AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್​ ಒಡೆತನದ ಪಿಆರ್​ಕೆ ಪ್ರೊಡಕ್ಷನ್​ ಏನಾಗಲಿದೆ?

2017ರ ಜುಲೈ 20ರಂದು ಪಿಆರ್​ಕೆ ಪ್ರೊಡಕ್ಷನ್​ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ.

ಪುನೀತ್ ರಾಜ್​ಕುಮಾರ್​ ಒಡೆತನದ ಪಿಆರ್​ಕೆ ಪ್ರೊಡಕ್ಷನ್​ ಏನಾಗಲಿದೆ?
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Oct 31, 2021 | 1:49 PM

Share

ಪುನೀತ್​ ರಾಜ್​ಕುಮಾರ್​ ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಭೇಷ್​ ಎನಿಸಿಕೊಂಡಿದ್ದಾರೆ. ಅವರು ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್​ವುಡ್​​ನಲ್ಲಿ ಅವರು ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದರು. ಆದರೆ, ಅವರಿಲ್ಲದೆ ಪಿಆರ್​ಕೆ ಪ್ರೊಡಕ್ಷನ್​ ಬಡವಾಗಿದೆ. ಹಾಗಾದರೆ, ಇದನ್ನು ಈಗ ಮುನ್ನಡೆಸಿಕೊಂಡು ಹೋಗುವವರು ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

2017ರ ಜುಲೈ 20ರಂದು ಪಿಆರ್​ಕೆ ಪ್ರೊಡಕ್ಷನ್​ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್​ ಹೌಸ್​ನಿಂದ ಹೊರ ಬಂದ ಮೊದಲ ಸಿನಿಮಾ. 2019ರಲ್ಲಿ ಈ ಸಿನಿಮಾ ತೆರೆಗೆ ಬಂದಿತ್ತು. ನಂತರ ‘ಮಾಯಾಭಜಾರ್​ 2016’, ಲಾ, ಫ್ರೆಂಚ್​ ಬಿರಿಯಾನಿ ಸಿನಿಮಾಗಳು ಈ ಪ್ರೊಡಕ್ಷನ್​ ಹೌಸ್​ನಿಂದ ಮೂಡಿ ಬಂದಿವೆ. ಇದಲ್ಲದೆ, ಫ್ಯಾಮಿಲಿ ಪ್ಯಾಕ್​, ಮ್ಯಾನ್​ ಆಫ್​ ದಿ ಮ್ಯಾಚ್​, ಓ2 ಸಿನಿಮಾಗಳನ್ನು ಈ ಪ್ರೊಡಕ್ಷನ್​ ಹೌಸ್​ ನಿರ್ಮಾಣ ಮಾಡುತ್ತಿದೆ.

ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸಿದ್ದು ಪುನೀತ್​ ರಾಜ್​ಕುಮಾರ್​ ಅವರೇ ಆದರೂ ಇದನ್ನು ನೋಡಿಕೊಳ್ಳುವ ಜವಾಬ್ದಾರಿ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ವಹಿಸಿಕೊಂಡಿದ್ದರು. ಹೀಗಾಗಿ, ಅಶ್ವನಿ ಅವರೇ ಪಿಆರ್​ಕೆ ಪ್ರೊಡಕ್ಷನ್​ ಹೌಸ್​ಅನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ. ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಜತೆ ಪಿಆರ್​ಕೆ ಆಡಿಯೋ ಕೂಡ ಇದೆ. ಇವೆರಡ ಸಂಪೂರ್ಣ ಜವಾಬ್ದಾರಿ ಅಶ್ವಿನಿ ಅವರ ಹೆಗಲು ಏರಿದೆ.

ಪುನೀತ್​ ಮೃತಪಟ್ಟು ಮೂರು ದಿನ ಕಳೆದಿದೆ. ಅವರನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿ ಮಣ್ಣು ಮಾಡಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆದಿದೆ. ಅವರು ಇಲ್ಲ ಎನ್ನುವ ವಿಚಾರವನ್ನು ಇನ್ನೂ ಅನೇಕರ ಕೈಯಲ್ಲಿ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಸಾಕಷ್ಟು ಜನರು ಪುನೀತ್​ ನಿಧನ ವಾರ್ತೆ ಕೇಳಿ ಮೃತಪಟ್ಟಿದ್ದಾರೆ. ಅಭಿಮಾನಿಗಳ ಪಾಲಿನ ಪವರ್​ ಸ್ಟಾರ್​ ಆಗಿದ್ದ ಪುನೀತ್​ ಕನ್ನಡ ನಾಡಲ್ಲೇ ಮತ್ತೆ ಹುಟ್ಟಿ ಬರಲಿ ಎಂಬುದು ಅನೇಕರ ಆಶಯ.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ 

Puneeth Rajkumar: ಪುನೀತ್​ ಬಗ್ಗೆ ಅಲ್ಲು ಅರ್ಜುನ್​ ಭಾವುಕ ಮಾತು; ತೆಲುಗು ಸಿನಿಮಾ ವೇದಿಕೆಯಲ್ಲಿ ಮೌನಾಚರಣೆ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು