AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Achar and Co: ‘ಪಿಆರ್​ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಆಚಾರ್ & ಕೋ’ ಸಿನಿಮಾ ಜುಲೈ 28ಕ್ಕೆ ಬಿಡುಗಡೆ

Ashwini Puneeth Rajkumar: ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ‘ಪಿ.ಆರ್.ಕೆ ಪ್ರೊಡಕ್ಷನ್ಸ್’ ಮೂಲಕ ‘ಆಚಾರ್ & ಕೋ’ ಚಿತ್ರವನ್ನು ನಿರ್ಮಿಸಿದ್ದಾರೆ. ಸಿಂಧು ಶ್ರೀನಿವಾಸಮೂರ್ತಿ ಅವರು ನಿರ್ದೇಶನ ಮಾಡಿದ್ದಾರೆ.

Achar and Co: ‘ಪಿಆರ್​ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಆಚಾರ್ & ಕೋ’ ಸಿನಿಮಾ ಜುಲೈ 28ಕ್ಕೆ ಬಿಡುಗಡೆ
‘ಆಚಾರ್​ & ಕೋ ಸಿನಿಮಾ’ ಪೋಸ್ಟರ್​
ಮದನ್​ ಕುಮಾರ್​
|

Updated on: Jul 03, 2023 | 9:40 PM

Share

ಪುನೀತ್​ ರಾಜ್​ಕುಮಾರ್​ ಅವರು ಪ್ರಾರಂಭಿಸಿದ ‘ಪಿಆರ್​ಕೆ ಪ್ರೊಡಕ್ಷನ್ಸ್’ (PRK productions) ಸಂಸ್ಥೆಯನ್ನು ಈಗ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈ ಬ್ಯಾನರ್​ ಮೂಲಕ ತಯಾರಾಗಿರುವ ‘ಆಚಾರ್ & ಕೋ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಜುಲೈ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿಂಧು ಶ್ರೀನಿವಾಸಮೂರ್ತಿ ಅವರು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ರೆಟ್ರೋ ಕಾಲದ ಕಥೆ ಇದೆ. ಮಹತ್ವಾಕಾಂಕ್ಷೆ ಹೊಂದಿರುವ ಆ ಜಮಾನಾದ ಸಹೋದರಿಯರ ಕಹಾನಿಯನ್ನು ‘ಆಚಾರ್ & ಕೋ’ ಚಿತ್ರ (Achar & Co Movie) ವಿವರಿಸಲಿದೆ. ಒಂದೆಡೆ ಆಧುನಿಕತೆಯ ಸವಾಲು, ಇನ್ನೊಂದು ಕಡೆ ತಮ್ಮತನವನ್ನೂ ಬಿಟ್ಟುಕೊಡದೇ ಯಶಸ್ವಿಯಾಗುವ ಕುಟುಂಬದವರ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುವುದು. ಇದು ಹೃದಯಸ್ಪರ್ಶಿ ಕಥೆ ಇರುವ ಸಿನಿಮಾ ಎಂದು ಚಿತ್ರತಂಡ ಹೇಳಿಕೊಂಡಿದೆ.

ರೆಟ್ರೋ ಶೈಲಿಯ ಈ ಸಿನಿಮಾದ ಕಥೆ 1960ರ ಕಾಲಘಟ್ಟದ ಬೆಂಗಳೂರಿನಲ್ಲಿ ಸಾಗುತ್ತದೆ. ಆಗಿನ ಕಾಲದ ಒಂದು ಕುಟುಂಬಕ್ಕೆ ಎದುರಾಗುವ ಸಂಪ್ರದಾಯ ವರ್ಸಸ್​ ಆಧುನಿಕತೆ ಎಂಬ ವಾತಾವರಣದ ಬಗ್ಗೆ ಈ ಸಿನಿಮಾದಲ್ಲಿ ವಿವರಿಸಲಾಗಿದೆ. ಈ ಕಥೆಯಲ್ಲಿ ಸೆಂಟಿಮೆಂಟ್​ ಜೊತೆಗೆ ಹಾಸ್ಯಕ್ಕೂ ಜಾಗ ಇರಲಿದೆ. ಸಮಾಜಕ್ಕೊಂದು ಸಂದೇಶವೂ ಸಿಗಲಿದೆ ಎನ್ನುತ್ತಿದೆ ‘ಆಚಾರ್ & ಕೋ’ ಬಳಗ. ರೆಟ್ರೋ ಸಿನಿಮಾವನ್ನು ನಿರ್ಮಿಸುವುದು ಅಷ್ಟು ಸುಲಭವಲ್ಲ. 60 ಹಾಗೂ 70ರ ದಶಕದ ಬೆಂಗಳೂರನ್ನು ತೋರಿಸಲು ​​ಸೂಕ್ತವಾದ ಕಾಸ್ಟ್ಯೂಮ್​ ಡಿಸೈನ್​ ಹಾಗೂ ಕಲಾ ನಿರ್ದೇಶನ ಮಾಡಲಾಗಿದೆ.

ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್​ ನಿವಾಸಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​, ರಾಘಣ್ಣ

ಈ ಸಿನಿಮಾದ ಬಿಡುಗಡೆ ಬಗ್ಗೆ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಮಾತನಾಡಿದ್ದಾರೆ. ‘ಎಲ್ಲಾ ವರ್ಗದ ಪ್ರೇಕ್ಷಕರಿಗೆ ಕನೆಕ್ಟ್​ ಆಗುವಂತಹ ಕಥೆ ಈ ಸಿನಿಮಾದಲ್ಲಿದೆ. ಈ ರೀತಿಯ ವಿಶೇಷ ಸಿನಿಮಾವನ್ನು ನಿರ್ಮಾಣ ಮಾಡಿದ್ದಕ್ಕೆ ಖುಷಿ ಇದೆ. ನೂತನ ಬಗೆಯ ಕಥೆಗಳಿಗೆ ವೇದಿಕೆ ಕಲ್ಪಿಸುತ್ತೇವೆ ಎಂಬ ನಮ್ಮ ಬದ್ಧತೆಯನ್ನು ಈ ಸಿನಿಮಾ ಕೂಡ ಮುಂದುವರಿಸಿಕೊಂಡು ಹೋಗುತ್ತಿದೆ. ಪ್ರತಿಭಾವಂತ ಮಹಿಳಾ ತಂತ್ರಜ್ಞರನ್ನು ಪ್ರೋತ್ಸಾಹಿಸುವ ಮೂಲಕ ಈ ಸಿನಿಮಾ ನಮಗೆ ಹಾಗೂ ಚಿತ್ರರಂಗಕ್ಕೆ ಸ್ಮರಣೀಯವಾಗಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಿಮ್ಮ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ’; ಅಶ್ವಿನಿ ಪುನೀತ್​ ರಾಜ್​ಕುಮಾರ್ ಭಾವುಕ ಪತ್ರ  

​​‘ಆಚಾರ್ & ಕೋ’ ಸಿನಿಮಾದ ಹಲವು ವಿಭಾಗಗಳಲ್ಲಿ ಮಹಿಳೆಯರೇ ಇದ್ದಾರೆ. ನಿರ್ಮಾಪಕರು, ನಿರ್ದೇಶಕರು, ಸೌಂಡ್ ಇಂಜಿನಿಯರ್, ಸಂಗೀತ ನಿರ್ದೇಶಕರು, ವಸ್ತ್ರ ವಿನ್ಯಾಸಕರು, ಮುಖ್ಯ ಪಾತ್ರಧಾರಿಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಮಹಿಳೆಯರೇ ಕೆಲಸ ಮಾಡಿದ್ದಾರೆ. ಆ ಕಾರಣದಿಂದ ಈ ಸಿನಿಮಾ ವಿಶೇಷ ಎನಿಸಿಕೊಳ್ಳುತ್ತಿದೆ. ಬಿಂದುಮಾಲಿನಿ ನಾರಾಯಣಸ್ವಾಮಿ ಅವರ ಸಂಗೀತ ನಿರ್ದೇಶನ, ಇಂಚರಾ ಸುರೇಶ್ ಅವರ ಕಾಸ್ಟ್ಯೂಮ್​ ಡಿಸೈನ್​ ಈ ಚಿತ್ರಕ್ಕಿದೆ. ಹೇಮಾ ಸುವರ್ಣ ಅವರು ಸೌಂಡ್ ಇಂಜಿನಿಯರ್ ಆಗಿ ಕೆಲಸ ಮಾಡಿದ್ದಾರೆ. ವಿಶ್ವಾಸ್ ಕಶ್ಯಪ್ ಅವರ ಕಲಾ ನಿರ್ದೇಶನ, ಅಭಿಮನ್ಯು ಸದಾನಂದ್ ಅವರ ಛಾಯಾಗ್ರಹಣದಲ್ಲಿ ‘ಆಚಾರ್ & ಕೋ’ ಸಿನಿಮಾ ಮೂಡಿಬಂದಿದೆ. ಶೀಘ್ರದಲ್ಲೇ ಈ ಸಿನಿಮಾ ಹಾಡುಗಳು ಮತ್ತು ಟ್ರೇಲರ್​ ಬಿಡುಗಡೆ ಆಗಲಿದೆ. ಸದ್ಯಕ್ಕೆ ಪೋಸ್ಟರ್​ಗಳು ಗಮನ ಸೆಳೆಯುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ