AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿ ಹರ ವೀರ ಮಲ್ಲು’ ಪೋಸ್ಟರ್ ಹರಿದ ರಕ್ಷಣಾ ವೇದಿಕೆ ಕಾರ್ಯಕರ್ತರು

Hari Hara Veera Mallu: ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಸಹ ಭಾರಿ ದೊಡ್ಡ ಮಟ್ಟದಲ್ಲಿಯೇ ಸಿನಿಮಾ ಬಿಡುಗಡೆ ಆಗಿದೆ. ಆದರೆ ‘ಹರಿ ಹರ ವೀರ ಮಲ್ಲು’ ಸಿನಿಮಾ ಕನ್ನಡಪರ ಹೋರಾಟಗಾರರ ವಿರೋಧ ಎದುರಿಸಿದೆ. ಕನ್ನಡಪರ ಹೋರಾಟಗಾರರು ಸಿನಿಮಾದ ಪೋಸ್ಟರ್ ಹರಿದಿದ್ದಾರೆ.

‘ಹರಿ ಹರ ವೀರ ಮಲ್ಲು’ ಪೋಸ್ಟರ್ ಹರಿದ ರಕ್ಷಣಾ ವೇದಿಕೆ ಕಾರ್ಯಕರ್ತರು
Hari Hara Veera Mallu
ಮಂಜುನಾಥ ಸಿ.
|

Updated on: Jul 24, 2025 | 5:16 PM

Share

ಪವನ್ ಕಲ್ಯಾಣ್ (Pawan Kalyan) ನಟನೆಯ ತೆಲುಗು ಸಿನಿಮಾ ‘ಹರಿ ಹರ ವೀರ ಮಲ್ಲು’ ಇಂದು (ಜುಲೈ 24) ಬಿಡುಗಡೆ ಆಗಿದೆ. ಆಂಧ್ರ, ತೆಲಂಗಾಣ ಸೇರಿದಂತೆ ಕರ್ನಾಟಕ, ತಮಿಳುನಾಡು, ಕೇರಳ, ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಹಾಗೂ ವಿದೇಶಗಳಲ್ಲಿಯೂ ಸಹ ‘ಹರಿ ಹರ ವೀರ ಮಲ್ಲು’ ಸಿನಿಮಾ ಬಿಡುಗಡೆ ಆಗಿದೆ. ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳಿದ್ದು, ದೊಡ್ಡ ಮಟ್ಟದಲ್ಲಿಯೇ ಸಿನಿಮಾ ಇಂದು ಬಿಡುಗಡೆ ಕಂಡಿದೆ.

ಆದರೆ ‘ಹರಿ ಹರ ವೀರ ಮಲ್ಲು’ ಸಿನಿಮಾ ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರರ ಆಕ್ರೋಶವನ್ನು ಎದುರುಗೊಂಡಿದೆ. ‘ಹರಿ ಹರ ವೀರ ಮಲ್ಲು’ ಸಿನಿಮಾ ಬಿಡುಗಡೆ ಆಗಿದ್ದ ಬೆಂಗಳೂರಿನ ಚಿತ್ರಮಂದಿರದ ಒಂದರ ಮೇಲೆ ದಾಳಿ ಮಾಡಿದ್ದ ಕನ್ನಡ ಪರ ಹೋರಾಟಗಾರರು, ಸಿನಿಮಾದ ಪೋಸ್ಟರ್ ಹರಿದು ಹಾಕಿದ್ದಾರೆ. ಸಿನಿಮಾದ ಪೋಸ್ಟರ್ ತೆಲುಗಿನಲ್ಲಿದೆಯೆಂದು, ಸಿನಿಮಾದ ಯಾವುದೇ ಪೋಸ್ಟರ್​​ ಕನ್ನಡದಲ್ಲಿ ಇಲ್ಲವೆಂದು ಚಿತ್ರಮಂದಿರದವರ ಜೊತೆಗೆ ವಾಗ್ವಾದ ಮಾಡಿದ್ದು, ಪವನ್ ಕಲ್ಯಾಣ್ ಅವರ ದೊಡ್ಡ ಪೋಸ್ಟರ್ ಒಂದನ್ನು ಹರಿದು ಹಾಕಿದ್ದಾರೆ.

ಪವನ್ ಕಲ್ಯಾಣ್ ಪೋಸ್ಟರ್ ಹರಿಯುವ ವೇಳೆ ಅಲ್ಲಿಯೇ ಇದ್ದ ಕೆಲ ಪವನ್ ಕಲ್ಯಾಣ್ ಅಭಿಮಾನಿಗಳು ವಿರೋಧಿಸಿದ್ದು, ಅವರೊಟ್ಟಿಗೆ ಕನ್ನಡಪರ ಹೋರಾಟಗಾರರು ವಾಗ್ವಾದ ಮಾಡಿದ್ದಾರೆ. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಯಾವ ಚಿತ್ರಮಂದಿರದ ಬಳಿಕ ಹೀಗೊಂದು ಘಟನೆ ನಡೆದಿದೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಆದರೆ ಕನ್ನಡಪರ ಹೋರಾಟಗಾರರ ಪೋಸ್ಟರ್ ಹರಿದಿರುವ ವಿಡಿಯೋ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ:‘ಹರಿ ಹರ ವೀರ ಮಲ್ಲು’ ಫಸ್ಟ್​ ಹಾಫ್ ವಿಮರ್ಶೆ

‘ಹರಿ ಹರ ವೀರ ಮಲ್ಲು’ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕನ್ನಡದಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ. ಆದರೆ ಬೆಂಗಳೂರಿನಲ್ಲಿ ಸಿನಿಮಾದ ಕನ್ನಡ ಆವೃತ್ತಿಗೆ ಸಿಕ್ಕಿರುವುದು ಎರಡು ಚಿತ್ರಮಂದಿರ ಮತ್ತು ಆರು ಶೋಗಳು ಮಾತ್ರವೇ. ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಸಿನಿಮಾ ಬಿಡುಗಡೆ ಆಗಿದ್ದು, ಬಹುತೇಕ ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್​ಗಳು ತೆಲುಗು ಭಾಷೆಯಲ್ಲಿಯೇ ಸಿನಿಮಾ ಬಿಡುಗಡೆ ಮಾಡಿವೆ. ಸಿನಿಮಾದ ಪ್ರಚಾರದ ಪೋಸ್ಟರ್​ಗಳು ಸಹ ತೆಲುಗಿನಲ್ಲೆಯೇ ಇವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!