AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಈ ಪ್ರಯಾಣವನ್ನು ಪುನರಾರಂಭಿಸುತ್ತಿದ್ದೇವೆ’; ಪಿಆರ್​ಕೆ ಪ್ರೊಡಕ್ಷನ್​​ನಿಂದ ಭಾವುಕ ಪೋಸ್ಟ್

2017ರ ಜುಲೈ 20ರಂದು ಪಿಆರ್​ಕೆ ಪ್ರೊಡಕ್ಷನ್​ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್​ ಹೌಸ್​ನಿಂದ ಹೊರ ಬಂದ ಮೊದಲ ಸಿನಿಮಾ.

‘ನಮ್ಮ ಈ ಪ್ರಯಾಣವನ್ನು ಪುನರಾರಂಭಿಸುತ್ತಿದ್ದೇವೆ’; ಪಿಆರ್​ಕೆ ಪ್ರೊಡಕ್ಷನ್​​ನಿಂದ  ಭಾವುಕ ಪೋಸ್ಟ್
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Nov 19, 2021 | 8:49 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಭೇಷ್​ ಎನಿಸಿಕೊಂಡಿದ್ದಾರೆ. ಅವರು ಪಿಆರ್​ಕೆ ಪ್ರೊಡಕ್ಷನ್ (PRK Production)​ ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್​ವುಡ್​​ನಲ್ಲಿ ಅವರು ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದರು. ಆದರೆ, ಅವರಿಲ್ಲದೆ ಪಿಆರ್​ಕೆ ಪ್ರೊಡಕ್ಷನ್​ ಬಡವಾಗಿದೆ. ಆದರೆ, ಅವರು ಇಲ್ಲ ಎಂಬ ಸತ್ಯವನ್ನು ಒಪ್ಪಿಕೊಂಡು ಮುಂದೆ ಸಾಗಲೇಬೇಕಿದೆ. ಇದೇ ಮಾತನ್ನು ಪಿಆರ್​ಕೆ ಸ್ಟುಡಿಯೋಸ್​​ ಕಡೆಯಿಂದಲೂ ಬಂದಿದೆ.

2017ರ ಜುಲೈ 20ರಂದು ಪಿಆರ್​ಕೆ ಪ್ರೊಡಕ್ಷನ್​ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್​ ಹೌಸ್​ನಿಂದ ಹೊರ ಬಂದ ಮೊದಲ ಸಿನಿಮಾ. 2019ರಲ್ಲಿ ಈ ಸಿನಿಮಾ ತೆರೆಗೆ ಬಂದಿತ್ತು. ನಂತರ ‘ಮಾಯಾಭಜಾರ್​ 2016’, ಲಾ, ಫ್ರೆಂಚ್​ ಬಿರಿಯಾನಿ ಸಿನಿಮಾಗಳು ಈ ಪ್ರೊಡಕ್ಷನ್​ ಹೌಸ್​ನಿಂದ ಮೂಡಿ ಬಂದಿವೆ. ಇದಲ್ಲದೆ, ಫ್ಯಾಮಿಲಿ ಪ್ಯಾಕ್​, ಮ್ಯಾನ್​ ಆಫ್​ ದಿ ಮ್ಯಾಚ್​, ಓ2 ಸಿನಿಮಾಗಳನ್ನು ಈ ಪ್ರೊಡಕ್ಷನ್​ ಹೌಸ್​ ನಿರ್ಮಾಣ ಮಾಡುತ್ತಿದೆ.

ಪುನೀತ್​ ಬಗ್ಗೆ ಸಾಲುಗಳನ್ನು ಬರೆದುಕೊಂಡಿರುವ ಪಿಆರ್​ಕೆ, ‘ನಮಗೆ ಹಿಂದಿನದನ್ನು ಬದಲಿಸುವುದು ಅಸಾಧ್ಯ. ಆದರೆ ಪುನೀತ್ ರಾಜ್‌ಕುಮಾರ್ ಅವರು ನಮಗೆ ನೀಡಿರುವ ಉತ್ಸಾಹ ಮತ್ತು ಸ್ಫೂರ್ತಿಯೊಂದಿಗೆ ಪಿ.ಆರ್.ಕೆ ಪ್ರೊಡಕ್ಷನ್ಸ್ ಮತ್ತು ಪಿ.ಆರ್.ಕೆ ಆಡಿಯೋದ ಮೂಲಕ ಉಜ್ವಲ ಭವಿಷ್ಯವನ್ನು ರಚಿಸಲು ಎದುರು ನೋಡುತ್ತೇವೆ. ನಮ್ಮ ಈ ಪ್ರಯಾಣವನ್ನು ಪುನರಾರಂಭಿಸುತ್ತ ಅವರ ಕನಸುಗಳನ್ನು ನನಸಾಗಿಸುವಲ್ಲಿ ನಿಮ್ಮ ಬೆಂಬಲವನ್ನು ನಾವು ನಿರೀಕ್ಷಿಸುತ್ತೇವೆ’ ಎಂದಿದೆ.

ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸಿದ್ದು ಪುನೀತ್​ ರಾಜ್​ಕುಮಾರ್​ ಅವರೇ ಆದರೂ ಇದನ್ನು ನೋಡಿಕೊಳ್ಳುವ ಜವಾಬ್ದಾರಿ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ವಹಿಸಿಕೊಂಡಿದ್ದರು. ಹೀಗಾಗಿ, ಅಶ್ವನಿ ಅವರೇ ಪಿಆರ್​ಕೆ ಪ್ರೊಡಕ್ಷನ್​ ಹೌಸ್​ಅನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ. ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಜತೆ ಪಿಆರ್​ಕೆ ಆಡಿಯೋ ಕೂಡ ಇದೆ. ಇವೆರಡ ಸಂಪೂರ್ಣ ಜವಾಬ್ದಾರಿ ಅಶ್ವಿನಿ ಅವರ ಹೆಗಲು ಏರಿದೆ.

ಇದನ್ನೂ ಓದಿ:  ‘ಅಪ್ಪು ಸರ್​ ಜತೆ ನಾನು ವರ್ಕೌಟ್​ ಮಾಡ್ತಿದ್ದೆ’; ಪುನೀತ್​ ಜತೆಗಿನ ನೆನಪು ಹಂಚಿಕೊಂಡ ಮನುರಂಜನ್​

ಕ್ರೌರ್ಯದಲ್ಲಿ ಶಾಂತಿ ಇಷ್ಟಪಡುವ ‘ಮದಗಜ’: ಭರ್ಜರಿ ಸೌಂಡ್​ ಮಾಡುತ್ತಿದೆ ಶ್ರೀಮುರಳಿ ಸಿನಿಮಾ ಟ್ರೇಲರ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ