರೊಡಕ್ಷನ್​ ಬಡವಾಗಿದೆ. ಹಾಗಾದರೆ, ಇದನ್ನು ಈಗ ಮುನ್ನಡೆಸಿಕೊಂಡು ಹೋಗುವವರು ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

2017ರ ಜುಲೈ 20ರಂದು ಪಿಆರ್​ಕೆ ಪ್ರೊಡಕ್ಷನ್​ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್​ ಹೌಸ್​ನಿಂದ ಹೊರ ಬಂದ ಮೊದಲ ಸಿನಿಮಾ. 2019ರಲ್ಲಿ ಈ ಸಿನಿಮಾ ತೆರೆಗೆ ಬಂದಿತ್ತು. ನಂತರ ‘ಮಾಯಾಭಜಾರ್​ 2016’, ಲಾ, ಫ್ರೆಂಚ್​ ಬಿರಿಯಾನಿ ಸಿನಿಮಾಗಳು ಈ ಪ್ರೊಡಕ್ಷನ್​ ಹೌಸ್​ನಿಂದ ಮೂಡಿ ಬಂದಿವೆ. ಇದಲ್ಲದೆ, ಫ್ಯಾಮಿಲಿ ಪ್ಯಾಕ್​, ಮ್ಯಾನ್​ ಆಫ್​ ದಿ ಮ್ಯಾಚ್​, ಓ2 ಸಿನಿಮಾಗಳನ್ನು ಈ ಪ್ರೊಡಕ್ಷನ್​ ಹೌಸ್​ ನಿರ್ಮಾಣ ಮಾಡುತ್ತಿದೆ.

ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸಿದ್ದು ಪುನೀತ್​ ರಾಜ್​ಕುಮಾರ್​ ಅವರೇ ಆದರೂ ಇದನ್ನು ನೋಡಿಕೊಳ್ಳುವ ಜವಾಬ್ದಾರಿ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ವಹಿಸಿಕೊಂಡಿದ್ದರು. ಹೀಗಾಗಿ, ಅಶ್ವನಿ ಅವರೇ ಪಿಆರ್​ಕೆ ಪ್ರೊಡಕ್ಷನ್​ ಹೌಸ್​ಅನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ. ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಜತೆ ಪಿಆರ್​ಕೆ ಆಡಿಯೋ ಕೂಡ ಇದೆ. ಇವೆರಡ ಸಂಪೂರ್ಣ ಜವಾಬ್ದಾರಿ ಅಶ್ವಿನಿ ಅವರ ಹೆಗಲು ಏರಿದೆ.

ಪುನೀತ್​ ಮೃತಪಟ್ಟು ಮೂರು ದಿನ ಕಳೆದಿದೆ. ಅವರನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿ ಮಣ್ಣು ಮಾಡಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆದಿದೆ. ಅವರು ಇಲ್ಲ ಎನ್ನುವ ವಿಚಾರವನ್ನು ಇನ್ನೂ ಅನೇಕರ ಕೈಯಲ್ಲಿ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಸಾಕಷ್ಟು ಜನರು ಪುನೀತ್​ ನಿಧನ ವಾರ್ತೆ ಕೇಳಿ ಮೃತಪಟ್ಟಿದ್ದಾರೆ. ಅಭಿಮಾನಿಗಳ ಪಾಲಿನ ಪವರ್​ ಸ್ಟಾರ್​ ಆಗಿದ್ದ ಪುನೀತ್​ ಕನ್ನಡ ನಾಡಲ್ಲೇ ಮತ್ತೆ ಹುಟ್ಟಿ ಬರಲಿ ಎಂಬುದು ಅನೇಕರ ಆಶಯ.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ 

Puneeth Rajkumar: ಪುನೀತ್​ ಬಗ್ಗೆ ಅಲ್ಲು ಅರ್ಜುನ್​ ಭಾವುಕ ಮಾತು; ತೆಲುಗು ಸಿನಿಮಾ ವೇದಿಕೆಯಲ್ಲಿ ಮೌನಾಚರಣೆ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ