AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Achar & Co: ಪುನೀತ್ ಕನಸಿನ ಕೂಸು ‘ಪಿಆರ್​ಕೆ’ ಬ್ಯಾನರ್​ನಲ್ಲಿ ಹೊಸ ಚಿತ್ರ ಅನೌನ್ಸ್; ‘ಆಚಾರ್ & ಕೋ.’ ವಿಶೇಷತೆಗಳೇನು?

PRK Productions | Ashwini Puneeth Rajkumar: ಹೊಸಬರ ಪ್ರಯತ್ನಗಳಿಗೆ ಬೆನ್ನೆಲುಬಾಗಿ ನಿಲ್ಲುವ ‘ಪಿಆರ್​ಕೆ ಪ್ರೊಡಕ್ಷನ್ಸ್’ ಇದೀಗ ಹೊಸ ಚಿತ್ರವನ್ನು ಅನೌನ್ಸ್ ಮಾಡಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಆಚಾರ್ & ಕೋ.’ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

Achar & Co: ಪುನೀತ್ ಕನಸಿನ ಕೂಸು ‘ಪಿಆರ್​ಕೆ’ ಬ್ಯಾನರ್​ನಲ್ಲಿ ಹೊಸ ಚಿತ್ರ ಅನೌನ್ಸ್; ‘ಆಚಾರ್ & ಕೋ.’ ವಿಶೇಷತೆಗಳೇನು?
TV9 Web
| Updated By: shivaprasad.hs|

Updated on:Apr 06, 2022 | 2:00 PM

Share

ಪುನೀತ್ ರಾಜ್​ಕುಮಾರ್ ಕನಸಿನ ಕೂಸು ಪಿಆರ್​ಕೆ ಪ್ರೊಡಕ್ಷನ್ಸ್ (PRK Productions). ಈ ಬ್ಯಾನರ್​ನಲ್ಲಿ ಈಗಾಗಲೇ ಹಲವು ಚಿತ್ರಗಳು ತೆರೆಕಂಡಿದ್ದು ಸೂಪರ್ ಹಿಟ್ ಆಗಿವೆ. ಹೊಸಬರ ಪ್ರಯತ್ನಗಳಿಗೆ ಬೆನ್ನೆಲುಬಾಗಿ ನಿಲ್ಲುವ ‘ಪಿಆರ್​ಕೆ ಪ್ರೊಡಕ್ಷನ್ಸ್’ ಇದೀಗ ಹೊಸ ಚಿತ್ರವನ್ನು ಅನೌನ್ಸ್ ಮಾಡಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಹೊಸ ಚಿತ್ರದ ಮೂಲಕ ಹಲವು ಹೊಸ ಪ್ರಯತ್ನಕ್ಕೆ ನಿರ್ಮಾಣ ಸಂಸ್ಥೆ ಮುಂದಾಗಿದೆ. ಚಿತ್ರಕ್ಕೆ ‘ಆಚಾರ್ & ಕೋ.’ (Achar & Co.) ಎಂದು ಶೀರ್ಷಿಕೆ ಇಡಲಾಗಿದ್ದು, ಇದು ಯಾವುದರ ಕತೆಯನ್ನು ಒಳಗೊಂಡಿದೆ ಎನ್ನುವುದನ್ನು ಚಿತ್ರತಂಡ ಬಹಿರಂಗಪಡಿಸಿದೆ. 60ರ ದಶಕದ ಬೆಂಗಳೂರಿನಲ್ಲಿ ನಡೆಯುವ ಕತೆ ಇದಾಗಿರಲಿದೆ. ಇದು ಪಿಆರ್​ಕೆ ಪ್ರೊಡಕ್ಷನ್ಸ್​ನಲ್ಲಿ ತಯಾರಾಗುತ್ತಿರುವ ಮೊದಲ ಮಹಿಳಾ ನಿರ್ದೇಶನದ ಚಿತ್ರವಾಗಿದೆ.

ನಿರ್ದೇಶಕಿ ಯಾರು? ಚಿತ್ರತಂಡದಲ್ಲಿ ಯಾರೆಲ್ಲಾ?

ಪಿ.ಆರ್.ಕೆ. ಪ್ರೊಡಕ್ಷನ್ಸ್​ನ 10 ನೇ ಚಿತ್ರವಾಗಿರುವ ‘ಆಚಾರ್ & ಕೋ.’, 60ನೇ ದಶಕದ ಬೆಂಗಳೂರನ್ನು ಪ್ರೇಕ್ಷಕರ ಮುಂದೆ ಕಟ್ಟಿಕೊಡಲಿದೆ. ಪಿಆರ್​ಕೆ ನಿರ್ಮಾಣ ಸಂಸ್ಥೆಯಲ್ಲಿ ಮಹಿಳಾ ನಿರ್ದೇಶಕಿಯೋರ್ವರು ಆಕ್ಷನ್ ಕಟ್ ಹೇಳುತ್ತಿರುವ ಮೊದಲ ಚಿತ್ರ ಇದಾಗಿದೆ. ತಾಂತ್ರಿಕ ವರ್ಗದಲ್ಲೂ ಹಲವು ಮಹಿಳೆಯರಿರುವುದು ವಿಶೇಷ.

‘ಆಚಾರ್ & ಕೋ.’ ಚಿತ್ರಕ್ಕೆ ಸಿಂಧು ಶ್ರೀನಿವಾಸ ಮೂರ್ತಿ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ನಿರ್ದೇಶನದ ಮೊದಲ ಚಿತ್ರ. ಈಗಾಗಲೇ ತಮ್ಮ ಸಂಗೀತ ನಿರ್ದೇಶನದ ಮೂಲಕ ಎಲ್ಲೆಡೆ ಗುರುತಿಸಿಕೊಂಡಿರುವ, ರಾಷ್ಟ್ರ ಪ್ರಶಸ್ತಿಯನ್ನೂ ಪಡೆದಿರುವ ಬಿಂದುಮಾಲಿನಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಡಾನ್ನಿಲಾ ಕೊರ್ರೆಯಾ ಕಾರ್ಯನಿರ್ವಹಿಸಲಿದ್ದು, ಸ್ಟೈಲಿಸ್ಟ್ ಆಗಿ ಇಂಚರ ಸುರೇಶ್ ಚಿತ್ರತಂಡದಲ್ಲಿದ್ದಾರೆ.

ಪಿಆರ್​ಕೆ ಪ್ರೊಡಕ್ಷನ್ಸ್​ ಟ್ವೀಟ್ ಮೂಲಕ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಮಾಡಿದೆ. ಶೀರ್ಷಿಕೆಯಲ್ಲಿ ‘ಆಚಾರ್ & ಕೋ.’ ಎಂದು ಬರೆಯಲಾಗಿದ್ದು, ಅದಕ್ಕೆ ‘Since 1971’ ಎಂಬ ಟ್ಯಾಗ್​ಲೈನ್ ಇದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಜತೆಗೆ ಗುರುದತ್ ಎ ತಲ್ವಾರ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಚಿತ್ರದ ಬಗ್ಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಟ್ವೀಟ್:

ಗಮನ ಸೆಳೆಯುವ ಚಿತ್ರಗಳನ್ನು ನೀಡಿರುವ ‘ಪಿಆರ್​ಕೆ ಪ್ರೊಡಕ್ಷನ್ಸ್’:

2017ರಲ್ಲಿ ಸ್ಥಾಪನೆಯಾದ ‘ಪಿಆರ್​ಕೆ ಪ್ರೊಡಕ್ಷನ್ಸ್’ ಬ್ಯಾನರ್​ನಲ್ಲಿ ತಯಾರಾದ ಮೊದಲ ಚಿತ್ರ ‘ಕವಲುದಾರಿ’. 2019ರಲ್ಲಿ ತೆರೆಕಂಡ ಈ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. 2020ರಲ್ಲಿ ಮೂರು ಚಿತ್ರಗಳು ಪಿಆರ್​ಕೆ ವತಿಯಿಂದ ನಿರ್ಮಾಣವಾಗಿ ರಿಲೀಸ್ ಆಗಿದ್ದವು. ‘ಮಾಯಾಬಜಾರ್ 2016’, ‘ಲಾ’ ಹಾಗೂ ‘ಫ್ರೆಂಚ್ ಬಿರಿಯಾನಿ’ ಚಿತ್ರಗಳು ಜನರ ಗಮನಸೆಳೆದಿದ್ದವು.

2022ರಲ್ಲಿ ಈ ನಿರ್ಮಾಣ ಸಂಸ್ಥೆಯ ಎರಡು ಚಿತ್ರಗಳು ನೇರವಾಗಿ ಅಮೆಜಾನ್ ಪ್ರೈಮ್​ನಲ್ಲಿ ರಿಲೀಸ್ ಆಗಿವೆ. ಸತ್ಯ ಪ್ರಕಾಶ್ ನಿರ್ದೇಶನದ ‘ಮ್ಯಾನ್ ಆಫ್ ದಿ ಮ್ಯಾಚ್’ ಇನ್ನಷ್ಟೇ ರಿಲೀಸ್ ಆಗಬೇಕಿದೆ. ಇದಲ್ಲದೆ ‘ಒ2’ ಹಾಗೂ ಪುನೀತ್ ಕಾಣಿಸಿಕೊಂಡಿರುವ ‘ಗಂಧದಗುಡಿ’ಯ ಕೆಲಸಗಳು ಕೂಡ ಭರದಿಂದ ಸಾಗುತ್ತಿವೆ.

ಇದನ್ನೂ ಓದಿ: Gagana Nee: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹೊಸ ಹಾಡು ‘ಗಗನ ನೀ..’ ರಿಲೀಸ್​

ಪುನೀತ್​ ಮಾಡಬೇಕಿದ್ದ ಚಿತ್ರದಲ್ಲಿ ಯುವ ರಾಜ್​ಕುಮಾರ್​? ‘ಹೊಂಬಾಳೆ ಫಿಲ್ಮ್ಸ್​’ ಬಗ್ಗೆ ಹಬ್ಬಿದೆ ಗುಸುಗುಸು

Published On - 1:34 pm, Wed, 6 April 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ